BN Bache Gowda: ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಬಚ್ಚೇಗೌಡ ರಾಜೀನಾಮೆ!
ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಲಿ ಸಂಸದ ಬಿ.ಎನ್.ಬಚ್ಚೇಗೌಡ ರಾಜೀನಾಮೆ ಸಲ್ಲಿಸಲಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಹಿಂದೆಯೇ ಚುನಾವಣಾ ನಿವೃತ್ತಿ ಘೋಷಣೆ ಮಾಡಿದ್ದ ಬಿ. ಎನ್. ಬಚ್ಚೆಗೌಡ, ಪಕ್ಷದ ಸಂಘಟನೆ ಹಾಗೂ ಚಟುವಟಿಕೆಗಳಿಂದ ಸಂಪೂರ್ಣ ದೂರ ಉಳಿದಿದ್ದರು.
ಹೌದು... ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು ರಾಜ್ಯಾಧ್ಯಕ್ಷ ವಿಜಯೇಂದ್ರಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಜಕೀಯದಿಂದ ದೂರ ಇರಲು ನಿರ್ಧಾರ ಮಾಡಿದ್ದರೂ ಸಕ್ರಿಯ ರಾಜಕಾರಣದಲ್ಲಿಯೇ ಬಚ್ಚೇಗೌಡ ಇರಲಿದ್ದಾರೆ.

ಆದರೆ ಚುನಾವಣೆಯಲ್ಲಿ ಯಾರ ಪರವೂ ಕೆಲಸ ಮಾಡದಿರಲು ನಿರ್ಧಾರ ಮಾಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಚ್ಚೇಗೌಡರು ಒಂದು ಬಿಜೆಪಿ ನೆಲೆ ತಂದುಕೊಟ್ಟವರು. ಕಳೆದ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್ನ ವೀರಪ್ಪ ಮೊಯ್ಲಿ ಅವರನ್ನು ಹೆಚ್ಚು ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು.
ಬಿ.ಎನ್.ಬಚ್ಚೇಗೌಡ (BN Bache Gowda ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಬೆಂಡಗಾನಹಳ್ಳಿ ಗ್ರಾಮದವರು. 82 ವರ್ಷದ ಬಿ.ಎನ್.ಬಚ್ಚೇಗೌಡ ಪ್ರಸ್ತುತ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿಯ ಸಂಸದರಾಗಿದ್ದಾರೆ.

ಮನೆಯ ಹಿರಿಯ ರಾಜಕಾರಣಿ ಬಿ.ಎನ್. ಬಚ್ಚೇಗೌಡರ ಪರಿಚಯ ಹೀಗಿದೆ: ಬಿ.ಎನ್. ಬಚ್ಚೇಗೌಡ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಬೆಂಡಗಾನಹಳ್ಳಿ ಗ್ರಾಮದವರು. 82 ವರ್ಷದ ಬಿ.ಎನ್. ಬಚ್ಚೇಗೌಡ ಪ್ರಸ್ತುತ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದಾರೆ. ಬಿ.ಎನ್. ಬಚ್ಚೇಗೌಡರು ಜನತಾ ಪಕ್ಷದಿಂದ ಗುರುತಿಸಿಕೊಂಡು ತಮ್ಮ ರಾಜಕೀಯವನ್ನು ಆರಂಭಿಸಿದವರು.
1978 ರಲ್ಲಿ ಜನತಾ ಪಕ್ಷದ ಮೂಲಕ ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗುವುದರ ಮೂಲಕ 1985, 1994, 1999 ಹಾಗೂ 2008 ರಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಶಾಸಕರಾಗಿ ಒಟ್ಟು 5 ಬಾರಿ ಆಯ್ಕೆಯಾದರು. 1989, 2004, 2013 ರಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರ ಸೋಲನ್ನು ಅನುಭವಿಸಿದ್ದರು. ನಂತರ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದರು.

2014 ರಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿ.ಎನ್.ಬಚ್ಚೇಗೌಡ, ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಡಾ. ಎಂ. ವೀರಪ್ಪ ಮೊಯ್ಲಿ ವಿರುದ್ಧ ಸೋತಿದ್ದರು. 2019ರಲ್ಲಿ ನಡೆದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯಾಗಿ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಕಾಂಗ್ರೆಸ್ನ ಡಾ. ಎಂ. ವೀರಪ್ಪ ಮೊಯ್ಲಿ ವಿರುದ್ದ ಗೆಲುವು ಸಾಧಿಸುವುದರ ಮೂಲಕ ಹಾಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದು.
ಇತ್ತೀಚಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆಸುವುದಿಲ್ಲ ಎಂದು ಚುನಾವಣಾ ನಿವೃತ್ತಿಯನ್ನು ಘೋಷಣೆ ಮಾಡಿದ್ದರು. ಸಂಸದ ಬಿ. ಎನ್. ಬಚ್ಛೇಗೌಡರ ಮಗ ಶರತ್ ಬಚ್ಚೇಗೌಡ ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಶಾಸಕ ಶರತ್ ಬಚ್ಚೇಗೌಡರ ಮಾವ ಕೆ.ಎಚ್. ಪುಟ್ಟಸ್ವಾಮಿಗೌಡ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕರಾಗಿದ್ದು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications