ಮತದಾನ ಮಾಡದೆ ಕಳ್ತಪ್ಪಿಸಿ ನಂದಿಬೆಟ್ಟಕ್ಕೆ ಪ್ರವಾಸ ಹೋದರೆ ಹುಷಾರ್!
ಚಿಕ್ಕಬಳ್ಳಾಪುರ, ಏಪ್ರಿಲ್ 17: ಚುನಾವಣೆಯ ದಿನದಂದು ಸಿಗುವ ರಜೆಯನ್ನು ಅನೇಕರು ಪ್ರವಾಸದ ಮೋಜು ಮಸ್ತಿಗಾಗಿ ಬಳಸಿಕೊಳ್ಳುತ್ತಿದ್ದಾರೆ. ಬೆಂಗಳೂರಿನ ಅನೇಕರು ಮತದಾನದ ದಿನದಂದು ಸಿಗುವ ರಜೆಯಂದು ಪ್ರವಾಸಕ್ಕೆ ತೆರಳುತ್ತಾರೆ. ಒಂದು ದಿನದ ಪ್ರವಾಸಕ್ಕಾಗಿ ಅವರಿಗೆ ಸಮೀಪದ ನಂದಿಬೆಟ್ಟ ನೆಚ್ಚಿನ ತಾಣ. ಆದರೆ, ಈ ಬಾರಿ ಮತದಾನದ ಮಾಡದೆ ನಂದಿಬೆಟ್ಟದಲ್ಲಿ ಸುತ್ತಾಡಿ ಬರೋಣ ಎಂದು ಹೋಗಬೇಡಿ, ಜಾಗ್ರತೆ!
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಏಕೆಂದರೆ, ಮತದಾನದ ವಯಸ್ಸು ದಾಟಿರುವ ವ್ಯಕ್ತಿಗಳು ಮತಚಲಾಯಿಸದೆ ನಂದಿಬೆಟ್ಟಕ್ಕೆ ತೆರಳಿದರೆ ಅಲ್ಲಿ ಒಳಗೆ ಪ್ರವೇಶವನ್ನೇ ನೀಡಲಾಗುವುದಿಲ್ಲ. ಇಂಥದ್ದೊಂದು ವಿನೂತನ ಕ್ರಮವನ್ನು ಅಲ್ಲಿನ ಜಿಲ್ಲಾಡಳಿತ ತೆಗೆದುಕೊಂಡಿದೆ.

ಬೆಂಗಳೂರಿಗರು ಮತ್ತು ಸುತ್ತಮುತ್ತಲಿನ ಜನರು ಗುರುವಾರ ಮತದಾನ ಮಾಡದೆ ನಂದಿಬೆಟ್ಟವನ್ನು ಏರಿದರೆ ಪ್ರವೇಶ ನೀಡುವುದಿಲ್ಲ. ಮತದಾನ ಮಾಡಿಬಂದರೆ ಮಾತ್ರ ಪ್ರವೇಶ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಸೂಚನೆ ಹೊರಡಿಸಿದ್ದಾರೆ.
ಮತದಾನ ಮಾಡಲು ಸಹಾಯವಾಗಲಿ ಎಂಬ ಉದ್ದೇಶದಿಂದ ಸರ್ಕಾರ ಸಾರ್ವತ್ರಿಕ ರಜೆ ನೀಡಿದೆ. ಆದರೆ, ಅದನ್ನು ದುರುಪಯೋಗ ಪಡಿಸಿಕೊಂಡು ಮತದಾನ ಮಾಡದೆ ವೈಯಕ್ತಿಕ ಕೆಲಸಗಳನ್ನು ಮಾಡಿಕೊಳ್ಳಲು ಅಥವಾ ಪ್ರವಾಸದ ಮಜಾಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಇದನ್ನು ಗಮನಿಸಿರುವ ಜಿಲ್ಲಾಡಳಿತ ಈ ಕ್ರಮ ತೆಗೆದುಕೊಂಡಿದೆ. ಒಂದು ವೇಳೆ ಮತ ಚಲಾಯಿಸುವ ಅರ್ಹತೆ ಹೊಂದಿದ್ದು, ಮತ ಹಾಕದೆಯೇ ನಂದಿಬೆಟ್ಟಕ್ಕೆ ತೆರಳಿ ಆದೇಶ ಉಲ್ಲಂಘನೆ ಮಾಡಿದರೆ ಐಪಿಸಿ ಸೆಕ್ಷನ್ 188ರ ಅಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದೆ.
ಈ ಪ್ರಣಾಳಿಕೆಗಳಲ್ಲಿ ಯಾವುದು ನಿಮ್ಮ ಗಮನ ಸೆಳೆದಿದೆ?
ಗುರುವಾರ ನಂದಿಬೆಟ್ಟಕ್ಕೆ ತೆರಳುವವರು ಟಿಕೆಟ್ ತೆಗೆದುಕೊಂಡು ಈ ಮೊದಲಿನಂತೆ ಮುಂದೆ ಸಾಗಲು ಸಾಧ್ಯವಿಲ್ಲ. ತಮ್ಮ ಕೈಬೆರಳಿನ ಮೇಲೆ ಇರುವ ಅಳಿಸಲಾಗದ ಶಾಹಿ ಗುರುತನ್ನು ತೋರಿಸಲೇಬೇಕು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications