ಗೌರಿಬಿದನೂರು-ಚಿಕ್ಕಬಳ್ಳಾಪುರ ಹೆದ್ದಾರಿ ಕಾಮಗಾರಿ ಚುರುಕುಗೊಳಿಸಿ
ಚಿಕ್ಕಬಳ್ಳಾಪುರ, ಜನವರಿ 3: ರಾಷ್ಟ್ರೀಯ ಹೆದ್ದಾರಿ 234 ರ ಗೌರಿಬಿದನೂರಿನಿಂದ ಚಿಕ್ಕಬಳ್ಳಾಪುರವರೆಗಿನ 50.66 ಕಿ.ಮೀ. ಉದ್ದದ ರಸ್ತೆ ಕಾಮಗಾರಿಯನ್ನು 2021 ರ ಮೇ ತಿಂಗಳೊಳಗಾಗಿ ಪೂರ್ಣಗೊಳಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಶನಿವಾರ ಸಂಜೆ ರಸ್ತೆ ಕಾಮಗಾರಿ ಪರಿಶೀಲಿಸಿದ ಸಚಿವ ಡಾ.ಕೆ.ಸುಧಾಕರ್, ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳಿಗೆ ಕಾಮಗಾರಿಗೆ ಚುರುಕು ನೀಡುವಂತೆ ಸೂಚಿಸಿದರು.
106.50 ಕೋಟಿ ರೂ. ಮೊತ್ತದ ರಸ್ತೆ ನಿರ್ಮಾಣ ಕಾಮಗಾರಿಯನ್ನು ಸೆಲ್ ಅಸೈನಿಯ ಎಂಬ ಕಂಪನಿಗೆ ಗುತ್ತಿಗೆ ನೀಡಿದ್ದು, 2015 ರ ಜುಲೈ ನಲ್ಲಿ ಕಾಮಗಾರಿ ಆರಂಭವಾಗಿ 2017 ರ ಜುಲೈ ನಲ್ಲಿ ಪೂರ್ಣಗೊಳ್ಳಬೇಕಿತ್ತು. ಈ ಕಂಪನಿಯು ಕಾಮಗಾರಿಯನ್ನು ಅಸಮರ್ಪಕವಾಗಿ ಮಾಡಿ 2018 ರ ಜುಲೈನಲ್ಲಿ ಕೈ ಬಿಟ್ಟಿತ್ತು. 2018 ರ ಜುಲೈ ನಿಂದ 2019 ರವರೆಗೆ ರಸ್ತೆ ಕಾಮಗಾರಿ ನಡೆದಿರಲಿಲ್ಲ. ಇದರಿಂದಾಗಿ ಸುತ್ತಮುತ್ತಲಿನ ಹಳ್ಳಿಗಳ ಜನರು ಸಂಚರಿಸಲು ಸಾಧ್ಯವಾಗದೆ ಪರದಾಡುತ್ತಿದ್ದರು. ಈ ಭಾಗದ ರೈತರು, ಕಾರ್ಮಿಕರು ನಿತ್ಯದ ಚಟುವಟಿಕೆಗಳಿಗೆ ಸಂಚಾರ ಮಾಡಬೇಕಿದ್ದು, ಅಪೂರ್ಣ ಕಾಮಗಾರಿಯಿಂದಾಗಿ ಸಂಚಾರ ಕಷ್ಟವಾಗಿತ್ತು.

ಹೆದ್ದಾರಿಗಳ ಸಚಿವಾಲಯದ ಹಿರಿಯ ಅಧಿಕಾರಿಗಳ ಸಭೆ
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, 2020 ರ ಫೆಬ್ರವರಿಯಲ್ಲಿ ಉಪ ಗುತ್ತಿಗೆದಾರರನ್ನು ನಿಯೋಜಿಸುವಂತೆ ಕ್ರಮ ಕೈಗೊಂಡಿದ್ದರು. ನಂತರ 2020 ರ ಜೂನ್ ನಲ್ಲಿ ಕಾಮಗಾರಿ ಪುನರಾರಂಭಗೊಂಡು ಮಂದಗತಿಯಲ್ಲಿ ನಡೆಯುತ್ತಿದೆ.

ಕಾಮಗಾರಿಗೆ ಚುರುಕು ನೀಡಿ ವೇಗವಾಗಿ ಮುಗಿಸಬೇಕು
ಶನಿವಾರ ಪರಿಶೀಲನೆ ನಡೆಸಿದ ಸಚಿವ ಡಾ.ಕೆ.ಸುಧಾಕರ್, ಕಾಮಗಾರಿಗೆ ಚುರುಕು ನೀಡಿ ವೇಗವಾಗಿ ಮುಗಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಪರಿಶೀಲನೆ ವೇಳೆ ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಲ್ಲಿಕಾರ್ಜುನ ಕಾಮಗಾರಿ ಪ್ರಗತಿ ಕುರಿತು ಸಚಿವರಿಗೆ ಮಾಹಿತಿ ನೀಡಿದರು.

ಸುಧಾಕರ್ ಕಟ್ಟುನಿಟ್ಟಿನ ಸೂಚನೆ ನೀಡಿದರು
ಇದಲ್ಲದೆ, ಚಿಕ್ಕಬಳ್ಳಾಪುರ ನಗರದ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿ ಕಚೇರಿವರೆಗಿನ ರಸ್ತೆಯನ್ನು ನಾಲ್ಕು ಪಥದ ರಸ್ತೆಯಾಗಿ ನಿರ್ಮಿಸಬೇಕು. ಹಾಗೆಯೇ ಎರಡೂ ಬದಿ ಚರಂಡಿ ನಿರ್ಮಿಸಬೇಕು. ಬಾಕಿ ಉಳಿದ ಯಾವುದೇ ಕಾಮಗಾರಿಗಳನ್ನು ಗುಣಮಟ್ಟದಿಂದ ಮಾಡಬೇಕು ಎಂದು ಸಚಿವ ಡಾ.ಕೆ.ಸುಧಾಕರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಹಿರಿಯ ಅಧಿಕಾರಿಗಳು
ರಾಷ್ಟ್ರೀಯ ಹೆದ್ದಾರಿ ಮುಖ್ಯ ಎಂಜಿನಿಯರ್ ಗೋವಿಂದರಾಜು, ಕೇಂದ್ರ ಭೂ ಸಾರಿಗೆಯ ಮುಖ್ಯ ಎಂಜಿನಿಯರ್ ವಿಜಯಕುಮಾರ್, ಅಧೀಕ್ಷಕ ಎಂಜಿನಿಯರ್ ಸದಾನಂದ ಬಾಬು, ರಾಷ್ಟ್ರೀಯ ಹೆದ್ದಾರಿಯ ಅಧೀಕ್ಷಕ ಎಂಜಿನಿಯರ್ ಸತೀಶ್, ಕಾರ್ಯನಿರ್ವಾಹಕ ಎಂಜಿನಿಯರ್ ಹೇಮಲತ ಪರಿಶೀಲನೆ ವೇಳೆ ಹಾಜರಿದ್ದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications