ವಿಡಿಯೋ; ಚಿಕ್ಕಬಳ್ಳಾಪುರದಲ್ಲಿ ಕೋಡಿಶ್ರೀ ಭವಿಷ್ಯ
ಚಿಕ್ಕಬಳ್ಳಾಪುರ, ಫೆಬ್ರವರಿ 11; " ಕೋವಿಡ್ ಮಹಾಮಾರಿಯ ಶಕ್ತಿ ಕುಂದಿದ್ದು ಎಲ್ಲವೂ ಸರಿ ಹೋಗಲಿದೆ. ಆದರೆ ಗಾಳಿ ಗಂಡಾಂತರದಿಂದ ಜನತೆ ನರಳುತ್ತಾರೆ" ಎಂದು ಕೋಡಿ ಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದರು.
ಶುಕ್ರವಾರ ಖಾಸಗಿ ಕಾರ್ಯಕ್ರಮಕ್ಕಾಗಿ ಸ್ವಾಮೀಜಿ ಚಿಕ್ಕಬಳ್ಳಾಪುರ ನಗರಕ್ಕೆ ಆಗಮಿಸಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿದರು. "ಕೊರೊನಾ ಪೂರ್ವದಲ್ಲಿಯೇ ನಾನು ಹೇಳಿದ್ದೆ, ಸಂಕಟ ಬಂದಾಗ ವೆಂಕಟರಮಣ ಎನ್ನುವ ಜನರಿಗೆ ಬುದ್ದಿ ಕಲಿಸಬೇಕೆನ್ನುವ ಕಾರಣಕ್ಕಾಗಿಯೇ ಕೊರೊನಾ ದೇವರನ್ನು ಹಿಡಿದುಕೊಂಡು ಭೂಮಿಗೆ ಬಂತು ಎಂಬುದನ್ನು ಜನ ಅರ್ಥ ಮಾಡಿಕೊಳ್ಳಬೇಕು" ಎಂದರು.
"ಕೊರೊನಾ ಅಬ್ಬರ ಎಷ್ಟಿತ್ತು ಎನ್ನುವುದಕ್ಕೆ ದೇವಾಲಯಗಳು ಬಾಗಿಲು ಮುಚ್ಚಿದ್ದೇ ಸಾಕ್ಷಿಯಾಗಿದೆ. ತಿರುಪತಿ, ಧರ್ಮಸ್ಥಳ, ಚಾಮುಂಡೇಶ್ವರಿ ದೇವಾಲಯ ಬಾಗಿಲು ಹಾಕಿಸಿತು. ಮಠ ಮಾನ್ಯಗಳು ಬಾಗಿಲು ಹಾಕುವಂತೆ ಆಯಿತು" ಎಂದು ಹೇಳಿದರು.
"ಕೊರೊನಾ ಅಬ್ಬರ ತಗ್ಗಿತು ಎನ್ನುವಾಗ ನೆಲಗಂಡಾಂತರ ಪ್ರಾರಂಭವಾಗಿ ಏಕಶಿಲಾ ಪರ್ವತವಾದ ನಂದಿಗಿರಿಧಾಮದ ನೆಲವೇ ಕುಸಿಯಿತು. ಮಲೆಮಹದೇಶ್ವರ ಬೆಟ್ಟ, ಮಡಿಕೇರಿ ಮೊದಲಾದೆಡೆ ಸಮಸ್ಯೆ ಎದುರಾಯಿತು. ಇದರ ಜತೆಗೆ ಜಲಗಂಡಾಂತರವೂ ಸಹ ಜನಜಾನುವಾರು ಸಹಿತ ಸಕಲ ಜೀವರಾಶಿಯನ್ನು ಹಿಂಡಿ ಹಿಪ್ಪೆ ಮಾಡಿತು" ಎಂದು ತಿಳಿಸಿದರು.

"ಮುಂದೆ ಗಾಳಿ-ಗಂಡಾಂತರ ಬಂದು ಜನರನ್ನು ಬಾಧಿಸಲಿದೆ. ಗಾಳಿಗಂಡಾಂತರವೂ ಕೂಡ ಮನುಷ್ಯನಿಗೆ ಅಪಾಯಕಾರಿ ನೆಲೆಯಲ್ಲಿಯೇ ಬಂದು ಕಷ್ಟವನ್ನು ತಂದರೂ ಮುಂದೆ ಹೋಗಲಿದೆ. ಆದರೆ ಇದು ಹೋಗುವ ಕಾಲಕ್ಕೆ ವಿಪರೀತ ಬರಗಾಲವನ್ನು ತಂದು ತಿನ್ನಲು ಅನ್ನವಿಲ್ಲದೆ, ಕುಡಿಯಲು ನೀರಿಲ್ಲದ ಸ್ಥಿತಿಯನ್ನು ತಂದೊಡ್ಡಲಿದೆ" ಎಂದು ಹೇಳಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications