ಶಿಡ್ಲಘಟ್ಟದಲ್ಲಿ ₹185 ಕೋಟಿ ವೆಚ್ಚದ ಹೈಟೆಕ್ ರೇಷ್ಮೆ ಮಾರ್ಕೆಟ್ ನಿರ್ಮಿಸಲು ಕ್ರಮ: ರೇಷ್ಮೆ ಸಚಿವ
ಚಿಕ್ಕಬಳ್ಳಾಪುರ, ಅಕ್ಟೋಬರ್, 06: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ ಹೊರವಲಯದಲ್ಲಿ 185 ಕೋಟಿ ವೆಚ್ಚದಲ್ಲಿ ಮುಂದಿನ ವರ್ಷದ ವೇಳೆಗೆ ಹೈಟೆಕ್ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ನಿರ್ಮಿಸುವ ಉದ್ದೇಶವಿದ್ದು, ಆ ಸಂಬಂಧ ಇಂದು ಸ್ಥಳ ಗುರುತಿಸಲಾಗಿದೆ. ಸದ್ಯದಲ್ಲೆ ಕಾಮಗಾರಿ ಆರಂಭವಾಗಲಿದೆ ಎಂದು ರೇಷ್ಮೆ ಹಾಗೂ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರು ತಿಳಿಸಿದರು.
ಅವರು ಗುರುವಾರ ಶಿಡ್ಲಘಟ್ಟ ನಗರದ ಹೊರವಲಯದ ಹನುಮಂತಪುರ ಗ್ರಾಮದ ಸರ್ವೇ ನಂ 19ರ ಸರ್ಕಾರಿ ಜಮೀನಿಗೆ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದರು. ರೇಷ್ಮೆ ಗೂಡಿನ ಮಾರುಕಟ್ಟೆ ನಿರ್ಮಿಸುವುದು ಈ ಭಾಗದ ರೈತರ ಬಹುದಿನದ ಬೇಡಿಕೆ ಆಗಿತ್ತು. ಇದನ್ನು ಮನಗಂಡ ಸರ್ಕಾರ 2023-24 ಸಾಲಿನ ಆಯವ್ಯಯದಲ್ಲಿ ಶಿಡ್ಲಘಟ್ಟ ನಗರದಲ್ಲಿ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆ ನಿರ್ಮಿಸಲು 75 ಕೋಟಿ ಅನುದಾನವನ್ನು ಮಿಸಲಿಟ್ಟಿತ್ತು ಎಂದರು.

ಈ ಯೋಜನೆಗೆ ಒಟ್ಟು 185 ಅನುದಾನದ ಅವಶ್ಯಕತೆ ಇದ್ದು, ಪ್ರಸ್ತುತ ಮೊದಲನೇ ಹಂತದಲ್ಲಿ 80 ಕೋಟಿ ಅನುದಾನದಲ್ಲಿ ಕೆಲಸ ಆರಂಭ ಆಗಲಿದೆ. ಮುಂದಿನ ವರ್ಷದಲ್ಲಿ ಉಳಿಕೆ ಅನುದಾನವನ್ನು ಒದಗಿಸಿ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಸದ್ಯದಲ್ಲೇ ಮಾರುಕಟ್ಟೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಲಿದೆ ಎಂದು ತಿಳಿಸಿದರು.
ಪ್ರಸ್ತುತ ಹನುಮಂತಪುರ ಗ್ರಾಮದ ಬಳಿ ಗುರುತಿಸಿರುವ ಜಾಗ 15 ಎಕರೆ ವಿಸ್ತೀರ್ಣವನ್ನು ಹೊಂದಿದ್ದು, ನಗರಕ್ಕೆ ಸಮೀಪ ಇರುವುದರಿಂದ ರೇಷ್ಮೆ ಗೂಡನ್ನು ರೈತರು ಮಾರುಕಟ್ಟೆಗೆ ತರಲು ಅನುಕೂಲ ಆಗುತ್ತದೆ. ರೇಷ್ಮೆ ವಹಿವಾಟಿಗೂ ಸಹಕಾರಿ ಆಗುತ್ತದೆ. ಮುಂದಿನ ದಿನಗಳಲ್ಲಿ ಆನ್ಲೈನ್ ವ್ಯವಸ್ಥೆ ಮೂಲಕ ವಹಿವಾಟು ನಡೆಯುವುದರಿಂದ ಅದಕ್ಕೆ ಪೂರಕವಾಗಿ ಮಾರುಕಟ್ಟೆಯನ್ನು ರೈತರು ಮತ್ತು ವ್ಯಾಪರಸ್ಥರಿಗೆ ಅನುಕೂಲ ಆಗುವ ರೀತಿಯಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾಗುವುದು ಎಂದು ಮಾಹಿತಿ ನೀಡಿದರು.
ಈ ವೇಳೆ ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ, ನೂತನ ರೇಷ್ಮೆ ಗೂಡಿನ ಮಾರುಕಟ್ಟೆ ನಿರ್ಮಿಸಲು ಸಹಕಾರ ನೀಡಿದ ರೈತರಿಗೆ ಪರ್ಯಾಯ ಭೂಮಿ ಹಾಗೂ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತದೆ. ಈ ಕಾರ್ಯಕ್ಕೆ ಸಹಕಾರ ನೀಡಿದ ಎಲ್ಲ ರೈತರಿಗೆ ಧನ್ಯವಾದಗಳನ್ನು ಸಚಿವರು ತಿಳಿಸಿದರು. ಸ್ಥಳೀಯ ಶಾಸಕರು, ಅಧಿಕಾರಿಗಳು, ಜಿಲ್ಲಾಧಿಕಾರಿಯವರು ಹೆಚ್ಚು ಮುತುವರ್ಜಿವಹಿಸಿ ಸೂಕ್ತ ಜಾಗವನ್ನು ಗುರುತಿಸಿದ್ದಾರೆ ಎಂದು ತಿಳಿಸಿದರು.
ಈ ವೇಳೆ ಶಿಡ್ಲಘಟ್ಟ ಶಾಸಕ ರವಿಕುಮಾರ್ ಮಾತನಾಡಿ, ಶಿಡ್ಲಘಟ್ಟ ತಾಲೂಕಿನಲ್ಲಿ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ನಿರ್ಮಿಸಲು ಮುಂದಾಗಿರುವ ಸರ್ಕಾರಕ್ಕೆ ಹಾಗೂ ಈ ನಿಟ್ಟಿನಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಕಾರ್ಯಪ್ರವೃತ್ತರಾಗಿರುವ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳಿಗೆ ಧನ್ಯವಾದಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಕಾಧಿಕಾರಿ ಪ್ರಕಾಶ್ ಜಿ.ಟಿ.ನಿಟ್ಟಾಲಿ, ತಹಶೀಲ್ದಾರ್ ಅನಿಲ್ ಕುಮಾರ್, ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications