ಘಟನಾ ಸ್ಥಳಕ್ಕೆ ಸಚಿವ ಮುರುಗೇಶ್ ನಿರಾಣಿ ಭೇಟಿ, ಅಧಿಕಾರಿಗಳಿಗೆ ಖಡಕ್ ಅದೇಶ!
ಚಿಕ್ಕಬಳ್ಳಾಪುರ, ಫೆ. 23: ಕಲ್ಲು ಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಕಾನೂನು ಬಾಹಿರವಾಗಿ ಸ್ಪೋಟಕ ವಸ್ತುಗಳನ್ನು ಯಾರಾದರೂ ಸಂಗ್ರಹಿಸಿಟ್ಟಿದ್ದರೆ, ತಕ್ಷಣವೇ ಪತ್ತೆ ಹಚ್ಚಬೇಕೆಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮಂಗಳವಾರ ರಾತ್ರಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಿರೇನಾಗವಲ್ಲಿಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ನಾನಾ ಭಾಗಗಳಲ್ಲಿ ಕಲ್ಲುಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಕಾನೂನು ಬಾಹಿರವಾಗಿ ಸ್ಟೋಟಕ ವಸ್ತುಗಳನ್ನು ಸಂಗ್ರಹಿಸಿರುವ ಬಗ್ಗೆ ಸಾರ್ವಜನಿಕರಿಂದ ನನಗೆ ದೂರುಗಳು ಬಂದಿವೆ ಎಂದರು.
ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನಚರಿಕೆ ಕ್ರಮಗಳನ್ನುತೆಗೆದುಕೊಳ್ಳಲಾಗುವುದು.ಇಲಾಖೆಯಿಂದ ಅನುಮತಿ ಪಡೆಯದೆ, ಸ್ಟೋಟಕ ವಸ್ತುಗಳನ್ನು ಬಳಸಿದರೆ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದೆಂದು ಸಚಿವ ನಿರಾಣಿ ಎಚ್ಚರಿಸಿದರು.

ಸ್ಟೋಟಕ ವಸ್ತುಗಳನ್ನು ಬಳಕೆ ಮಾಡಬೇಕಾದರೆ, ಸರಕಾರದಿಂದ ಲೈಸೆನ್ಸ್ ಪಡೆದಿರಬೇಕು.ಇನ್ನು ಮುಂದೆ ಇಂತಹ ಘಟನೆಗಳಿಗೆ ಕಾರಣರಾದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಸಾರಿಗೆ ಹಾಗೂ ಗೃಹ ಇಲಾಖೆಯ ಸಹಭಾಗಿತ್ವದಲ್ಲಿ ರಾಜ್ಯದ ಪ್ರತಿಯೊಂದು ಚಕ್ ಪೋಸ್ಟ್ಗಳಲ್ಲಿ ಬಿಗಿಯಾದ ತಪಾಸಣೆ ನಡೆಸಲಾಗುವುದು. ಹೊರರಾಜ್ಯಗಳಿಂದ ಬರುವ ಹಾಗೂ ಇಲ್ಲಿಂದ ಹೋಗುವ ವಾಹನಗಳ ಮೇಲೆ ನಿಗಾ ಇಡಲಾಗುವುದು. ಮುಂದಿನ ದಿನಗಳಲ್ಲಿ ಸ್ಟೋಟಕ ವಸ್ತುಗಳನ್ನು ಬಳಕೆಯನ್ನು ಅನುಮತಿ ಪಡೆದವರು ಮಾತ್ರ ಬಳಸಬೇಕೆಂಬ ಕಾನೂನು ಜಾರಿಮಾಡಲಿದ್ದೇವೆ. ಇದರಿಂದ ಇಂತಹ ಅನಾಹುತಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಸಚಿವ ನಿರಾಣಿ ಅವರು ಅಭಿಪ್ರಾಯಪಟ್ಟರು.

Recommended Video
ರಾಜ್ಯದಲ್ಲಿ ಪುನಃ ಪುನಃ ಇಂತಹ ಘಟನೆಗಳು ನಡೆಯುತ್ತಿರುವುದು ಅತ್ಯಂತ ದುರದೃಷ್ಟಕರ. ತಕ್ಷಣವೇ ಅಧಿಕಾರಿಗಳು ಎಚ್ಚೆತ್ತುಕೊಂಡು ಅನಾಹುತ ತಡೆಯದಿದ್ದರೆ, ಅಂತಹವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಸಚಿವ ನಿರಾಣಿ ಎಚ್ಚರಿಕೆ ಕೊಟ್ಟಿದ್ದಾರೆ. ಸ್ಟೋಟಕ ವಸ್ತುಗಳನ್ನು ಸಾಗಾಣಿಕೆ ಮಾಡುವ ವಾಹನಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು ಎಂದು ಅಧಿಕಾರಿಗಳಿಗೆ ನಿರಾಣಿ ಸೂಚಿಸಿದ್ದಾರೆ.
-
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications