ವಿಧುರಾಶ್ವಥದಲ್ಲಿ ಉತ್ತರ ಪಿನಾಕಿನಿ ನದಿ ನೀರು ಸಂಗ್ರಹಿಸಿದ ನಿಖಿಲ್
ಚಿಕ್ಕಬಳ್ಳಾಪುರ, ಏಪ್ರಿಲ್ 16: ಜನತಾ ಜಲಧಾರೆ ಗಂಗಾ ರಥಯಾತ್ರೆ ಕಾರ್ಯಕ್ರಮದಡಿಯಲಿ, ಜಿಲ್ಲೆಯ ಗೌರಿಬಿದನೂರಿನ ವಿಧುರಾಶ್ವಥದಲ್ಲಿ ಉತ್ತರ ಪಿನಾಕಿನಿ ನದಿ ನೀರು ಸಂಗ್ರಹವನ್ನು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಂಗ್ರಹಿಸಿದರು.
ಗೌರಿಬಿದನೂರು ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ಮಾತನಾಡುತ್ತಾ, "ಇಂದು ರಾಜ್ಯದ 15 ಕಡೆ ಜಲಧಾರೆ ಕಾರ್ಯಕ್ರಮ ನಡೆಯುತ್ತಿದೆ. ನಾನು ಗೌರಿಬಿದನೂರಿನ ಕಾರ್ಯಕ್ರಮಕ್ಕೆ ಬಂದಿದ್ದು ಸಂತೋಷವಾಗಿದೆ. ಜನತಾ ಜಲಧಾರೆ ಕಾರ್ಯಕ್ರಮ ಕುಮಾರಸ್ವಾಮಿ ಅವರ ಪರಿಕಲ್ಪನೆಯ ಕಾರ್ಯಕ್ರಮ"ಎಂದು ನಿಖಿಲ್ ಹೇಳಿದರು.
"ರಾಜ್ಯದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ಸರಿಯಾಗಿ ಆಗಿಲ್ಲ, ರಾಜ್ಯದ ಕುಡಿಯುವ ನೀರಿನ ಯೋಜನೆ ಸೇರಿದಂತೆ ಹಲವಾರು ಯೋಜನೆಗಳು ಜಾರಿಯಾಗಬೇಕು ಅಂದರೆ ಜೆಡಿಎಸ್ ಅಧಿಕಾರಕ್ಕೆ ಬರಬೇಕು"ಎಂದು ನಿಖಿಲ್ ಅಭಿಪ್ರಾಯ ಪಟ್ಟರು.

"ಕುಮಾರಸ್ವಾಮಿಯವರು ರೈತರ ಸಾಲ ಮನ್ನಾ ಮಾಡಿದ್ದು ಎಲ್ಲರಿಗೂ ಗೊತ್ತಿದೆ. ಅದೇ ರೀತಿ ರಾಜ್ಯಕ್ಕೆ ಒಳ್ಳೆಯ ಯೋಜನೆಗಳನ್ನು ಜೆಡಿಎಸ್ ಕೊಡಲಿದೆ, ನೀವು ನಮಗೆ ಬೆಂಬಲ ಕೊಡಬೇಕು. ರಾಜ್ಯದಲ್ಲಿ ಸಾಮರಸ್ಯ ಕೆಡುತ್ತಿದೆ, ಇಂತಹ ಪರಿಸ್ಥಿತಿ ಬರಲು ಭಜರಂಗದಳ ಸೇರಿದಂತೆ ಹಲವರು ಕಾರಣ"ಎಂದು ನಿಖಿಲ್ ಹೇಳಿದರು.
"ಏಕೆ ರಾಜ್ಯದಲ್ಲಿ ಜನರು ಶಾಂತಿಯಿಂದ ಇರಬಾರದಾ? ಜನರ ಮಧ್ಯ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಇದನ್ನು ಸರ್ಕಾರ ಸಹ ನೋಡಿಕೊಂಡು ಕೂತಿದೆ. ಇದೆಲ್ಲವನ್ನು ನೀವು ನೋಡುತ್ತಿದ್ದೀರಾ, ಎಲ್ಲರೂ ಯೋಚನೆ ಮಾಡಿ ಮುಂದಿನ ಚುನಾವಣೆಗಳಲ್ಲಿ ಮತ ಕೊಡುವಾಗ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಗಮನದಲ್ಲಿಟ್ಟುಕೊಂಡಿರಬೇಕು"ಎಂದು ನಿಖಿಲ್ ಈ ಸಂದರ್ಭದಲ್ಲಿ ಹೇಳಿದರು.

"ನಾನು ಏಕೆ ಈ ವಿಚಾರವನ್ನು ಮಾತನಾಡುತ್ತಿದ್ದೀನಿ ಅಂದರೆ, ರಾಜ್ಯ ಶಾಂತಿಯಿಂದ ಇರಬೇಕು ಅದು ಎಲ್ಲರಿಗೂ ಒಳ್ಳೆಯದು. ರಾಜ್ಯದ ನೀರಾವರಿ ಯೋಜನೆಗೆ ದೇವೇಗೌಡರು ಸಾಕಷ್ಟು ಕೊಡುಗೆ ನೀಡಿದ್ದಾರೆ. ಹಾಗಾಗಿ ಮುಂದೆ ನಮಗೆ ಒಮ್ಮೆ ಪೂರ್ಣ ಪ್ರಮಾಣದ ಅಧಿಕಾರ ಕೊಡಿ. ಈಗಾಗಲೇ ಎರಡು ರಾಷ್ಟ್ರೀಯ ಪಕ್ಷಕ್ಕೆ ಅಧಿಕಾರ ಕೊಟ್ಟೀದ್ದೀರಿ. ಹಾಗೇ ಕುಮಾರಸ್ವಾಮಿ ಅವರಿಗೂ ಒಮ್ಮೆ ಪೂರ್ಣ ಪ್ರಮಾಣದ ಅಧಿಕಾರ ಕೊಡಿ, ಆಗ ರಾಜ್ಯದ ಅಭಿವೃದ್ಧಿಗೆ ಸಹಾಯವಾಗಲಿದೆ"ಎನ್ನುವ ಭರವಸೆಯನ್ನು ನಿಖಿಲ್ ಕುಮಾರಸ್ವಾಮಿ ನೀಡಿದರು.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications