ಬಿಜೆಪಿಯ ಗಂಡಸ್ತನಕ್ಕೆ ನೇರ ಸವಾಲು ಹಾಕಿದ ಹಿರಿಯ ಕಾಂಗ್ರೆಸ್ ಮುಖಂಡ
ಚಿಕ್ಕಬಳ್ಳಾಪುರ, ಆ 4: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕಾನೂನು ಸಚಿವ ಟಿ.ಬಿ.ಜಯಚಂದ್ರ, ಕೋವಿಡ್ 19 ಉಪಕರಣ ಖರೀದಿ ಸಂಬಂಧದ ಅಕ್ರಮದ ಆರೋಪದ ವಿಚಾರದಲ್ಲಿ ನೇರವಾಗಿ ಬಿಜೆಪಿಗೆ ಸವಾಲು ಹಾಕಿದ್ದಾರೆ.
"ಮೊದಲು ನ್ಯಾಯಾಲಯಕ್ಕೆ ಬಂದು ಪ್ರಧಾನಿ ಮೋದಿ ಪಿಎಂ ಕೇರ್ ನಿಧಿಯ ಲೆಕ್ಕವನ್ನು ಕೊಡಲಿ" ಎಂದು ಸವಾಲು ಹಾಕಿರುವ ಜಯಚಂದ್ರ, "ಬಿಜೆಪಿಯವರು ನೊಟೀಸ್ ಕೊಟ್ಟರೆ ನಾವೇನೂ ಭಯ ಪಡುತ್ತೇವಾ"ಎಂದು ಪ್ರಶ್ನಿಸಿದ್ದಾರೆ.
"ಬಿಜೆಪಿಯವರು ನೊಟೀಸ್ ಕೊಟ್ಟು ನಮ್ಮ ಬಾಯನ್ನು ಮುಚ್ಚಿಸಬಹುದು ಎನ್ನುವ ಕನಸನ್ನು ಕಾಣುವುದು ಬೇಡ. ಅವರಿಗೆ ಗಂಡಸ್ತನವಿದ್ದರೆ, ನ್ಯಾಯಾಲಯಕ್ಕೆ ಹೋಗಲಿ"ಎಂದು ಜಯಚಂದ್ರ ಹೇಳಿದರು.

"ಕೋವಿಡ್ ಉಪಕರಣ ಖರೀದಿಯಲ್ಲಿ ಏನೆಲ್ಲಾ ಅವ್ಯವಹಾರ ನಡೆದಿದೆ ಎನ್ನುವುದನ್ನು ನಾವು ದಾಖಲೆ ಸಮೇತ ನ್ಯಾಯಾಲಯಕ್ಕೆ ಹಾಜರು ಪಡಿಸುತ್ತೇವೆ. ಬಿಜೆಪಿಯ ಎಲ್ಲಾ ಅಕ್ರಮಗಳನ್ನು ಕೋರ್ಟಿನಲ್ಲಿ ಸಾಬೀತು ಪಡಿಸುತ್ತೇವೆ"ಎಂದು ಜಯಚಂದ್ರ, ಸರಕಾರದ ವಿರುದ್ದ ಕೆಂಡಾಮಂಡಲವಾಗಿದ್ದಾರೆ.
"ನಮ್ಮ ಪ್ರಶ್ನೆಗಳಿಗೆ ಉತ್ತರವಿಲ್ಲದೇ ಬಿಜೆಪಿಯವರು ನೊಟೀಸ್ ನೀಡಿದ್ದಾರೆ. ತಪ್ಪು ಮಾಡಿಲ್ಲಾ ಎಂದಾದರೆ, ನ್ಯಾಯಾಲಯಕ್ಕೆ ಹೋಗುವುದನ್ನು ಬಿಟ್ಟು, ನೊಟೀಸ್ ಕೊಟ್ಟರೆ ನಾವು ಭಯ ಪಡುತ್ತೇವಾ"ಎಂದು ಟಿ.ಬಿ.ಜಯಚಂದ್ರ ಸವಾಲು ಹಾಕಿದ್ದಾರೆ.
"ಅಕ್ರಮ ಪ್ರಶ್ನಿಸಿದ ನಮಗೆ ವಕೀಲರ ಮೂಲಕ ನೋಟೀಸ್ ಕೊಟ್ಟು @BJP4Karnataka ನಮ್ಮ ಕೆಲಸವನ್ನು ಸುಲಭ ಮಾಡಿದೆ. ನಾವೇ ನ್ಯಾಯಾಲಯದ ಮೆಟ್ಟಿಲು ಹತ್ತಬೇಕೆಂದಿದ್ದೆವು. ನಮಗೆ ನೀಡದ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಲೇ ಬೇಕಲ್ಲಾ? ಕೋರ್ಟ್ ನಲ್ಲಿಯಾದರೂ ನಮ್ಮನ್ನು ಎದುರಿಸಲೇ ಬೇಕಲ್ಲಾ?"ಎಂದು ಸಿದ್ದರಾಮಯ್ಯ ಕೂಡಾ ಟ್ವೀಟ್ ಮಾಡಿದ್ದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications