ಶಿಡ್ಲಘಟ್ಟದಲ್ಲಿ ಅತ್ಯಾಧುನಿಕ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ:ಸಿಎಂ.ಬಸವರಾಜ ಬೊಮ್ಮಾಯಿ
ಚಿಕ್ಕಬಳ್ಳಾಪುರ, ಮಾರ್ಚ್ 12: ಶಿಡ್ಲಘಟ್ಟದಲ್ಲಿ ಅತ್ಯಾಧುನಿಕ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ ಎಂದು ಸಿಎಂ.ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಇಂದು ಕಂದಾಯ ಇಲಾಖೆಯ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ವತಿಯಿಂದ ಗುಂಗೀರ್ಲಹಳ್ಳಿಯಲ್ಲಿ ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ಕಲ್ಬುರ್ಗಿ ಹಾಗೂ ಹಾವೇರಿ ಜಿಲ್ಲೆಯಲ್ಲಿ 30 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ ಮಾಡುವ ಯೋಜನೆಗೆ ಶಿಡ್ಲಘಟ್ಟವನ್ನು ಸೇರ್ಪಡೆ ಮಾದಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರೇಷ್ಮೆ ಉತ್ಪಾದನೆಯನ್ನು ವೃದ್ಧಿಸಲು ದ್ವಿತಳಿ ಬಿತ್ತನೆ ಗೂಡಿಗೆ ಸಹಾಯಧನ 10,000 ರೂ.ಗಳ ಪ್ರೋತ್ಸಾಹಧನ ನೀಡಲಾಗುವುದು. ಚಿಕ್ಕಬಳ್ಳಾಪುರ ಜಿಲ್ಲೆಗೆ ನೀರು ಹರಿಸುವ ಎತ್ತಿನಹೊಳೆ ಯೋಜನೆ 3000 ಕೋಟಿ ಅನುದಾನವನ್ನು ಏರಿಸಲಾಗಿದೆ ಎಂದರು.
ಭೂ ಮಾಫಿಯಾ ಮೇಲೆ ಕಠಿಣ ಕ್ರಮ
ಈ ಭಾಗದ ರೈತರ ಬೆವರಿನ ಹನಿಗೆ ಎತ್ತಿನಹೊಳೆ ನೀರು ತಂದು ಭೂಮಿತಾಯಿಗೆ ಹಸಿರ ಸೀರೆ ಉಡಿಸುವ ಮಹತ್ವಾಕಾಂಕ್ಷೆಯ ಇದೆ. ಸರ್ಕಾರದ ಸೌಲಭ್ಯಗಳು ಜನರ ಜನರ ಬಳಿಗೆ ತರುವ ಉದ್ದೇಶವಿದೆ. ಅಂತೆಯೇ ಜನರಿಗೆ ತೊಂದರೆ ನೀಡುವಂತಹ ಮಾಫಿಯಾಗಳು ಅದರಲ್ಲೂ ಭೂ ಮಾಫಿಯಾದ ಮೇಲೆ ಸರ್ಕಾರ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ. ಜನರ ಸರ್ಕಾರ ಕಟಿಬದ್ಧವಾಗಿದೆ ಕೆಲಸ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ರೈತರಿಗಾಗಿ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ :
ಹಾಲು ಉತ್ಪಾದನೆ ಮೂಲಕ ಆರ್ಥಿಕ ಚಟುವಟಿಕೆಗೆ ಇಂಬು ನೀಡಲಾಗುತ್ತಿದೆ ರೈತರಿಂದ ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಕೆಎಂಎಫ್ ನಲ್ಲಿ 23 ಸಾವಿರ ಕೋಟಿ ವ್ಯವಹಾರ ಒಂದು ತಿಂಗಳಿಗೆ ಆಗುತ್ತದೆ ರೈತರಿಗಾಗಿ ರೈತರ ಬ್ಯಾಂಕ್ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪಿಸಲು 100 ಕೋಟಿಗಳ ಅನುದಾನವನ್ನು ನೀಡುವ ಮೂಲಕ ರೈತರಿಗಾಗಿ ವಿಶೇಷ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ದೇಶದಲ್ಲೇ ಪ್ರಥಮ ಬಾರಿ ಹಾಲು ಉತ್ಪಾದಕರ ಸ್ಥಾಪಿಸಲು ಹಣವನ್ನು ಒದಗಿಸಿದೆ. ಇದು ರೈತಪರ ಬಡವರಪರ ಸರ್ಕಾರ ಎಂದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications