ಹವಾಮಾನ ವೈಪರೀತ್ಯ: ಮಾವಿನ ಇಳುವರಿ ಕುಸಿತ, ಹಣ್ಣು ದುಬಾರಿ
ಚಿಕ್ಕಬಳ್ಳಾಪುರ, ಮೇ 15: ಜಿಲ್ಲೆಯಲ್ಲಿ ಸುಮಾರು ದಿನಗಳಿಂದ ಹವಾಮಾನ ದಲ್ಲಿ ಉಂಟಾಗಿರುವ ವೈಪರೀತ್ಯದಿಂದಾಗಿ ಮಾವಿನ ಇಳುವರಿ ಕುಸಿತ ಕಂಡಿದೆ. ಇದರಿಂದಾಗಿ ಗ್ರಾಹಕರಿಗೆ ಮಾವಿನ ಹಣ್ಣು ದುಬಾರಿಯಾಗುತ್ತಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜೂನ್, ಜುಲೈ ತಿಂಗಳಲ್ಲಿ ಮಾವು ಮಾರುಕಟ್ಟೆಗೆ ಬರಲಿದೆ. ಇದಕ್ಕೂ ಮೊದಲು ರಾಮನಗರ ಮಾವಿನ ಹಣ್ಣು ಮಾರುಕಟ್ಟೆಗೆ ಕಾಲಿಟ್ಟಿದ್ದು ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದೆ. ಕಳೆದ ಮೂರ್ನಾಲ್ಕು ದಿನದಿಂದ ಜಿಲ್ಲೆಯಲ್ಲಿ ಮಳೆ, ಗಾಳಿ ಹೆಚ್ಚಿದ್ದು ಇಳುವರಿ ಮೇಲೆ ಪರಿಣಾಮ ಬೀರುತ್ತಿದೆ.

ಮಾರುಕಟ್ಟೆಯಲ್ಲಿ ರಾಮನಗರ ಹಣ್ಣಿಗೆ ಹೆಚ್ಚು ಬೆಲೆ ಇರುವುದನ್ನು ಕಂಡ ರೈತರು ಈ ಬಾರಿ ಮಾರುಕಟ್ಟೆಯಲ್ಲಿ ಹೆಚ್ಚು ಬೆಲೆ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಹವಾಮಾನದ ವೈಪರೀತ್ಯದಿಂದ ಮಾವು ಬೆಳೆಗಾರರು ಈಗ ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿ ಪ್ರಮುಖವಾಗಿ ಬದಾಮಿ, ರಸಪುರಿ, ಸೇಂದೂರ, ಮಲ್ಲಿಕ, ನೀಲಂ ಹಾಗೂ ತೋತಾಪುರಿ ತಳಿಯ ಮಾವು ಹೆಚ್ಚು ಅವಕ ಆಗುತ್ತಿದೆ. ಬೈಗನ್ಪಲ್ಲಿ ಕಡಿಮೆ ಪ್ರಮಾಣದಲ್ಲಿ ಬರುತ್ತಿದೆ.
ಮಲ್ಲಿಕ, ಮಲಗೋವ ಮತ್ತಿತರ ತಳಿಗಳ ಮಾವು ನಂತರದಲ್ಲಿ ಇಳುವರಿ ಆಗಲಿವೆ. ಬದಾಮಿ, ರಸಪುರಿ, ಸೇಂದೂರ, ಬೇನಿಶ ಹೆಚ್ಚಾಗಿ ಹೊರ ರಾಜ್ಯ ಹಾಗೂ ವಿದೇಶಗಳಿಗೂ ರಫ್ತು ಆಗುತ್ತದೆ. ಹಿಂದಿನ ವರ್ಷ ಸಹ ಮಾವಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಇದ್ದ ಕಾರಣ ಬೆಲೆ ಸಹ ಅಧಿಕವಾಗಿತ್ತು.
ಕಾಯಿ ಗುಣಮಟ್ಟ ಹೆಚ್ಚಿಸಲು ಕವರ್ ಅಳವಡಿಕೆ
ಮಾರುಕಟ್ಟೆಯಲ್ಲಿ ಹೆಚ್ಚು ಬೆಲೆ ಮಾವನ್ನು ಮಾರಾಟ ಮಾಡಬೇಕು ಎಂಬ ಉದ್ದೇಶದಿಂದ ಬೆಳೆಗಾರರು ಗಿಡದಲ್ಲೇ ಗುಣಮಟ್ಟ ಹೊಂದಿದೆ. ಕಾಯಿಯನ್ನು ರಕ್ಷಣೆ ಮಾಡಲು ಪ್ರೋಟ್ ಕವರ್ ಅಳವಡಿಸುವ ಮೂಲಕ ಗುಣಮಟ್ಟದ ಫಸಲು ಬೆಳೆಯಲು ಒತ್ತು ನೀಡಿದ್ದಾರೆ. ಕವರ್ ಕಟ್ಟುವುದರಿಂದ ಕಾಯಿಯ ಮೇಲೆ ಮಚ್ಚೆ, ಹೂಜಿ ರೋಗ ನಿಯಂತ್ರಿಸಬಹುದಾಗಿದೆ.

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ
ಮಾರಕಟ್ಟೆಯಲ್ಲಿ ಬದಾಮಿ ಕೆಜಿಗೆ 200 ರಿಂದ 250ರೂ ರಾಜಗಿರ ಕೆಜಿ 70ರಿಂದ 150, ತೋತಪುರಿ ಕೆಜಿ 100 ರೂಪಾಯಿಗೆ ಮಾರಾಟವಾಗುತ್ತಿದ್ದು ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಜಿಲ್ಲೆಯಲ್ಲಿ ಬೆಳೆಯುವ ಬದಾಮಿ, ಮಲ್ಲಿಕ, ರಸಪುರಿಗೆ ಬೇಡಿಕೆ ಹೆಚ್ಚಿರುತ್ತದೆ. ಇದರಿಂದಾಗಿ ರಫ್ತು ಗುಣಮಟ್ಟ ಹೊಂದಿದೆ.
ಈ ಬಾರಿ ಹೊರ ರಾಜ್ಯದ ವ್ಯಾಪಾರಸ್ಥರು ಹೆಚ್ಚಾಗಿ ಆಗಮಿಸಲಿದ್ದು ಹೆಚ್ಚು ಬೆಲೆ ಸಿಗಲಿದೆ. ತೋತಮರಿ ತಳಿಯು ಹೆಚ್ಚಾಗಿ ಜ್ಯೂಸ್ ಹಾಗೂ ತಿರುಳು ತೆಗೆಯುವುದಕ್ಕೆ ಹೋಗುವುದರಿಂದ ಜ್ಯೂಸ್ ಫ್ಯಾಕ್ಟರಿ ಮಾಲೀಕರು ಜುಲೈ ತಿಂಗಳಿಂದ ಮಾವು ಖರೀದಿಗೆ ಮಾರುಕಟ್ಟೆಗೆ ಆಗಮಿಸಲಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ನಂತರ ಅತಿ ಹೆಚ್ಚು ಮಾವು ಬೆಳೆಯನ್ನು ಚಿಕ್ಕಬಳ್ಳಾಪುರದಲ್ಲಿ ಬೆಳೆಯುತ್ತಾರೆ. ಪ್ರತಿ ವರ್ಷ 14 ಸಾವಿರ ಹೆಕ್ಟೇರಿಗೂ ಹೆಚ್ಚು ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದ್ದು 10ರಿಂದ 15 ಲಕ್ಷ ಟನ್ನಷ್ಟು ಮಾವು ಉತ್ಪಾದನೆಯಾಗುತ್ತಿದೆ. ಹಿಂದಿನ ವರ್ಷಗಳಿಗೆ ಹೋಲಿಕೆ ಮಾಡಿದರೆ ಇಳುವರಿ ಕುಸಿಯುವ ಆತಂಕ ಬೆಳೆಗಾರರಲ್ಲಿದೆ. ಈ ಬಾರಿ ರೈತರಿಗೆ ಉತ್ತಮ ಬೆಲೆ ಸಿಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಮಾರುಕಟ್ಟೆಗೆ ಬದಾಮಿ, ರಸಪುರಿ, ಸೇಂದೂರ ಹಾಗೂ ತೋತಾಪುರಿ ತಳಿಯ ಮಾವು ಹೆಚ್ಚು ಅವಕ ಆಗುತ್ತಿದೆ. ಬೈಗನ್ಪಲ್ಲಿ ಕಡಿಮೆ ಪ್ರಮಾಣದಲ್ಲಿ ಬರುತ್ತಿದೆ. ಮಲ್ಲಿಕ, ಮಲಗೋವ ಮತ್ತಿತರ ತಳಿಗಳ ಮಾವು ನಂತರದಲ್ಲಿ ಅವಕ ಆಗಲಿವೆ. ಇವುಗಳ ಆವಕ ಹೆಚ್ಚಾದರೂ ಗ್ರಾಹಕರಿಗೆ ಸಿಗುವ ಹಣ್ಣಿನ ಬೆಲೆ ಇಳಿಯುವ ಸಾಧ್ಯತೆ ಕಡಿಮೆ ಎನ್ನುತ್ತಾರೆ ವರ್ತಕರು.
ಮಾವಿನ ಗಿಡಗಳಲ್ಲಿ ಹೂವು ಬಿಡುವ ಸಮಯದಲ್ಲೂ ಸಹ ಹವಾಮಾನ ಬದಲಾವಣೆಯಿಂದ ಮಳೆ ಹೆಚ್ಚಾಯಿತು. ಇದರಿಂದಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿ ಬೂದಿ ರೋಗ, ಕೀಟ ಬಾಧೆ ಕಾಣಿಸಿಕೊಂಡಿತು. ನಂತರ ಹವಾಮಾನದಲ್ಲಿ ಉಂಟಾದ ವೈಪರೀತ್ಯದಿಂದಾಗಿ ಮಚ್ಚೆರೋಗ ಕಾಣಿಸಿಕೊಂಡಿದೆ ಎಂದು ಮಾವು ಬೆಳೆಗಾರ ಬೊಮ್ಮಗಾನಹಳ್ಳಿ ಬಿ.ಪಿ.ಎಲ್. ಪ್ರಭಾಕರ್ ರೆಡ್ಡಿ ಹೇಳಿದ್ದಾರೆ.
ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಮಾವಿನ ಇಳುವರಿ ಕಡಿಮೆಯಿದೆ. ಮಾರುಕಟ್ಟೆಯಲ್ಲಿ ಹೆಚ್ಚು ಬೆಲೆ ಸಿಗಲಿದ್ದು ರೈತರ ಆದಾಯ ಹೆಚ್ಚಾಗುತ್ತದೆ. ಹೊರ ರಾಜ್ಯಗಳ ವ್ಯಾಪಾರಿಗಳು ಈಗಾಗಲೇ ನಮ್ಮನ್ನು ಸಂಪರ್ಕಿಸಿ ಮಾವಿನ ಹಣ್ಣಿಗಾಗಿ ಬೇಡಿಕೆಯಿಟ್ಟಿದ್ದಾರೆ. ರಾಮನಗರ ಜಿಲ್ಲೆಯ ಹಣ ಈ ಕಡೆಗೆ ಬರುವುದರಿಂದ ಈ ಭಾಗದ ಹಣ್ಣಿಗೆ ಬೇಡಿಕೆ ಇದ್ದೆ ಇರುತ್ತದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications