Get Updates
Get notified of breaking news, exclusive insights, and must-see stories!

ಯೋಗ ದಿನಾಚರಣೆಯಲ್ಲಿ ಉಸ್ತುವಾರಿ ಸಚಿವ, ಚಿಕ್ಕಬಳ್ಳಾಪುರ ಸಂಸದ ಭಾಗಿ: ಸ್ಥಳೀಯ ಶಾಸಕ ಪ್ರದೀಪ್ ಈಶ್ವರ್ ಗೈರು!

ಚಿಕ್ಕಬಳ್ಳಾಪುರ ಜೂನ್ 21: ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಇಂದು ನಡೆದ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ಸಂಸದ ಡಾ.ಕೆ.ಸುಧಾಕರ್ ಅವರು ಚಾಲನೆ ನೀಡಿದರು. ಆದರೆ ಈ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ಗೈರಾಗಿದ್ದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯೋಗ ಸಂಸ್ಥೆಗಳ ಸಹಯೋಗದೊಂದಿಗೆ 10 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.

Ministers MPs participate in Yoga Day celebrations MLA Pradeep Eshwar is absent

ಡಾ.ಕೆ.ಸುಧಾಕರ್ ಅವರು ಸಂಸದರಾದ ಬಳಿಕ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ಮೂಲಕ ಜಿಲ್ಲೆಯಲ್ಲಿ ಪ್ರಥಮ ಸರ್ಕಾರಿ ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರೊಂದಿಗೆ ವೇದಿಕೆ ಹಂಚಿಕೊಂಡರು. ಅಲ್ಲದೇ ಇಬ್ಬರು ಅಕ್ಕಪಕ್ಕದಲ್ಲಿ ನಿಂತು ಯೋಗಭ್ಯಾಸ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದು ವಿಶೇಷವಾಗಿತ್ತು.

ಶಾಸಕ ಪ್ರದೀಪ್ ಗೈರು:

ಕ್ಷೇತ್ರದಲ್ಲಿ ಕೇವಲ ಬೆರಳಣಿಕೆಯಷ್ಟೇ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವ ಶಾಸಕ ಪ್ರದೀಪ್ ಈಶ್ವರ್ ಇಂದು ನಡೆದ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಗೈರಾಗಿದ್ದು ಸಾರ್ವಜನಿಕವಾಗಿ ಚರ್ಚೆಗೆ ಗ್ರಾಸವಾಯಿತು.

Ministers MPs participate in Yoga Day celebrations MLA Pradeep Eshwar is absent

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ, ಯೋಗ ಮಾಡುವುದರಿಂದ ದೇಹ ಆರೋಗ್ಯವಾಗಿರುವುದಲ್ಲದೇ, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಶಕ್ತಿ ಯೋಗಕ್ಕಿದೆ. ಮಾನಸಿಕ ಚೈತನ್ಯಕ್ಕೆ ಯೋಗವೇ ಮದ್ದು. ಯೋಗಭ್ಯಾಸ ಪ್ರಚಾರ ಪಡಿಸುವ ಉದ್ದೇಶದಿಂದ ಜೂನ್ 21ಕ್ಕೆ ವಿಶ್ವ ಯೋಗದಿನ ಆಚರಿಸಲಾಗುತ್ತದೆ. ಕಾಯಿಲೆ ಹತ್ತಿರ ಸುಳಿಯದಂತೆ ಚೈತನ್ಯ ತುಂಬುವ, ಮನಸ್ಸು ಸದೃಢಗೊಳಿಸಬಲ್ಲ ಶಕ್ತಿ ಯೋಗಕ್ಕಿದೆ ಎಂದರು.

ಚಿಕ್ಕಬಳ್ಳಾಪುರ ಸಂಸದ ಡಾ ಕೆ ಸುಧಾಕರ್ ಮಾತನಾಡಿ, 150 ಕ್ಕೂ ಹೆಚ್ಚು ದೇಶಗಳಲ್ಲಿ ಯೋಗ ದಿನ ಆಚರಣೆ ಮಾಡಲಾಗುತ್ತಿದೆ, ಸುಮಾರು ಏಳು ಸಾವಿರ ಪ್ರತಿನಿಧಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿಜಿ ಅವರು ಇಂದು ಯೋಗಭ್ಯಾಸದಲ್ಲಿ ನಿರತರಾಗಿದ್ದಾರೆ ಇದು ನಮ್ಮ ಹೆಮ್ಮೆ. ಸಮಾಜದ ಸ್ವಾಸ್ತ್ಯ ಕಾಪಾಡಲು ಯೋಗಾಭ್ಯಾಸ ಬಹು ಮುಖ್ಯ ಎಂದರು.

ಧ್ಯಾನವು ಯೋಗದ ಮಹತ್ವದ ಭಾಗವಾಗಿದೆ. ಚಲನೆಯಿಂದ ನಿಶ್ಚಲತೆಗೆ, ಶಬ್ದದಿಂದ ನಿಶ್ಯಬ್ದಕ್ಕೆ, ಧ್ಯಾನವಾಗಿದೆ. ನಾವೆಲ್ಲರೂ ಶಾಂತ, ಪ್ರಶಾಂತ, ಆಹ್ಲಾದಕರ ಮತ್ತು ಸುಂದರವಾದ ಭೂಮಿಯನ್ನು ಪಡೆದುಕೊಂಡಿದ್ದೇವೆ. ಧ್ಯಾನವು ಈ ಶಾಂತ ಜಾಗದಲ್ಲಿ ನಮ್ಮ ಗಮನವನ್ನು ಕೇಂದ್ರೀಕರಿಸುವುದನ್ನು ಒಳಗೊಂಡಿರುತ್ತದೆ. ಈ ನಿಶ್ಚಲತೆಯಿಂದ ಮನಸ್ಸನ್ನು ಶುದ್ಧೀಕರಿಸಲಾಗುತ್ತದೆ. ಯೋಗದಿಂದ ಕೇವಲ ದೈಹಿಕ ಪ್ರಯೋಜನಗಳಲ್ಲದೆ ಆಧ್ಯಾತ್ಮಿಕ ಪ್ರಯೋಜನಗಳೂ ಇವೆ ಎಂದು ಹೇಳಿದರು.

ಕಾರ್ಯಕ್ರಮದ ಉದ್ಘಾಟನೆಗೂ ಮುನ್ನ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಚಿಕ್ಕಬಳ್ಳಾಪುರ ಸಂಸದ ಡಾ. ಕೆ ಸುಧಾಕರ್, ಜಿಲ್ಲಾಧಿಕಾರಿ ಪಿಎನ್.ರವೀಂದ್ರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್ ಜಿ.ಟಿ.ನಿಟ್ಟಾಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿಎಲ್ ನಾಗೇಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜ ಇಮಾಮ್ ಖಾಸಿಮ್, ಅಶ್ವಿನಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಬೈಲಾಜಿನಪ್ಪ ಜಿಲ್ಲಾ ಆಯುಷ್ ಅಧಿಕಾರಿ ಡಾ. ಸಬಿ ಬಾಬಾನ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಶಾಲಾ ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡಿದರು. ಯೋಗಭ್ಯಾಸದ ವಿವಿಧ ಆಸನಗಳ ಬಗ್ಗೆ ಪತಂಜಲಿ ಯೋಗ ಸಮಿತಿಯ ಲೋಕನಾಥ್, ಜಿ ಗೋವಿಂದ, ವೀಣಾ ಮತ್ತು ಶ್ರೀ ಪತಂಜಲಿಯ ನಾಗರಾಜ್ ಅವರು ವಿವರಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+