ವಿಡಿಯೋ; ಚಿಕ್ಕಬಳ್ಳಾಪುರದಲ್ಲಿ ಕೋಡಿಶ್ರೀ ಭವಿಷ್ಯ
ಚಿಕ್ಕಬಳ್ಳಾಪುರ, ಫೆಬ್ರವರಿ 11; " ಕೋವಿಡ್ ಮಹಾಮಾರಿಯ ಶಕ್ತಿ ಕುಂದಿದ್ದು ಎಲ್ಲವೂ ಸರಿ ಹೋಗಲಿದೆ. ಆದರೆ ಗಾಳಿ ಗಂಡಾಂತರದಿಂದ ಜನತೆ ನರಳುತ್ತಾರೆ" ಎಂದು ಕೋಡಿ ಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದರು.
ಶುಕ್ರವಾರ ಖಾಸಗಿ ಕಾರ್ಯಕ್ರಮಕ್ಕಾಗಿ ಸ್ವಾಮೀಜಿ ಚಿಕ್ಕಬಳ್ಳಾಪುರ ನಗರಕ್ಕೆ ಆಗಮಿಸಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿದರು. "ಕೊರೊನಾ ಪೂರ್ವದಲ್ಲಿಯೇ ನಾನು ಹೇಳಿದ್ದೆ, ಸಂಕಟ ಬಂದಾಗ ವೆಂಕಟರಮಣ ಎನ್ನುವ ಜನರಿಗೆ ಬುದ್ದಿ ಕಲಿಸಬೇಕೆನ್ನುವ ಕಾರಣಕ್ಕಾಗಿಯೇ ಕೊರೊನಾ ದೇವರನ್ನು ಹಿಡಿದುಕೊಂಡು ಭೂಮಿಗೆ ಬಂತು ಎಂಬುದನ್ನು ಜನ ಅರ್ಥ ಮಾಡಿಕೊಳ್ಳಬೇಕು" ಎಂದರು.
"ಕೊರೊನಾ ಅಬ್ಬರ ಎಷ್ಟಿತ್ತು ಎನ್ನುವುದಕ್ಕೆ ದೇವಾಲಯಗಳು ಬಾಗಿಲು ಮುಚ್ಚಿದ್ದೇ ಸಾಕ್ಷಿಯಾಗಿದೆ. ತಿರುಪತಿ, ಧರ್ಮಸ್ಥಳ, ಚಾಮುಂಡೇಶ್ವರಿ ದೇವಾಲಯ ಬಾಗಿಲು ಹಾಕಿಸಿತು. ಮಠ ಮಾನ್ಯಗಳು ಬಾಗಿಲು ಹಾಕುವಂತೆ ಆಯಿತು" ಎಂದು ಹೇಳಿದರು.
"ಕೊರೊನಾ ಅಬ್ಬರ ತಗ್ಗಿತು ಎನ್ನುವಾಗ ನೆಲಗಂಡಾಂತರ ಪ್ರಾರಂಭವಾಗಿ ಏಕಶಿಲಾ ಪರ್ವತವಾದ ನಂದಿಗಿರಿಧಾಮದ ನೆಲವೇ ಕುಸಿಯಿತು. ಮಲೆಮಹದೇಶ್ವರ ಬೆಟ್ಟ, ಮಡಿಕೇರಿ ಮೊದಲಾದೆಡೆ ಸಮಸ್ಯೆ ಎದುರಾಯಿತು. ಇದರ ಜತೆಗೆ ಜಲಗಂಡಾಂತರವೂ ಸಹ ಜನಜಾನುವಾರು ಸಹಿತ ಸಕಲ ಜೀವರಾಶಿಯನ್ನು ಹಿಂಡಿ ಹಿಪ್ಪೆ ಮಾಡಿತು" ಎಂದು ತಿಳಿಸಿದರು.

"ಮುಂದೆ ಗಾಳಿ-ಗಂಡಾಂತರ ಬಂದು ಜನರನ್ನು ಬಾಧಿಸಲಿದೆ. ಗಾಳಿಗಂಡಾಂತರವೂ ಕೂಡ ಮನುಷ್ಯನಿಗೆ ಅಪಾಯಕಾರಿ ನೆಲೆಯಲ್ಲಿಯೇ ಬಂದು ಕಷ್ಟವನ್ನು ತಂದರೂ ಮುಂದೆ ಹೋಗಲಿದೆ. ಆದರೆ ಇದು ಹೋಗುವ ಕಾಲಕ್ಕೆ ವಿಪರೀತ ಬರಗಾಲವನ್ನು ತಂದು ತಿನ್ನಲು ಅನ್ನವಿಲ್ಲದೆ, ಕುಡಿಯಲು ನೀರಿಲ್ಲದ ಸ್ಥಿತಿಯನ್ನು ತಂದೊಡ್ಡಲಿದೆ" ಎಂದು ಹೇಳಿದರು.
-
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ -
Jowar Price: ಕರ್ನಾಟಕದ ಮಾರುಕಟ್ಟೆಗಳಲ್ಲಿ ಜೋಳದ ದರ ಏರಿಳಿತ; ಇಲ್ಲಿದೆ ಜಿಲ್ಲಾವಾರು ಬೆಲೆ ಪಟ್ಟಿ -
Karnataka Rain: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ: ಐಎಂಡಿ ವರದಿ -
Zomato: ಬೆಂಗಳೂರು Vs ಚೆನ್ನೈ ಸಾಂಬಾರ್ ಎಂದ ಝೊಮ್ಯಾಟೊ; ನಮಗೆ ಸ್ವಿಗ್ಗಿ ಸಾಕು ಎಂದ ನೆಟ್ಟಿಗರು -
ವಾರ ಭವಿಷ್ಯ: ಈ ರಾಶಿಯ ಪ್ರೇಮಿಗಳು ಮತ್ತೆ ಒಂದಾಗುತ್ತಾರೆ! ಸೂರ್ಯನಿಗೆ ಅರ್ಘ್ಯದಿಂದ ಭಾಗ್ಯ ಬದಲಾವಣೆ -
SSLC ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡಿಂಗ್: ಸರ್ಕಾರದ ದಿಢೀರ್ ನಿರ್ಧಾರಕ್ಕೆ ಖಾಸಗಿ ಶಾಲೆಗಳ ತೀವ್ರ ವಿರೋಧ -
ರಾಜ್ಯದಲ್ಲಿ ತೃತೀಯ ಭಾಷೆ 'ಆಟಕ್ಕುಂಟು ಲೆಕ್ಕಕ್ಕಿಲ್ಲ', ಆದರೆ ಕೇಂದ್ರದಿಂದ ಕಡ್ಡಾಯದ ಹೊಸ ಆದೇಶ : ರಾಜೀವ ಹೆಗಡೆ ಬರಹ -
RCB Vs CSK ಮ್ಯಾಚ್ ನೋಡಲು ಬರೋಬ್ಬರಿ 1.46 ಲಕ್ಷ ಕಳೆದುಕೊಂಡ ಕಳೆದುಕೊಂಡ ಟೆಕ್ಕಿ, ಐಪಿಎಲ್ ಅಭಿಮಾನಿಗಳೇ ಹುಷಾರ್ -
April 6 Horoscope: ಈ ರಾಶಿಗಳಿಗೆ ಲಾಭ, ಕೆಲವರಿಗೆ ಎಚ್ಚರಿಕೆ ಸೂಚನೆ -
ಏಪ್ರಿಲ್ 8ಕ್ಕೆ ದ್ವಿತೀಯ PUC ಫಲಿತಾಂಶ? ಶಿಕ್ಷಣ ಇಲಾಖೆಯ ಮಹತ್ವದ ಅಪ್ಡೇಟ್ ಇಲ್ಲಿದೆ












Click it and Unblock the Notifications