ಕಾಂಗ್ರೆಸ್ ಪಾದಯಾತ್ರೆ ಬೀದಿ ನಾಟಕವಿದ್ದಂತೆ: ಸುಧಾಕರ್ ಲೇವಡಿ
ಚಿಕ್ಕಬಳ್ಳಾಪುರ ಆಗಸ್ಟ್ 21: ಸ್ವಾತಂತ್ರ್ಯ ಬಂದು 75 ವರ್ಷದಲ್ಲಿ ರಾಷ್ಟ್ರಧ್ವಜವನ್ನೇ ಮರೆತಿದ್ದ ಕಾಂಗ್ರೆಸ್ನವರು ಪ್ರಧಾನಿಗಳ 'ಹರ್ ಘರ್ ತಿರಂಗಾ ಘೋಷಣೆ ನಂತರ ಬೆಂಗಳೂರಿನ ಬೀದಿಗಳಲ್ಲಿ ಧ್ವಜ ಹಿಡಿದು ಪಾದಯಾತ್ರೆ ಮಾಡುತ್ತಿದ್ದಾರೆ. ಇದೊಂದು ಕಾಂಗ್ರೆಸ್ನ ಬಯಲು ನಾಟಕ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಲೇವಡಿ ಮಾಡಿದ್ದಾರೆ.
ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಾದಯಾತ್ರೆ ಎಂದು ಬಯಲು ನಾಟಕ ಮಾಡುತ್ತಿರುವ ಕಾಂಗ್ರೆಸ್ ಗೆ ಕಳೆದ 75 ವರ್ಷದಲ್ಲಿ ರಾಷ್ಟ್ರಧ್ವಜ ನೆನಪಿತ್ತೆ?. ಈಗ ಪ್ರಧಾನಿಯವರ ಘೋಷಣೆಯ ನಂತರ ಬೀದಿ ಬೀದಿಗಳಲ್ಲಿ ಧ್ವಜ ಹಿಡಿದು ಪಾದಯಾತ್ರೆ ಮಾಡಿ ಮಾತನಾಡುತ್ತಿದ್ದಾರೆ ಎಂದು ಹರ್ ಘರ್ ತಿರಂಗಾ ಕುರಿತು ಕಾಂಗ್ರೆಸ್ ಹೇಳಿಕೆಗೆ ಅವರು ತಿರುಗೇಟು ನೀಡಿದರು.
ಬಿಜೆಪಿ ಒಂದು ಯಶಸ್ವಿ ಆಡಳಿತ ನೀಡಿದ ಹಿನ್ನೆಲೆ ಜನೋತ್ಸವ ಆಚರಿಸಲಿದೆ. ಈ ಬಗ್ಗೆ ಜನರು ಮಾತನಾಡಬೇಕು. ಮುಂದಿನ 2023ರ ಚುನಾವಣೆಯಲ್ಲಿ ಜನರು ಯಾವ ಪಕ್ಷಕ್ಕೆ ಅಧಿಕಾರ ನೀಡುವ ಮೂಲಕ ಉತ್ತರ ಹೇಳುತ್ತಾರೆ. ಬಿಜೆಪಿ ಭ್ರಷ್ಟವಾಗಿದ್ದರೆ 2018ರಲ್ಲಿ ಯಾಕೆ ಕಾಂಗ್ರೆಸ್ ಯಾಕೆ ಸೋಲುಡಿತು. ಈ ಬಗ್ಗೆ ಕಾಂಗ್ರೆಸ್ ನಾಯಕರು ಪರಾಮರ್ಶೆ ಮಾಡಿಕೊಳ್ಳಲಿ ಎಂದು ಸಿದ್ದರಾಮಯ್ಯ ಅವರ ಜನೋತ್ಸವ ಕುರಿತ ಹೇಳಿಕೆ ಸುಧಾಕರ್ ಪ್ರತಿಕ್ರಿಯಿಸಿದರು.

ವೈಯಕ್ತಿ ಉತ್ಸವ ನೋಡಿ ಜನೋತ್ಸವ ಮಾಡುತ್ತಿಲ್ಲ
ಆರೋಪ ಮಾಡುವಾಗ ವಿಷಯದ ಬಗ್ಗೆ ಸ್ಪಷ್ಟತೆ ಇಟ್ಟುಕೊಂಡು ಮಾತನಾಡಬೇಕು. ಕಳೆದ ಮೂರು ವರ್ಷದಲ್ಲಿ ಸರ್ಕಾರದ ಸಾಧನೆಗಳು ಮತ್ತು ಜನಪರ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ಮುಟ್ಟಿಸಲು ಜನೋತ್ಸವ ಆಯೋಜಿಸಲಾಗಿದೆ. ಸರ್ಕಾರದ ಸಾಧನೆಗಳ ರಿಪೋರ್ಟ್ ಕಾರ್ಡ್ ಜನರ ಮುಂದೆ ಇಡುತ್ತಿದ್ದೇವೆ, ಯಾರದೋ ವೈಯಕ್ತಿಕ ಉತ್ಸವವನ್ನು ಕಂಡು ಜನೋತ್ಸವ ಮಾಡುತ್ತಿಲ್ಲ.
ಈಗಾಗಲೇ ಜನೋತ್ಸವವನ್ನು ಯೋಜಿಸಿದ್ದೆವು, ಆದರೆ ಕಾರಣಾಂತರಗಳಿಂದ ಮುಂದೂಡಲಾಗಿತ್ತು, ಈಗ ಕಾಲ ಕೂಡಿ ಬಂದಿದೆ ಹಾಗಾಗಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಮೊದಲ ಕಾರ್ಯಕ್ರಮ ದೊಡ್ಡಬಳ್ಳಾಪುರದಲ್ಲಿ ನಡೆಯಲಿದ್ದು, ಇನ್ನೂ ನಾಲ್ಕೆದು ಕಾರ್ಯಕ್ರಮವಗಳನ್ನು ರಾಜ್ಯದಲ್ಲಿ ಆಯೋಜಿಸಲು ಪಕ್ಷ ನಿರ್ಧರಿಸಿದೆ ಎಂದ ಅವರು ವಿವರಿಸಿದರು.

ಸಂವಿಧಾನಕ್ಕೆ ಅಪಚಾರವಾಗಿದ್ದರೆ ತೋರಿಸಲಿ
ಸಂವಿಧಾನಕ್ಕೆ ಬಿಜೆಪಿಯಿಂದ ಅಪಾಯ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕಳೆದ 8 ವರ್ಷಗಳಿಂದ ನರೇಂದ್ರಮೋದಿ ಅವರು ಪ್ರಧಾನಿಯಾಗಿದ್ದಾರೆ. ಅದರ ಹಿಂದೆ ದಿ.ಅಟಲ್ ಬಿಹಾರಿ ವಾಜಪೇಯಿ ಅವರು ಐದು ವರ್ಷ ದೇಶದ ಪ್ರಧಾನಿಯಾಗಿದ್ದರು. ಒಟ್ಟು 13 ವರ್ಷದಲ್ಲಿ ಸಂವಿಧಾನಕ್ಕೆ ಆಗಿರುವ ಧಕ್ಕೆಯಾದರೂ ಏನು? ಎಂದು ಸುಧಾಕರ್ ಸಿದ್ದರಾಮಯ್ಯರನ್ನು ಪ್ರಶ್ನಿಸಿದರು.
ಸಂವಿಧಾನಕ್ಕೆ ಏನು ಅಪಚಾರವಾಗಿದೆ ಎಂಬುದನ್ನು ಸುಖಾಸುಮ್ಮನೆ ಆರೋಪಿಸುತ್ತಿರುವರು ತೋರಿಸಿ ನಂತರ ಮಾತನಾಡಲಿ. ಅದನ್ನು ಬಿಟ್ಟು ನಿಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಜನರಿಗೆ ಮಂಕು ಬೂದಿ ಎರಚುವ ಕೆಲಸ ಮಾಡಬೇಡಿ ಎಂದು ಸಿದ್ದರಾಮಯ್ಯಗೆ ತಿರುಗೇಟು ನೀಡಿದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications