Veerappa Moily: ಹೆಚ್ಡಿಕೆ ಸಹವಾಸ ಮಾಡಿದರೆ ಉದ್ಧಾರ ಆಗಲ್ಲ: ಎಚ್ಡಿಕೆ ಅಧಿಕಾರಕ್ಕಾಗಿ ಯಾರ ಬಳಿ ಬೇಕಾದರೂ ಹೋಗುತ್ತಾರೆ- ಮೊಯ್ಲಿ
ಚಿಕ್ಕಬಳ್ಳಾಪುರ ಜನವರಿ 31: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಅಧಿಕಾರಕ್ಕಾಗಿ ಯಾರ ಬಳಿಗಾದರೂ ಹೋಗುತ್ತಾರೆ. ಯಾರಿಗಾದರೂ ನಮಸ್ಕರಿಸುತ್ತಾರೆ. ಅವರನ್ನು ಒಪ್ಪಿಕೊಂಡವರು ಗುಂಡಿಗೆ ಬೀಳುವುದಂತು ಖಚಿತ ಏಕೆಂದರೆ ಕುಮಾರಸ್ವಾಮಿಯವರ ಸಹವಾಸ ಮಾಡಿದವರು ಯಾರೂ ಉದ್ಧಾರವಾದ ಇತಿಹಾಸ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ ವ್ಯಂಗ್ಯವಾಡಿದ್ದಾರೆ.
ನಗರದ ಗುರುರಾಜ ಕಲ್ಯಾಣ ಮಂಟಪದಲ್ಲಿ ಯಲವಹಳ್ಳಿ ಎನ್.ರಮೇಶ್ ಏರ್ಪಡಿಸಿದ್ದ ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಭಾಗಿ ವೇಳೆ ಸುದ್ದಿಗಾರರ ಜತೆ ಅವರು ಮಾತನಾಡಿದರು.

ರಾಜ್ಯದಲ್ಲಿ ಮುಂಬರುವ ಲೋಕಸಭೆ ಚುನಾವಣೆ ಯಲ್ಲಿ ಕಾಂಗ್ರೆಸ್ ಅಧಿಕ ಸ್ಥಾನಗಳನ್ನು ಗಳಿಸುತ್ತದೆ. ಆದರೆ, ಇಷ್ಟೇ ಸ್ಥಾನ ಗಳಿಸುತ್ತದೆ ಎಂದು ಖಚಿತವಾಗಿ ಭವಿಷ್ಯ ಹೇಳುವುದಕ್ಕೆ ಬರಲ್ಲ. ರಾಜ್ಯದಲ್ಲಿ ಬಿಜೆಪಿ ಮತ್ತು ಜಾತ್ಯತೀತ ಜನತಾದಳ ಪಕ್ಷ ಚುನಾವಣೆ ರಾಜಕೀಯ ಹೊಂದಾಣಿಕೆ ಮಾಡಿಕೊಂಡಿರುವ ಬಗ್ಗೆ ಅಧಿಕಾರಕ್ಕಾಗಿ ಏನು ಬೇಕಾದರೂ ಅವರು ಮಾತ ನಾಡುತ್ತಾರೆ. ಆದರೆ, ಅವರಿಗೆ ನಷ್ಟವಾಗುವುದು ಖಚಿತ ಎಂದರು.
ನಾನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಎರಡು ಬಾರಿ ಪ್ರತಿನಿಧಿಸಿ ಕೇಂದ್ರದಲ್ಲಿ ಹಲವು ಖಾತೆಗಳನ್ನು ನಿಭಾಯಿಸಿದ್ದೇನೆ. ಮುಂಬರುವ 2024ರ ಚುನಾವಣೆಯಲ್ಲಿ ನನಗೆ ಟಿಕೆಟ್ ನೀಡಿ ಅವಕಾಶ ಮಾಡಿಕೊಟ್ಟರೆ ಕ್ಷೇತ್ರದ ಜನತೆ ನಾನು ಹಿಂದೆ ಮಾಡಿರುವ ಯೋಜನೆಗಳ ಜನಪರ ಕಾರಣ ದಿಂದ ನನ್ನನ್ನು ಬೆಂಬಲಿಸುವರು ಎಂದರು.
ಕುಮಾರಸ್ವಾಮಿಯವರ ತಂದೆಯವರ ಜೊತೆ ನಾನು ಚೆನ್ನಾಗಿ ಇದ್ದ ಕಾಲವೂ ಇದೆ. ಅದೇ ಪ್ರಕಾರ ಕಷ್ಟ ನಷ್ಟ ಅನುಭವಿಸಿದ್ದು ಇದೆ. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಕುಮಾರಸ್ವಾಮಿ ಜೊತೆ ಬಹಳ ಜನ ಸ್ನೇಹ ಮಾಡಿದ್ರು, ಯಾರೂ ಉದ್ಧಾರ ಆಗಿಲ್ಲ. ಅವರ ಜೊತೆ ಸ್ನೇಹ ಮಾಡಿದವರು ಗುಂಡಿಗೆ ಬೀಳುತ್ತಾರೆ. ಬಿಜೆಪಿ (BJP) ಉದ್ಧಾರ ಆಗುವುದಾದರೆ ಆಗಲಿ ಎಂದಿದ್ದಾರೆ.
ವಿಶ್ವದ ಇತರ ಎಲ್ಲ ರಾಷ್ಟ್ರಗಳಲ್ಲಿ ರಾಜಕಾರಣದ ಮೇಲೆ ಧರ್ಮ ಪ್ರಭಾವ ಬೀರುವುದು ಕಡಿಮೆ ಆಗುತ್ತಿದೆ. ಆದರೆ ಭಾರತ ದೇಶದಲ್ಲಿ ದುರ ದೃಷ್ಟಾವಶಾತ್ ರಾಜಕಾರಣದ ಮೇಲೆ ಧರ್ಮದ ಪ್ರಭಾವ ಹೆಚ್ಚುತ್ತಿದೆ. ಇದು ಪ್ರಜಾ ಪ್ರಭುತ್ವಕ್ಕೆ ಮಾರಕ ಎಂದು ಹೇಳಿದರು.
ನರೇಂದ್ರ ಮೋದಿ ಅವರ ಉಪವಾಸದ ಬಗ್ಗೆ ನಾನು ಹೇಳಿರುವ ಹೇಳಿಕೆಯನ್ನು ತಿರುಚಿ ಪ್ರಚಾರ ಮಾಡಲಾಗುತ್ತಿದೆ. ಡಾಕ್ಟರ್ಗಳು ಹೇಳಿರುವುದನ್ನು ನಾನು ಹೇಳಿದ್ದೇನೆ ಹೊರತು ಮೋದಿ ಅವರು 11 ದಿನ ಮಾಡಿದ ಉಪವಾಸದ ಬಗ್ಗೆ ಪ್ರತಿಕ್ರಿಯೆ ನನ್ನ ಸ್ವಂತದಲ್ಲ ಎಂದರು. ನಿತೀಶ್ ಕುಮಾರ್ ಅವರು ಮಹಾ ಘಟಬಂಧನ್ ಇಂದ ದೂರವಾದ್ದರಿಂದ ಘಟಬಂಧನ್ಗೆ ಯಾವುದೇ ತೊಂದರೆ ಆಗುವುದಿಲ್ಲ ಅವರು ಇಂದಲ್ಲ ನಾಳೆ ಆದರೂ ಹೋಗುವವರೇ ಆಗಿದ್ದರು ಎಂದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications