ಕುಟುಂಬ ರಾಜಕಾರಣ ಮಾಡಲು ಜೆಡಿಎಸ್ ಪಕ್ಷ ಹುಟ್ಟಿರೋದು: ಪುಟ್ಟಸ್ವಾಮಿ
ಚಿಕ್ಕಬಳ್ಳಾಪುರ, ನವೆಂಬರ್ 25: ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್ ಪರ ಮತಯಾಚನೆ ಮಾಡಿದ ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ "ಜೆಡಿಎಸ್ ಪಕ್ಷ ಜನಿಸಿರೋದೇ ಕುಟುಂಬ ರಾಜಕಾರಣ ಮಾಡಲು" ಎಂದು ಟೀಕಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರದಲ್ಲಿ ಮಾತನಾಡಿದ ಪುಟ್ಟಸ್ವಾಮಿ ಅವರು "ರಾಜ್ಯದ ಜನರ ಸಮಸ್ಯೆಗಳಿಗೆ ಗಮನ ಕೊಡದೇ ರಾಜಕಾರಣಕ್ಕೆ ಕುಟುಂಬಸ್ಥರನ್ನು ಪರಿಚಯಿಸಲು ಶುರು ಮಾಡಿದರು. ಹೀಗಾಗಿ ತಾವು ಹುಟ್ಟುಹಾಕಿದ ಕುಟುಂಬ ರಾಜಕಾರಣದಿಂದಲೇ ಹೆಚ್.ಡಿ.ದೇವೇಗೌಡ ಮತ್ತು ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಸೋತರು" ಎಂದರು.
ಜೆಡಿಎಸ್ ಪಕ್ಷ ನಿಜವಾದ ಜಾತ್ಯಾತೀತ ತತ್ವಗಳನ್ನು ಅಳವಡಿಸಿಕೊಂಡಿಲ್ಲ, ಜಾತ್ಯಾತೀತ ತತ್ವಕ್ಕೆ ಅವಮಾನ ಮಾಡಿದೆ. ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿ ಘೋಷಿತ ಸಿಎಂ ಹಾಗೂ ರೇವಣ್ಣ ಅಘೋಷಿತ ಸಿಎಂ ಆಗಿದ್ದರು, ಸಂಬಂಧಿಗಳಾದ ತಮ್ಮಣ್ಣ ಹಾಗೂ ಸಾ.ರಾ.ಮಹೇಶ್ ಸಚಿವರಾದರು. ಸಂಬಂಧಿಕರೇ ತುಂಬಿ ಹೋಗಿದ್ದರು ಎಂದು ವಾಗ್ದಾಳಿ ನಡೆಸಿದರು.

ಆ ಪಕ್ಷ ನಂಬಿದ ಜನರೇ ಅವರ ಜತೆಯಲ್ಲಿಲ್ಲ, ಜೆಡಿಎಸ್ ಬಗ್ಗೆ ಜನ ಅಸಹ್ಯ ಪಡುತ್ತಿದ್ದು ಹೀಗಾಗಿಯೇ ನಿಖಿಲ್ ಕುಮಾರಸ್ವಾಮಿ ಮತ್ತು ದೇವೇಗೌಡರನ್ನು ಮತದಾರರು ಸೋಲಿಸಿದರು ಎಂದರು. ಮುಂದಿನ ಚುನಾವಣೆ ಬರುವಷ್ಟರಲ್ಲಿ ಜೆಡಿಎಸ್ ಪಕ್ಷ ಅಧೋಗತಿಗೆ ತಲುಪಿದೆ ಎಂದು ಹೇಳಿದರು.
ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧವೂ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯರದು ಏಕಾಂಗು ಹೋರಾಟ ಮಾಡುತ್ತಿದ್ದಾರೆ. ಅಲ್ಲಿ ಮೂಲ ಮತ್ತು ವಲಸಿಗ ಎಂಬ ಎರಡು ಬಣಗಳಾಗಿವೆ, ಉಪ ಚುನಾವಣೆ ಪ್ರಚಾರಕ್ಕೆ ಮೂಲ ಕಾಂಗ್ರೆಸ್ಸಿಗರು ಬರುತ್ತಿಲ್ಲ ಎಂದರು.
ಈ ಉಪ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ 15 ಕ್ಷೇತ್ರಗಳನ್ನು ಗೆಲ್ಲಲಿದೆ. ಇದರಿಂದ ಸಿದ್ದರಾಮಯ್ಯ ವಿರೋಧ ಪಕ್ಷದ ಸ್ಥಾನ ಕಳೆದುಕೊಳ್ಳಲಿದ್ದಾರೆ, ಅವರು ರಾಜಕೀಯದಿಂದ ಇನ್ನಾದರೂ ನವೃತ್ತಿ ಪಡೆಯಲಿ ಎಂಬ ಸಲಹೆ ಕೊಟ್ಟದ್ದಾರೆ.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಡಿಸೆಂಬರ್ 05 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 09 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಬಿಜೆಪಿಯಿಂದ ಡಾ.ಕೆ.ಸುಧಾಕರ್, ಕಾಂಗ್ರೆಸ್ ನಿಂದ ಎಂ.ಅಂಜಿನಪ್ಪ. ಜೆಡಿಎಸ್ ನಿಂದ ಎನ್.ರಾಧಾಕೃಷ್ಣ ಕಣದಲ್ಲಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications