Doddaballapur: ರೆಸ್ಟೋರೆಂಟ್ ಪರವಾನಗಿ ನವೀಕರಿಸಲು ಲಂಚ: ಪಂಚಾಯತಿ ಅಧಿಕಾರಿ ಲೋಕಾಯುಕ್ತ ಬಲೆಗೆ
ದೊಡ್ಡಬಳ್ಳಾಪುರ ಮೇ 8: ರೆಸ್ಟೋರೆಂಟ್ ಪರವಾನಗಿ ನವೀಕರಿಸಲು ₹5 ಲಕ್ಷಕ್ಕೆ ಬೇಡಿಕೆ ಇಟ್ಟು, ₹3.50 ಲಕ್ಷ ಲಂಚ ಪಡೆಯುವಾಗ ಅರಳುಮಲ್ಲಿಗೆ ಗ್ರಾಮ ಪಂಚಾಯ್ತಿ ಪಿಡಿಒ ಎಂ.ಜಿ.ನಿರಂಜನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ತಾಲೊಕಿನ ಅರಳುಮಲ್ಲಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ರೆಸ್ಟೋರೆಂಟ್ ಜನರಲ್ ಲೈಸನ್ಸ್ ಹೊಂದಿರುವ ನರಸಿಂಹಮೂರ್ತಿ ಎಂಬುವವರು ಪರವಾನಗಿ ನವೀಕರಣಕ್ಕೆ ಪಿಡಿಒ ಬಳಿ ಹೋಗಿದ್ದರು.

ಪರವಾನಗಿ ನವೀಕರಿಸಿಕೊಡಲು ₹5 ಲಕ್ಷ ಲಂಚದ ಹಣಕ್ಕೆ ಪಿಡಿಒ ಬೇಡಿಕೆ ಇಟ್ಟಿದ್ದರು. ಕೊನೆಗೂ ₹3.50 ಲಕ್ಷಕ್ಕೆ ಮಾತುಕತೆಯಾಗಿತ್ತು. ನರಸಿಂಹಮೂರ್ತಿ ಅವರು ನೀಡಿದ ದೂರಿನ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮಂಗಳವಾರ ಪಿಡಿಒ ನಿರಂಜನ್ ಅವರು ದೊಡ್ಡಬಳ್ಳಾಪುರ ತಾಲೂಕು ಪಂಚಾಯ್ತಿ ಆವರಣದಲ್ಲಿರುವ ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕರ ಕೊಠಡಿಯಲ್ಲಿ ₹3.50 ಲಕ್ಷ ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಮಾತನಾಡಿದ ದೂರುದಾರ ನರಸಿಂಹಮೂರ್ತಿ, ನನಗೆ ಹೃದಯ ಶಸ್ತ್ರ ಚಿಕಿತ್ಸೆಯಾಗಿದೆ, ಬಾರ್ ವ್ಯವಹಾರ ಬಿಟ್ಟರೆ ನನಗೆ ಬೇರೆ ಉದ್ಯೋಗ ಗೊತ್ತಿಲ್ಲ, ಇದ್ದ ಜಮೀನು ಮಾರಾಟ ಮಾಡಿ ಬಾರ್ ಪರವಾನಗಿ ಪಡೆದಿದ್ದೇನೆ. ಅರಳುಮಲ್ಲಿಗೆ ಪಂಚಾಯ್ತಿ ಪಿಡಿಒ ನನ್ನ ಕೆಲಸ ಮಾಡಲು ಕಳೆದ ಎರಡು ವರ್ಷಗಳಿಂದ ಸತಾಯಿಸುತ್ತಿದ್ದಾನೆ. ಕ್ಷೇತ್ರದ ಶಾಸಕರು, ತಾಲ್ಲೂಕು ಪಂಚಾಯಿತಿ ಅಧಿಕಾರಿ ಇಒ ಸೇರಿದಂತೆ ಯಾರೇ ಹೇಳಿದರು ಕೆಲಸ ಮಾಡುವುದಿಲ್ಲ ಎಂದು ಆರೋಪಿಸಿದರು.

ಪಿಡಿಓ ನನ್ನ ಬಾರ್ ಪರವಾನಗಿಗೆ ಸಂಬಂದಿಸಿದಂತೆ ಈವರೆಗೆ ವಾಣಿಜ್ಯ ಪೇಪರ್ ನೀಡಲು ಮೂರು ಲಕ್ಷ, ರೆಸ್ಟೋರೆಂಟ್ ಪರವಾನಗಿಗೆ 2.50 ಲಕ್ಷ ತಗೊಂಡಿದ್ದಾನೆ. ಈಗ ನವೀಕರಣ ಮಾಡಿಕೊಡಲು ಐದು ಲಕ್ಷ ಕೇಳಿದ್ದ ಎಂದು ಆರೋಪಿಸಿದ ಅವರು, ಚೌಕಾಸಿ ಮಾಡಿದ್ದಕ್ಕೆ 3.50 ಲಕ್ಷ ಕೊಡಬೇಕು ಎಂದು ಕೇಳಿದ್ದರು. ಇಂದು ಲೋಕಾಯುಕ್ತರ ಮೂಲಕ ಹಣ ತಂದು ಕೊಟ್ಟಿದ್ದೇನೆ, ಅಧಿಕಾರಿಗಳು ದಾಳಿ ನಡೆಸಿ ಹಣದ ಸಮೇತ ಪಿಡಿಒ ಅವರನ್ನು ಹಿಡಿದುಕೊಂಡಿದ್ದಾರೆ ಎಂದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications