ಚಿಕ್ಕಬಳ್ಳಾಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಚಿಕ್ಕಬಳ್ಳಾಪುರ ಸೇರಿ ವಿವಿಧ ಜಿಲ್ಲೆಗಳ ಡಿಸಿಗಳ ವರ್ಗಾವಣೆ

|
Google Oneindia Kannada News

ಚಿಕ್ಕಬಳ್ಳಾಪುರ, ಜುಲೈ 10; ಕರ್ನಾಟಕ ಸರ್ಕಾರ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಚಿಕ್ಕಬಳ್ಳಾಪುರ, ಕೊಪ್ಫಳ, ದಾವಣಗೆರೆ ಸೇರಿದಂತೆ ಹಲವಾರು ಜಿಲ್ಲಾಧಿಕಾರಿಗಳು ವರ್ಗವಾಗಿದ್ದಾರೆ.

ಸೋಮವಾರ ಕರ್ನಾಟಕ ಸರ್ಕಾರ 8 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಅಮ್ಲಾನ್ ಆದಿತ್ಯ ಬಿಸ್ವಾಸ್, ಕ್ಯಾಪ್ಟನ್ ಡಾ. ರಾಜೇಂದ್ರ ಕೆ., ವಿಕಾಸ್‌ ಕಿಶೋರ್‌ ಸುರಳ್ಕರ್‌ ಸೇರಿದಂತೆ ವಿವಿಧ ಅಧಿಕಾರಿಗಳು ವರ್ಗಾವಣೆಗೊಂಡಿದ್ದಾರೆ.

ಐಎಎಸ್ ಪರೀಕ್ಷೆ: 569 ರ್‍ಯಾಂಕ್ ಪಡೆದ ಚಾಲಕನ ಮಗನಿಗೆ ಕೆಎಸ್ಆರ್‌ಟಿಸಿ ಸನ್ಮಾನ ಐಎಎಸ್ ಪರೀಕ್ಷೆ: 569 ರ್‍ಯಾಂಕ್ ಪಡೆದ ಚಾಲಕನ ಮಗನಿಗೆ ಕೆಎಸ್ಆರ್‌ಟಿಸಿ ಸನ್ಮಾನ

ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿದ್ದ ಅಮ್ಲಾನ್ ಆದಿತ್ಯ ಬಿಸ್ವಾಸ್‌ರನ್ನು ಬೆಂಗಳುರು ವಿಭಾಗಕ್ಕೆ ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.

ನಕಲಿ ಬ್ಯಾಂಕ್ ಖಾತೆ ಹಗರಣ: ಐಎಎಸ್ ಅಧಿಕಾರಿಗಳ ತನಿಖೆಗೆ ಬಿತ್ತು ಬ್ರೇಕ್ ನಕಲಿ ಬ್ಯಾಂಕ್ ಖಾತೆ ಹಗರಣ: ಐಎಎಸ್ ಅಧಿಕಾರಿಗಳ ತನಿಖೆಗೆ ಬಿತ್ತು ಬ್ರೇಕ್

Karnataka Govt Transfers 8 IAS Officers

ಗದಗ ಜಿಲ್ಲಾಧಿಕಾರಿಯಾಗಿದ್ದ ಎಂ. ಸುಂದರೇಶ್ ಬಾಬುರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಸ್ಮಾರ್ಟ್‌ ಸಿಟಿ ಲಿಮಿಟೆಡ್ ಎಂಡಿಯಾಗಿ ಅವರು ನೇಮಕಗೊಂಡಿದ್ದಾರೆ.

ಯಶೋಗಾಥೆ: ಶ್ರದ್ಧಾ ಐಎಎಸ್ ಕನಸು ನನಸಾಗಿದ್ದು ಹೀಗೆ!ಯಶೋಗಾಥೆ: ಶ್ರದ್ಧಾ ಐಎಎಸ್ ಕನಸು ನನಸಾಗಿದ್ದು ಹೀಗೆ!

ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಪಿಎಸ್‌ಸಿಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್. ಲತಾರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಜಿಲ್ಲಾಧಿಕಾರಿಯಾಗಿದ್ದ ಕೆ. ಶ್ರೀನಿವಾಸರನ್ನು ವರ್ಗಾವಣೆ ಮಾಡಲಾಗಿದೆ.

ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಆದರೆ ಅವರಿಗೆ ಯಾವುದೇ ಸ್ಥಳವನ್ನು ನಿಯುಕ್ತಿ ಮಾಡಿಲ್ಲ.

ವರ್ಗಾವಣೆಗೊಂಡ ಅಧಿಕಾರಿಗಳು

* ಕ್ಯಾಪ್ಟನ್ ಡಾ. ರಾಜೇಂದ್ರ ಕೆ. ತಕ್ಷಣದಿಂದ ಜಾರಿಗೆ ಬರುವಂತೆ ಕೋ-ಅಪರೇಟಿವ್ ಸೊಸೈಟಿ ರಿಜಿಸ್ಟ್ರಾರ್ ಮತ್ತು ನಿರ್ದೇಶಕ ಕೋ-ಅಪರೇಟಿವ್ ಆಡಿಟ್ ಆಗಿ ವರ್ಗಾವಣೆ ಮಾಡಲಾಗಿದೆ.

* ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಎಂಡಿಯಾಗಿದ್ದ ಶಿವಾನಂದ ಕಾಪ್ಸಿಯನ್ನು ದಾವಣಗೆರೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

* ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಕಾರ್ಯರ್ಶಿ ಹೊನ್ನಾಂಬಾರನ್ನು ಗದಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

Recommended Video

ಏಕಾಏಕಿ ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್ ಗೆ ಹೋದ Dhoni | *Cricket | OneIndia Kannada

* ಲೋಖಂಡೆ ಸ್ನೇಹಲ್ ಸುಧಾಕರ್ ಉನ್ನತ ಶಿಕ್ಷಣ ಇಲಾಖೆಯ ಉಪ ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡಿದ್ದಾರೆ.

English summary
Karnataka government on July 11th transfers 8 IAS officers inducing Deputy Commissioner of Chikkaballapura Latha R..
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X