ಚಿಕ್ಕಬಳ್ಳಾಪುರದ ಕಲಾಭವನ, 8 ವರ್ಷವಾದರೂ ಮುಗಿಯದ ಕಾಮಗಾರಿ; ಅನೈತಿಕ ಚಟುವಟಿಕೆಗಳಿಗೆ ದಾರಿ
ಚಿಕ್ಕಬಳ್ಳಾಪುರ, ಜೂ. 10: ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಬೇಕಾಗಿದ್ದ ಕಲಾಭವನ 8 ವರ್ಷವಾದರೂ ಕಾಮಗಾರಿ ಪೂರ್ಣವಾಗದೇ ಅನೈತಿಕ ಚಟುವಟಿಕೆಗಳ ತಾಣವಾಗಿದೆ.
ಬಿಬಿ ರಸ್ತೆಯಲ್ಲಿ 2.4 ಎಕರೆ ವಿಸ್ತೀರ್ಣದಲ್ಲಿ ಕಲಾಭವನ ಕಾಮಗಾರಿ 2014ರಲ್ಲಿ ಆರಂಭವಾಯಿತು. ಒಂದು ಸಾವಿರ ಮಂದಿಗೆ ಆಸನಗಳ ವ್ಯವಸ್ಥೆ ಸೇರಿದಂತೆ ಸುಸಜ್ಜಿತ ಕಲಾಭವನ ಮತ್ತು ರಂಗಮಂದಿರ ನಿರ್ಮಿಸಬೇಕು ಎನ್ನುವ ಸದಾಶಯದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಒಟ್ಟು 12.5 ಕೋಟಿ ರೂ ಕಾಮಗಾರಿಗೆ ಮಂಜೂರಾಯಿತು.
ಕಟ್ಟಡದೊಳಗೆ ಪ್ರವೇಶಿಸಿದರೆ ಮಳೆಗಾಳಿಗೆ ಕಸಕಡ್ಡಿಗಳು ತುಂಬಿವೆ. ಇಡೀ ಆವರಣದಲ್ಲಿ ಆಳೆತ್ತರದ ಗಿಡಗಂಟಿಗಳು ಬೆಳೆದಿವೆ. ಕಾಮಗಾರಿ ನಡೆಯುವಾಗ ಸುತ್ತಲೂ ಅಳವಡಿಸಿದ್ದ ಶೀಟ್ ಗಳು ತೆರವಾಗಿವೆ. ಜಿಲ್ಲೆಯ ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಬೇಕಾಗಿದ್ದ ಮತ್ತು ಈಗಾಗಲೇ ಚಟುವಟಿಕೆಗಳಿಂದ ಕೂಡಿರಬೇಕಾಗಿದ್ದ ಕಲಾಭವನ ಅನಾಥಕಟ್ಟಡವಾಗಿದೆ. ಕಟ್ಟಡದಲ್ಲಿ ಮದ್ಯದ ಬಾಟಲಿಗಳು, ಬಟ್ಟೆಗಳು, ಚಾಪೆಗಳು ಕಾಣುತ್ತವೆ. ಕಲಾಭವನ ಅನೈತಿಕ ಚಟುವಟಿಕೆಗಳ ತಾಣವಾಗಿದೆ.

ಕಲಾಭವನ ಅನಾಥ: ಗ್ರಾಮಸ್ಥರಲ್ಲಿ ಬೇಸರ- ಅಸಮಾಧಾನಕ್ಕೆ ಕಾರಣ
ಮೊದಲ ಹಂತದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 1ಕೋಟಿ ರೂ ಮತ್ತು ಜಿಲ್ಲಾ ವಿಶೇಷ ಅಭಿವೃದ್ಧಿ ಯೋಜನೆಯಿಂದ 5 ಕೋಟಿ ರೂ ಬಿಡುಗಡೆ ಮತ್ತು 2021ರ ಮಾರ್ಚ್ ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮತ್ತೆ1ಕೋಟಿ ರೂ ಬಿಡುಗಡೆ ಆಗಿದೆ. ಸಿವಿಲ್ ಕಾಮಗಾರಿಗಳು ಪೂರ್ಣವಾಗಿವೆ. ಹವಾನಿಯಂತ್ರಕ ವ್ಯವಸ್ಥೆ, ವಿದ್ಯುತ್, ಧ್ವನಿ ಮತ್ತು ಬೆಳಕು, ವೇದಿಕೆ ಇತ್ಯಾದಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಕರ್ನಾಟಕ ಗೃಹಮಂಡಳಿಗೆ ಕಾಮಗಾರಿಯ ಜವಾಬ್ದಾರಿವಹಿಸಲಾಗಿದೆ, ಆದರೆ ಕಾಮಗಾರಿ ಪೂರ್ಣಗೊಳಿಸಲು ಜಿಲ್ಲಾ ವಿಶೇಷ ಅಭಿವೃದ್ಧಿ ಯೋಜನೆಯಿಂದ ಹಣ ಪೂರ್ಣವಾಗಿ ಬಿಡುಗಡೆಯೇ ಆಗಿಲ್ಲ. ಈ ಕಾರಣದಿಂದ ಕಲಾಭವನ ಅನಾಥವಾಗಿದೆ.
ಎಂಟು ವರ್ಷವಾದರೂ ಕಟ್ಟಡ ಕಾಮಗಾರಿ ಪೂರ್ಣವಾಗಿ ಸಾಂಸ್ಕೃತಿಕ ಕಲವರ ಆರಂಭವಾಗದಿರುವುದು ಗ್ರಾಮಸ್ಥರಲ್ಲಿ ಬೇಸರ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಬಹುದು.
ಭೂತ ಬಂಗಲೆಯಂತೆ ಕಾಣುತ್ತಿದೆ ಕಲಾಭವನ!
ಬರೋಬರಿ ಎಂಟು ವರ್ಷಗಳು ಪೂರ್ಣವಾಯಿತು. ಆದರೂ ಕಾಮಗಾರಿ ಮಾತ್ರ ಮುಗಿದಿಲ್ಲ. ಹೀಗೆ ಅರೆ ಬರೆಯಾಗಿ ನಿರ್ಮಾಣವಾಗಿರುವ ಕಟ್ಟಡ ಈಗ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ರಾತ್ರಿ ವೇಳೆ ಪುಂಡರ ಅಡ್ಡೆ ಆಗುತ್ತದೆ. ಕಟ್ಟಡ ಕಾಮಗಾರಿ ವೇಳೆ ಸುತ್ತಲು ಅಳವಡಿಸಿದ್ದ ತಗಡಿನ ಶೀಟ್ ಗಳು ರವಾಗಿವೆ. ಬಿಬಿ ರಸ್ತೆಯಲ್ಲಿ ಸಾಗುವ ಜನರಿಗೆ ಇದು ಭೂತ ಬಂಗಲೇಯಂತೆ ಕಾಣುತ್ತಿದೆ!

ಇದು ಜಿಲ್ಲೆಯ ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಬೇಕು ಎನ್ನುವ ಉದ್ದೇಶದಿಂದ ನಗರದ ಬಿಬಿ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಕಲಾಭವನದ ಸ್ಥಿತಿ. ಭವನದ ಕಾಮಗಾರಿ 8 ವರ್ಷವಾದರೂ ಪೂರ್ಣವಾಗಿಲ್ಲ, ಕಾಮಗಾರಿಯ ಆಮೆನಡಿಗೆ ಜಿಲ್ಲೆಯ ಸಾಂಸ್ಕೃತಿಕ ಮತ್ತು ಕಲಾಪ್ರಿಯರಲ್ಲಿ ಬೇಸರಕ್ಕೆ ಕಾರಣವಾಗಿದೆ.
(ಒನ್ಇಂಡಿಯಾ ಸುದ್ದಿ)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications