ಬೈಕ್, ಮೊಬೈಲ್ ಖರೀದಿಸಲು 3 ತಿಂಗಳ ಮಗುವನ್ನೇ ಮಾರಿದ ತಂದೆ!
ಚಿಕ್ಕಮಗಳೂರು, ಸಪ್ಟೆಂಬರ್.02: ಬಡತನದ ಬೇಗುದಿಯಲ್ಲಿ ಮಕ್ಕಳನ್ನು ಸಾಕಲು ಆಗದೇ ಪುಟ್ಟ ಕಂದಮ್ಮಗಳನ್ನು ಮಾರಾಟ ಮಾಡಿರುವಂತಾ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಿರುತ್ತವೆ. ಕರ್ನಾಟಕದಲ್ಲಿ ಇತ್ತೀಚಿಗೆ ನಡೆದ ಒಂದು ಘಟನೆ ಇದೆಲ್ಲಕ್ಕಿಂತ ವಿಭಿನ್ನವಾಗಿದೆ.
ಇತ್ತೀಚಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ತಿಣಕಲ್ ಮಕ್ಕಳು ಇಲ್ಲದ ದಂಪತಿಗೆ ಬಡ ಕಾರ್ಮಿಕನೊಬ್ಬ ತಮ್ಮ 3 ತಿಂಗಳ ಪುಟ್ಟ ಮಗುವನ್ನು 1 ಲಕ್ಷ ರೂಪಾಯಿಗೆ ಮಾರಾಟ ಮಾಡಿರುವ ಘಟನೆ ನಡೆದಿದೆ. ಆದರೆ ಇದರ ಹಿಂದಿನ ಕಾರಣ ಮಾತ್ರ ಆಶ್ಚರ್ಯ ಹುಟ್ಟಿಸುವಂತಿದೆ.
ಮೋಟಾರ್ ಸೈಕಲ್ ಮತ್ತು ಮೊಬೈಲ್ ಖರೀದಿಸುವುದಕ್ಕಾಗಿ 3 ತಿಂಗಳ ಮಗುವನ್ನು ಕಾರ್ಮಿಕ ಮಾರಾಟ ಮಾಡಿರುವುದು ಗೊತ್ತಾಗಿದೆ. ಮಗುವನ್ನು ಮಾರಾಟ ಮಾಡಿ ಬಂದ ಹಣದಲ್ಲಿ 50 ಸಾವಿರ ರೂಪಾಯಿ ಕೊಟ್ಟು ಬೈಕ್ ಹಾಗೂ 15 ಸಾವಿರ ರೂಪಾಯಿ ಮೊಬೈಲ್ ಖರೀದಿಸಿರುವುದು ತಿಳಿದು ಬಂದಿದೆ.

ಅಕ್ಕಪಕ್ಕದ ಮನೆಯವರಲ್ಲಿ ಹುಟ್ಟಿಕೊಂಡ ಅನುಮಾನ
ಬಡತನದಿಂದ ಬಳಲುತ್ತಿದ್ದ ಕಾರ್ಮಿಕನ ಕುಟುಂಬದಲ್ಲಿ ದಿಢೀರನೇ ಬದಲಾವಣೆಗಳು ಕಂಡು ಬಂದವು. ಹೊಸ ಬೈಕ್ ಮತ್ತು ಮೊಬೈಲ್ ನಲ್ಲಿ ಹಾಯಾಗಿ ಮಾತನಾಡುತ್ತಾ ನಲಿಯುತ್ತಿದ್ದ ಕುಟುಂಬದವರ ನಡುವಳಿಕೆ ಅಕ್ಕಪಕ್ಕದ ಮನೆಯವರಲ್ಲಿ ಅನುಮಾನವನ್ನು ಹುಟ್ಟಿಸಿತು. ಇದೇ ಸಂದರ್ಭದಲ್ಲಿ 3 ತಿಂಗಳ ಮಗು ನಾಪತ್ತೆಯಾಗಿರುವುದನ್ನು ನೆರೆಹೊರೆಯವರು ಗಮನಿಸಿದರು.

ಗ್ರಾಮಸ್ಥರಿಂದ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಗೆ ಕಂಪ್ಲೆಂಟ್
ಚಿಕ್ಕಬಳ್ಳಾಪು ಜಿಲ್ಲೆ ತಿಣಕಲ್ ಗ್ರಾಮದಲ್ಲಿ ವಾಸವಾಗಿದ್ದ ದಂಪತಿಯ 3 ತಿಂಗಳ ಮಗು ಕಾಣಿಸದ ಹಿನ್ನೆಲೆ ನೆರೆಹೊರೆಯವರು ಅನುಮಾನಗೊಂಡು ದೂರು ನೀಡಿದ್ದರು. ಈ ಹಿನ್ನೆಲೆ ತಿಣಕಲ್ ಗ್ರಾಮಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಗುವಿನ ತಾಯಿ ಸೇರಿದಂತೆ ಸುತ್ತಮುತ್ತಲಿನ ಮನೆಯವರನ್ನು ವಿಚಾರಣೆ ನಡೆಸಿದರು.

ಕಾರ್ಮಿಕನ ಎರಡನೇ ಮದುವೆ ವಿಚಾರ ಬಹಿರಂಗ
ಮಗು ಮಾರಾಟಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದಾಗ ಕಾರ್ಮಿಕನು ಈಗಾಗಲೇ ಮತ್ತೊಬ್ಬ ಮಹಿಳೆಯ ಜೊತೆಗೆ ವಿವಾಹವಾಗಿದ್ದ ಎಂದು ತಿಳಿದು ಬಂದಿದೆ. ಎರಡನೇ ಪತ್ನಿಗೆ ಜನಿಸಿದ ಮಗುವನ್ನು 1 ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದನು ಎಂದು ತಿಳಿದು ಬಂದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮಗುವನ್ನು ರಕ್ಷಿಸಿದ್ದು ದತ್ತು ಕೇಂದ್ರಕ್ಕೆ ನೀಡಿದ್ದಾರೆ.

2ನೇ ಪತ್ನಿ ಮಗುವನ್ನು ಮಾರಾಟ ಮಾಡಿದ ತಂದೆ ನಾಪತ್ತೆ
ಇನ್ನು, ಪೊಲೀಸರು ಮಗುವಿನ ತಾಯಿಯನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಮಗುವನ್ನು ಮಾರಾಟಕ್ಕೆ ಪತಿ ಪತ್ನಿ ಇಬ್ಬರ ಒಪ್ಪಿಗೆಯೂ ಇತ್ತು ಎಂದು ತಿಳಿದು ಬಂದಿದೆ. ಏಕೆಂದರೆ ಮಗು ಮಾರಾಟ ಮಾಡುವಂತೆ ಪತ್ನಿಗೆ ಆರೋಪಿ ಪತಿ ಬೆದರಿಕೆ ಹಾಕಿ ಒಪ್ಪಿಸಿದ್ದನು ಎಂದು ತಿಳಿದು ಬಂದಿದೆ. ಇದೀಗ ಆರೋಪಿ ಪತಿಯು ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications