ದೋಭಿಘಾಟ್ ನಿರ್ಮಿಸಲು ಮಡಿವಾಳರಿಗೆ 2 ಎಕರೆ ಜಮೀನು: ಸುಧಾಕರ್
ಚಿಕ್ಕಬಳ್ಳಾಪುರ, ಫೆಬ್ರವರಿ 19: ಚಿಕ್ಕಬಳ್ಳಾಪುರದಲ್ಲಿ ದೋಭಿಘಾಟ್ ನಿರ್ಮಿಸಲು 2 ಎಕರೆ ಜಮೀನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಮಡಿವಾಳ ಮಾಚಿದೇವ ಸಂಘದಿಂದ ಏರ್ಪಡಿಸಿದ್ದ ವಿದ್ಯಾರ್ಥಿ ನಿಲಯದ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ದೋಭಿ ಘಾಟ್ ನಿರ್ಮಾಣಕ್ಕೆ 2 ಎಕರೆ ಜಮೀನು ಮಂಜೂರು ಮಾಡಲಾಗುವುದು. ವಿದ್ಯಾರ್ಥಿ ನಿಲಯಕ್ಕೆ ಬೇಕಾಗುವ ಹೆಚ್ಚುವರಿ ಹಣವನ್ನೂ ನೀಡಲಾಗುವುದು. ಜಿಲ್ಲೆಯಲ್ಲಿ ಮಡಿವಾಳರಿಗೆ 500 ಇಸ್ತ್ರಿ ಪೆಟ್ಟಿಗೆ ನೀಡುವ ಬೇಡಿಕೆಯನ್ನೂ ಈಡೇರಿಸಲಾಗುವುದು ಎಂದರು.
ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಸಮಾನ ಅವಕಾಶ ನೀಡಿದಾಗ ಅವರು ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ. ಮಡಿವಾಳ ಸಮಾಜ ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿದೆ. ಅನೇಕ ಶತಮಾನಗಳಿಂದ ಉಡುಪು ಶುಚಿ ಮಾಡುವ ಕಾಯಕದಲ್ಲಿರುವ ಮಡಿವಾಳ ಸಮಾಜದ ಸಾಮಾಜಿಕ ಕಳಕಳಿಗೆ ಅಭಿನಂದನೆ ಸಲ್ಲಿಸಬೇಕು. ಇದನ್ನು ಮುಂದುವರಿಸಬೇಕು. ಆದರೆ ನಗರ ಪ್ರದೇಶಗಳಲ್ಲಿ ಯಂತ್ರಗಳ ಬಳಕೆಯಿಂದಾಗಿ ಆ ಕಸುಬಿಗೂ ಸ್ಪರ್ಧೆ ಬಂದಿದೆ ಎಂದರು.

2 ಎ ನಿಂದ ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡುವ ಬೇಡಿಕೆಯನ್ನು ಮಡಿವಾಳ ಸಮಾಜ ಮುಂದಿಟ್ಟಿದೆ. ಪ್ರತಿ ಸಮುದಾಯ ಕೂಡ ಮೀಸಲು ಬೇಕು ಎಂದು ಬೇಡಿಕೆ ಇಡುತ್ತಿದೆ. ಅನೇಕ ಸಮುದಾಯಗಳ ಗುರುಗಳು ಬೇಡಿಕೆ ಇಟ್ಟಿದ್ದಾರೆ. ರಾಜ್ಯ ಸರ್ಕಾರಕ್ಕೆ ಇದು ಸವಾಲಿನ ಪ್ರಶ್ನೆಯಾಗಿದ್ದು, ರಾಜಕೀಯ ತೀರ್ಮಾನಗಳನ್ನು ಕೈಗೊಳ್ಳಲು ಸಾಧವಿಲ್ಲ. ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ವಿಶೇಷ ಅವಕಾಶ ನಿರ್ಮಿಸಬೇಕು. ಮೀಸಲಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಸಲಹೆ ನೀಡಲಾಗಿದೆ ಎಂದರು.
ಕೆಲ ರಾಜ್ಯಗಳಲ್ಲಿ ರಾಜಕೀಯ ಕಾರಣಕ್ಕಾಗಿ ಮೀಸಲು ಪ್ರಮಾಣ ಹೆಚ್ಚಿಸಲಾಗಿದೆ. ವೈಜ್ಞಾನಿಕವಾಗಿ ಅಧ್ಯಯನ ಮಾಡಿ, ಆ ವರದಿ ಆಧರಿಸಿಯೇ ಮೀಸಲು ನೀಡಬೇಕಾಗುತ್ತದೆ ಎಂದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications