ಚಿಕ್ಕಬಳ್ಳಾಪುರದಲ್ಲಿ ವೀರಪ್ಪ ಮೋಯ್ಲಿ ವಿರುದ್ಧ #goback ಅಭಿಯಾನ
ಚಿಕ್ಕಬಳ್ಳಾಪುರ, ಮಾರ್ಚ್ 15: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ನ ಹಾಲಿ ಸಂಸದ ವೀರಪ್ಪ ಮೊಯ್ಲಿ ವಿರುದ್ಧ ಕ್ಷೇತ್ರದಲ್ಲಿ ಅಸಹನೆ ವ್ಯಕ್ತವಾಗುತ್ತಿದ್ದು, ಕಾಂಗ್ರೆಸ್ಗೆ ಸಹಜವಾಗಿಯೇ ಆತಂಕ ಮೂಡಿಸಿದೆ.
ವೀರಪ್ಪ ಮೊಯ್ಲಿ ಅವರು ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಎರಡು ಬಾರಿ ಸ್ಪರ್ಧಿಸಿ ಜಯಗಳಸಿದ್ದು, ಮೂರನೇ ಬಾರಿಗೆ ಅಖಾಡಕ್ಕೆ ಇಳಿಯುತ್ತಿದ್ದಾರೆ. ಆದರೆ ಈ ಬಾರಿ ಕ್ಷೇತ್ರದಲ್ಲಿ ಆಡಳಿತವಿರೋಧಿ ಅಲೆ ಇದ್ದಂತೆ ತೋರುತ್ತಿದೆ.
ವೀರಪ್ಪ ಮೋಯ್ಲಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವೀರಪ್ಪ ಮೋಯ್ಲಿ ಅವರು ವಿರುದ್ಧ #goback ಅಭಿಯಾನ ನಡೆಯುತ್ತಿದ್ದು, ಮೊಯ್ಲಿ ಸೋಲಿಸಿ ಚಿಕ್ಕಬಳ್ಳಾಪುರ ಉಳಿಸಿ ಎಂದು ಸಹ ಕೆಲವರು ಪೋಸ್ಟ್ಗಳನ್ನು ಹಾಕುತ್ತಿದ್ದಾರೆ.

ಎರಡು ಬಾರಿ ಗೆದ್ದಿದ್ದಾರೆ ಮೊಯ್ಲಿ
ವೀರಪ್ಪ ಮೊಯ್ಲಿ ಅವರು ಮೊದಲ ಬಾರಿಗೆ 2009ರಲ್ಲಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು, ಯುಪಿಎ ಸರ್ಕಾರದಲ್ಲಿ ಕಾನೂನು ಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು. ನಂತರ 2014 ರಲ್ಲಿ ಬಿ.ಎನ್.ಬಚ್ಚೇಗೌಡ, ಕುಮಾರಸ್ವಾಮಿ ಅವರಂತಹಾ ಎದುರಾಳಿಗಳ ನಡುವೆಯೂ 9500 ಮತಗಳ ಅಂತರದಿಂದ ಜಯಶಾಲಿಯಾಗಿದ್ದರು. ಈ ಬಾರಿ ಸಹ ಅವರು ಚುನಾವಣೆಗೆ ಸ್ಪರ್ಧಿಸುವುದು ಬಹುತೇಕ ಖಚಿತ.

ಎತ್ತಿನ ಹೊಳೆಯ ಹುಸಿ ಕನಸು
ಮೊಯ್ಲಿ ಅವರು 2014ರ ಚುನಾವಣೆ ಸಮಯದಲ್ಲಿ ಎತ್ತಿನಹೊಳೆ ಯೋಜನೆಗೆ ಆತುರವಾಗಿ ಶಂಕುಸ್ಥಾಪನೆ ಮಾಡಿ, ಬಯಲುಸೀಮೆಗೆ ಸೀರು ಹರಿಸುವ ಕನಸನ್ನು ತೋರಿಸಿದ್ದರು. ಆದರೆ ಶಂಕುಸ್ಥಾಪನೆ ಆಗಿ ಐದುವರೆ ವರ್ಷ ಆದರೂ ಸಹ ಕಾಮಗಾರಿ ಶುರುವಾದ ಕಡೆಯಲ್ಲಿಯೇ ನಿಂತಿದೆ. ಇದು ಕ್ಷೇತ್ರದ ಜನರಲ್ಲಿ ಆಕ್ರೋಶ ಹೆಚ್ಚಿಸಿದೆ.

'ಕಾಂಗ್ರೆಸ್ ಗೆ ಮತ ಮೊಯ್ಲಿಗಲ್ಲ'
ಮೊಯ್ಲಿ ವಿರೋಧಿಗಳ ಜೊತೆಗೆ ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತರು ಮೊಯ್ಲಿ ಬೆಂಬಲಕ್ಕೆ ನಿಂತಿದ್ದಾರೆ. ಆದರೆ ಅವರು ಸಹ ಕಾಂಗ್ರೆಸ್ ಪಕ್ಷಕ್ಕೆ ಮತನೀಡುವಂತೆ ಕೇಳುತ್ತಿದ್ದಾರೆಯೇ ಹೊರತು. ಮೊಯ್ಲಿ ಅವರ ಪರ ನೇರವಾಗಿ ನಿಲ್ಲುತ್ತಿಲ್ಲ.

ಮೈತ್ರಿ ಕಾರಣ ಗೆಲ್ಲುವ ಸಾಧ್ಯತೆ ಇದೆ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಆಗಿರುವ ಕಾರಣ ಮೊಯ್ಲಿ ಅವರು ಈ ಬಾರಿಯೂ ಗೆಲ್ಲುವ ಸಾಧ್ಯತೆ ಇದೆ. ಆದರೆ ಕ್ಷೇತ್ರದಲ್ಲಿ ಇರುವ ಮೊಯ್ಲಿ ವಿರೋಧಿ ಅಲೆ ಹೋರಾಗಿಯೇ ಇದೆ. ಜೊತೆಗೆ ಬಿಜೆಪಿಯ ಬಚ್ಚೇಗೌಡ ಅವರು ಕಳೆದ ಬಾರಿ ಸೋತಿರುವ ಅಭ್ಯರ್ಥಿ, ಜೊತೆಗೆ ಅವರ ಪುತ್ರ ವಿಧಾನಸಭೆ ಚುನಾವಣೆಯಲ್ಲಿ ಸಹ ಸೋತಿದ್ದಾರೆ ಹಾಗಾಗಿ ಅವರ ಪರ ಅನುಕಂಪ ಕೆಲಸ ಮಾಡುವ ಸಾಧ್ಯತೆಯೂ ಇದೆ.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications