ಚಿಕ್ಕಬಳ್ಳಾಪುರ: ಸಾಮಾಜಿಕ ಜಾಲತಾಣ ಹುಚ್ಚಿಗೆ ಗೃಹಿಣಿ ಬಲಿ
Recommended Video
ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 28: ಸಾಮಾಜಿಕ ಜಾಲತಾಣದ ಹುಚ್ಚಿಗೆ ಗೃಹಿಣಿಯೊಬ್ಬಳು ತನ್ನ ಜೀವವನ್ನೇ ಕಳೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಸ್ಮ್ಯುಯೆಲ್ ಆಪ್ ಬಳಸಿ ಹಾಡು ಹಾಡುತ್ತಿದ್ದ ಶಿಲ್ಪಾ ಎಂಬುವರು, ತನ್ನ ಜೊತೆ ಆಪ್ನಲ್ಲಿ ಹಾಡು ಹಾಡುತ್ತಿದ್ದ ಯುವಕ ಹಾಡಲು ಸ್ಪಂದಿಸಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗೃಹಿಣಿ ಶಿಲ್ಪಾ ನಗರದ 16ನೇ ವಾರ್ಡಿನ ಗರ್ಲ್ಸ್ ಸ್ಕೂಲ್ ಹಿಂಭಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಳು. ಶಿಲ್ಪಾಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ.

ದೇವರಾಜ್ ಎಂಬುವನ ಜೊತೆ ಸ್ಮ್ಯುಯೆಲ್ ಆಪ್ನಲ್ಲಿ ಹಾಡುತ್ತಿದ್ದರು
ಗೃಹಿಣಿ ಶಿಲ್ಪಾ ಗೆ ಸ್ಮ್ಯುಯೆಲ್ ಆಪ್ನಲ್ಲಿ ಹಾಡುವ ಹುಚ್ಚು ಹತ್ತಿತ್ತು. ಆಕೆ ಹಾಸನದ ದೇವರಾಜ್ ಎಂಬಾತನ ಜೊತೆಗೆ ಯುಗಳ ಗೀತೆಗಳನ್ನು ಹಾಡಿ ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡುತ್ತಿದ್ದರು. ಕೆಲವು ತಿಂಗಳಿಂದ ಶಿಲ್ಪಾ ಮತ್ತು ದೇವರಾಜ್ ಹೀಗೆ ಆಪ್ನಲ್ಲಿ ಯುಗಳ ಗೀತೆಗಳನ್ನು ಹಾಡುತ್ತಿದ್ದರು.

ಹಾಡು ಹಾಡುವ ಮನವಿಗೆ ದೇವರಾಜ್ ಸ್ಪಂದಿಸಿಲ್ಲ
ಆದರೆ ತನ್ನ ಜೊತೆ ಆಪ್ನಲ್ಲಿ ಹಾಡು ಹಾಡುತ್ತಿದ್ದ ದೇವರಾಜ್ ಹಾಡು ಹಾಡಲು ಸ್ಪಂದಿಸಲಿಲ್ಲವೆಂದು ಶಿಲ್ಪಾ ಇಂದು ತನ್ನ ನಿವಾಸದಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಯುವುದಾಗಿ ದೇವರಾಜ್ಗೆ ಮೆಸೆಜ್ ಮಾಡಿದ್ದ ಶಿಲ್ಪಾ
ಶುಕ್ರವಾರ ತಡರಾತ್ರಿ ಶಿಲ್ಪಾ, ಯುವಕನಿಗೆ ಫೇಸ್ಬುಕ್ ಮೆಸೆಂಜರ್ ಮೂಲಕ ಕರೆ ಮಾಡಿದ್ದಾಗ ಆತ ಕರೆ ಸ್ವೀಕರಿಸಿಲ್ಲ. ಕೊನೆಗೆ 'ನನ್ನನ್ನು ನೀನು ದೂರ ಮಾಡುತ್ತಿದ್ದೀಯಾ' ಎಂದು ಮೆಸೇಜ್ ಮಾಡಿದ್ದಾಳೆ. ಹೀಗೆ ಇಬ್ಬರ ನಡುವೆ ಚಾಟಿಂಗ್ ಮುಂದುವರಿದಿದೆ. ಚಾಟಿಂಗ್ ಮಾಡುತ್ತಿದ್ದಾಗಲೇ ಶಿಲ್ಪಾ ಸಾಯುವುದಾಗಿ ಹೇಳಿ, ಯುವಕನಿಗೆ ನೇಣು ಕುಣಿಕೆಯ ಫೋಟೋವೊಂದನ್ನು ಕಳುಹಿಸಿದ್ದಾಳೆ. ಫೋಟೋ ಕಳುಹಿಸಿದ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬಂಗಾರಪೇಟೆಗೆ ಹೋಗಿದ್ದ ಪತಿ
ಶಿಲ್ಪಾ ಪತಿ ಮಕ್ಕಳನ್ನು ಕರೆದುಕೊಂಡು ಮಹಾಲಾಯ ಅಮಾವಾಸ್ಯೆ ಪ್ರಯುಕ್ತ ಬಂಗಾರಪೇಟೆಗೆ ಹೋಗಿದ್ದರು. ಇಂದು (ಸೆಪ್ಟೆಂಬರ್ 28) ಬೆಳಿಗ್ಗೆ ಪತ್ನಿಗೆ ಕರೆ ಮಾಡಿದಾಗ ಶಿಲ್ಪಾ ಕರೆ ಸ್ವೀಕರಿಸಲಿಲ್ಲ, ಅನುಮಾನಗೊಂಡ ಪತಿ ಮನೆ ಮಾಲೀಕರಿಗೆ ಕರೆ ಮಾಡಿ ಮನೆಯ ಒಳಗೆ ನೋಡಲು ಹೇಳಿದ್ದಾರೆ. ಕಿಟಕಿಯಿಂದ ನೋಡಿದಾಗ ಶಿಲ್ಪಾ ನೇಣು ಬಿಗಿದುಕೊಂಡಿರುವುದು ಪತ್ತೆ ಆಗಿದೆ.

ಪೊಲೀಸರು ಹೇಳುವುದೇನು?
ಈ ಮಾಧ್ಯಮಗಳ ವರದಿ ಕುರಿತು ಎಸ್ಪಿ ಕೆ.ಸಂತೋಷ್ ಬಾಬು ಅವರನ್ನು ವಿಚಾರಿಸಿದಾಗ, 'ಶಿಲ್ಪಾ ಅವರ ಕುಟುಂಬದವರು ಯಾರ ವಿರುದ್ಧವೂ ಪ್ರಕರಣ ದಾಖಲಿಸಿಲ್ಲ. ನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ದೂರಿನಡಿ ಪ್ರಕರಣ ದಾಖಲಾಗಿದೆ. ವದಂತಿಯ ಆಯಾಮದಿಂದ ಕೂಡ ತನಿಖೆ ನಡೆಸುತ್ತೇವೆ. ಬಳಿಕವಷ್ಟೇ ಆತ್ಮಹತ್ಯೆಯ ನಿಖರ ಕಾರಣ ಹೇಳಲು ಸಾಧ್ಯ' ಎಂದು ತಿಳಿಸಿದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು












Click it and Unblock the Notifications