ಚಿಕ್ಕಬಳ್ಳಾಪುರ: ಸಾಮಾಜಿಕ ಜಾಲತಾಣ ಹುಚ್ಚಿಗೆ ಗೃಹಿಣಿ ಬಲಿ
Recommended Video
ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 28: ಸಾಮಾಜಿಕ ಜಾಲತಾಣದ ಹುಚ್ಚಿಗೆ ಗೃಹಿಣಿಯೊಬ್ಬಳು ತನ್ನ ಜೀವವನ್ನೇ ಕಳೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಸ್ಮ್ಯುಯೆಲ್ ಆಪ್ ಬಳಸಿ ಹಾಡು ಹಾಡುತ್ತಿದ್ದ ಶಿಲ್ಪಾ ಎಂಬುವರು, ತನ್ನ ಜೊತೆ ಆಪ್ನಲ್ಲಿ ಹಾಡು ಹಾಡುತ್ತಿದ್ದ ಯುವಕ ಹಾಡಲು ಸ್ಪಂದಿಸಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗೃಹಿಣಿ ಶಿಲ್ಪಾ ನಗರದ 16ನೇ ವಾರ್ಡಿನ ಗರ್ಲ್ಸ್ ಸ್ಕೂಲ್ ಹಿಂಭಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಳು. ಶಿಲ್ಪಾಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ.

ದೇವರಾಜ್ ಎಂಬುವನ ಜೊತೆ ಸ್ಮ್ಯುಯೆಲ್ ಆಪ್ನಲ್ಲಿ ಹಾಡುತ್ತಿದ್ದರು
ಗೃಹಿಣಿ ಶಿಲ್ಪಾ ಗೆ ಸ್ಮ್ಯುಯೆಲ್ ಆಪ್ನಲ್ಲಿ ಹಾಡುವ ಹುಚ್ಚು ಹತ್ತಿತ್ತು. ಆಕೆ ಹಾಸನದ ದೇವರಾಜ್ ಎಂಬಾತನ ಜೊತೆಗೆ ಯುಗಳ ಗೀತೆಗಳನ್ನು ಹಾಡಿ ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡುತ್ತಿದ್ದರು. ಕೆಲವು ತಿಂಗಳಿಂದ ಶಿಲ್ಪಾ ಮತ್ತು ದೇವರಾಜ್ ಹೀಗೆ ಆಪ್ನಲ್ಲಿ ಯುಗಳ ಗೀತೆಗಳನ್ನು ಹಾಡುತ್ತಿದ್ದರು.

ಹಾಡು ಹಾಡುವ ಮನವಿಗೆ ದೇವರಾಜ್ ಸ್ಪಂದಿಸಿಲ್ಲ
ಆದರೆ ತನ್ನ ಜೊತೆ ಆಪ್ನಲ್ಲಿ ಹಾಡು ಹಾಡುತ್ತಿದ್ದ ದೇವರಾಜ್ ಹಾಡು ಹಾಡಲು ಸ್ಪಂದಿಸಲಿಲ್ಲವೆಂದು ಶಿಲ್ಪಾ ಇಂದು ತನ್ನ ನಿವಾಸದಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಯುವುದಾಗಿ ದೇವರಾಜ್ಗೆ ಮೆಸೆಜ್ ಮಾಡಿದ್ದ ಶಿಲ್ಪಾ
ಶುಕ್ರವಾರ ತಡರಾತ್ರಿ ಶಿಲ್ಪಾ, ಯುವಕನಿಗೆ ಫೇಸ್ಬುಕ್ ಮೆಸೆಂಜರ್ ಮೂಲಕ ಕರೆ ಮಾಡಿದ್ದಾಗ ಆತ ಕರೆ ಸ್ವೀಕರಿಸಿಲ್ಲ. ಕೊನೆಗೆ 'ನನ್ನನ್ನು ನೀನು ದೂರ ಮಾಡುತ್ತಿದ್ದೀಯಾ' ಎಂದು ಮೆಸೇಜ್ ಮಾಡಿದ್ದಾಳೆ. ಹೀಗೆ ಇಬ್ಬರ ನಡುವೆ ಚಾಟಿಂಗ್ ಮುಂದುವರಿದಿದೆ. ಚಾಟಿಂಗ್ ಮಾಡುತ್ತಿದ್ದಾಗಲೇ ಶಿಲ್ಪಾ ಸಾಯುವುದಾಗಿ ಹೇಳಿ, ಯುವಕನಿಗೆ ನೇಣು ಕುಣಿಕೆಯ ಫೋಟೋವೊಂದನ್ನು ಕಳುಹಿಸಿದ್ದಾಳೆ. ಫೋಟೋ ಕಳುಹಿಸಿದ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬಂಗಾರಪೇಟೆಗೆ ಹೋಗಿದ್ದ ಪತಿ
ಶಿಲ್ಪಾ ಪತಿ ಮಕ್ಕಳನ್ನು ಕರೆದುಕೊಂಡು ಮಹಾಲಾಯ ಅಮಾವಾಸ್ಯೆ ಪ್ರಯುಕ್ತ ಬಂಗಾರಪೇಟೆಗೆ ಹೋಗಿದ್ದರು. ಇಂದು (ಸೆಪ್ಟೆಂಬರ್ 28) ಬೆಳಿಗ್ಗೆ ಪತ್ನಿಗೆ ಕರೆ ಮಾಡಿದಾಗ ಶಿಲ್ಪಾ ಕರೆ ಸ್ವೀಕರಿಸಲಿಲ್ಲ, ಅನುಮಾನಗೊಂಡ ಪತಿ ಮನೆ ಮಾಲೀಕರಿಗೆ ಕರೆ ಮಾಡಿ ಮನೆಯ ಒಳಗೆ ನೋಡಲು ಹೇಳಿದ್ದಾರೆ. ಕಿಟಕಿಯಿಂದ ನೋಡಿದಾಗ ಶಿಲ್ಪಾ ನೇಣು ಬಿಗಿದುಕೊಂಡಿರುವುದು ಪತ್ತೆ ಆಗಿದೆ.

ಪೊಲೀಸರು ಹೇಳುವುದೇನು?
ಈ ಮಾಧ್ಯಮಗಳ ವರದಿ ಕುರಿತು ಎಸ್ಪಿ ಕೆ.ಸಂತೋಷ್ ಬಾಬು ಅವರನ್ನು ವಿಚಾರಿಸಿದಾಗ, 'ಶಿಲ್ಪಾ ಅವರ ಕುಟುಂಬದವರು ಯಾರ ವಿರುದ್ಧವೂ ಪ್ರಕರಣ ದಾಖಲಿಸಿಲ್ಲ. ನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ದೂರಿನಡಿ ಪ್ರಕರಣ ದಾಖಲಾಗಿದೆ. ವದಂತಿಯ ಆಯಾಮದಿಂದ ಕೂಡ ತನಿಖೆ ನಡೆಸುತ್ತೇವೆ. ಬಳಿಕವಷ್ಟೇ ಆತ್ಮಹತ್ಯೆಯ ನಿಖರ ಕಾರಣ ಹೇಳಲು ಸಾಧ್ಯ' ಎಂದು ತಿಳಿಸಿದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications