ನಾನು ಈಗಲೂ ಸಿದ್ದರಾಮಯ್ಯ ಬೆಂಬಲಿಗ: ಅನರ್ಹ ಶಾಸಕ
ಚಿಕ್ಕಬಳ್ಳಾಪುರ, ಅಕ್ಟೋಬರ್ 02: ಸಿದ್ದರಾಮಯ್ಯ ಮನವಿಗೆ ವ್ಯತಿರಿಕ್ತವಾಗಿ ರಾಜೀನಾಮೆ ನೀಡಿದ್ದ ಅನರ್ಹ ಶಾಸಕ ಡಾ.ಕೆ.ಸುಧಾಕರ್, 'ನಾನು ಈಗಲೂ ಸಿದ್ದರಾಮಯ್ಯ ಕಟ್ಟಾ ಬೆಂಬಲಿಗ' ಎಂದು ಹೇಳಿದ್ದಾರೆ.
ಚಿಕ್ಕಬಳ್ಳಾಪುರ ವಿಧಾನಭಾ ಕ್ಷೇತ್ರ ಉಪಚುನಾವಣೆ ನಿಮಿತ್ತ ಪ್ರಚಾರ ನಡೆಸಿದ ಅವರು, 'ಸಿದ್ದರಾಮಯ್ಯ ಬೆಂಬಲಿಗನಾಗಿದ್ದೆ, ಈಗಲೂ ಸಿದ್ದರಾಮಯ್ಯ ಬೆಂಬಲಿಗನೇ ಆದರೆ ಮೈತ್ರಿ ಸರ್ಕಾರದಲ್ಲಿ ಉಸಿರುಗಟ್ಟಿಸುವ ವಾತಾವರಣ ಇದ್ದ ಕಾರಣ ರಾಜೀನಾಮೆ ನೀಡಿದೆ' ಎಂದು ರಾಜೀನಾಮೆಗೆ ಕಾರಣ ನೀಡಿದ್ದಾರೆ.
37 ಸ್ಥಾನ ಗೆದ್ದಿದ್ದ ಜೆಡಿಎಸ್ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟು ತಪ್ಪು ಮಾಡಿದೆವು, ಕಾಂಗ್ರೆಸ್ಗೆ ಸಿಎಂ ಸ್ಥಾನ ಸಿಗಬೇಕಿತ್ತು, ಸಿಎಂ ಸ್ಥಾನ ಕೊಟ್ಟ ಕಾಂಗ್ರೆಸ್ಗೆ ಋಣವಾಗಿ ಇರುವ ಬದಲಿಗೆ, ಕಾಂಗ್ರೆಸ್ ಶಾಸಕರನ್ನೇ ಕುಮಾರಸ್ವಾಮಿ ಟಾರ್ಗೆಟ್ ಮಾಡಿದರು ಎಂದು ಸುಧಾಕರ್ ಹೇಳಿದರು.
ಮೈತ್ರಿ ಸರ್ಕಾರದ ಆಡಳಿತ ವಿಫಲತೆ ಮತ್ತು ಅಭಿವೃದ್ಧಿಯ ವಿಫಲತೆಯಿಂದಾಗಿಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದೆ ಎಂದು ಸುಧಾಕರ್ ಹೇಳಿದರು.
ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಪಡೆದು ಶಾಸಕರಾಗಿ ಆಯ್ಕೆ ಆಗಿದ್ದ ಸುಧಾಕರ್ ಅವರು ಆ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಪಕ್ಷಾಂತರ ತಡೆ ಕಾಯ್ದೆ ಅಡಿ ಅವರನ್ನು ಅನರ್ಹಗೊಳಿಸಲಾಗಿದೆ. ಪ್ರಸ್ತುತ ಅವರ ಪ್ರಕರಣ ಸುಪ್ರೀಂಕೋರ್ಟ್ನಲ್ಲಿದೆ.