ಶಿಡ್ಲಘಟ್ಟ ತಾಲೂಕಿನಾದ್ಯಂತ ಏಕಬಳಕೆಯ ಪ್ಲಾಸ್ಟಿಕ್ಗಳನ್ನು ನಿಷೇಧಿಸಲು ಪ್ಲಾನ್
ಚಿಕ್ಕಬಳ್ಳಾಪುರ, ಆಗಸ್ಟ್, 31: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಾದ್ಯಂತ ಏಕಬಳಕೆಯ ಪ್ಲಾಸ್ಟಿಕ್ಗಳನ್ನು ನಿಷೇಧಿಸಲು ಮುಂದಾಗಿದ್ದೇವೆ. ಇದರೊಂದಿಗೆ ಸಮರ್ಪಕ ರೀತಿಯಲ್ಲಿ ತ್ಯಾಜ್ಯ ನಿರ್ವಹಣೆ ಮಾಡುವುದು ಬಹಳ ಮುಖ್ಯ. ಹಸಿ ತ್ಯಾಜ್ಯದೊಂದಿಗೆ ಒಣ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯವನ್ನು ಎಸೆಯದೇ ಸಮರ್ಪಕವಾಗಿ ವಿಂಗಡಿಸುವುದು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜ ಸಾರ್ವಜನಿಕರಿಗೆ ಮನವರಿಕೆ ಮಾಡಿದರು.
ಶಿಡ್ಲಘಟ್ಟ ತಾಲ್ಲೂಕಿನ ತಲಕಾಯಲಬೆಟ್ಟ, ಹೊಸಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಂಗಡಿಗಳ ಮಾಲೀಕರಿಗೆ ಹಾಗೂ ಮಾರುಕಟ್ಟೆಗಳಲ್ಲಿ ಪ್ಲಾಸ್ಟಿಕ್ ನಿರ್ಮೂಲನೆ ಬಗ್ಗೆ ಅರಿವು ಮಾಡಿಸಿ ಪ್ಲಾಸ್ಟಿಕ್ ಬಳಕೆ ಮಾಡದಂತೆ ಮನವರಿಕೆಯನ್ನು ಕಾರ್ಯನಿರ್ವಾಹಕ ಅಧಿಕಾರಿಯವರಾದ ಮುನಿರಾಜ ಅವರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿಯವರು ಗ್ರಾಮಸ್ಥರಿಗೆ ಅರಿವು ಮೂಡಿಸಿದರು.

ಅದೇ ರೀತಿಯಾಗಿ ಬಹಳಷ್ಟು ಪ್ಲಾಸ್ಟಿಕ್ ತ್ಯಾಜ್ಯವು ಕೊಳೆಯುವುದಿಲ್ಲ. ಬದಲಾಗಿ ಅವು ಮೈಕ್ರೋಪ್ಲಾಸ್ಟಿಕ್ ಎಂದು ಕರೆಯಲ್ಪಡುವ ಅತಿ ಸಣ್ಣ ಚೂರುಗಳಾಗಿ ಉಳಿಯುತ್ತವೆ. ನಾವು ದಿನನಿತ್ಯ ಬಳಸುವ ಪ್ಲಾಸ್ಟಿಕ್ ಚೀಲಗಳು, ವಸ್ತುಗಳು ಸಾವಿರಾರು ವರ್ಷಗಳಾದರೂ ಭೂಮಿಯಲ್ಲಿ ಕೊಳೆಯದೇ ಉಳಿದುಬಿಡುತ್ತವೆ. ಈ ಪ್ಲಾಸ್ಟಿಕ್ ತ್ಯಾಜ್ಯದಲ್ಲಿ ಹೆಚ್ಚಿನವೆಂದರೆ ನಾವು ದಿನನಿತ್ಯ ಬಳಸುವ ಪ್ಲಾಸ್ಟಿಕ್ ಬಾಟಲಿಗಳು, ಪ್ಲಾಸ್ಟಿಕ್ ಚೀಲಗಳು, ಆಹಾರದ ಪ್ಯಾಕೇಜುಗಳು, ಸ್ಟ್ರಾಗಳು, ಮುಂತಾದ ವಸ್ತುಗಳು.
ಇಂತಹ ಪ್ಲಾಸ್ಟಿಕ್ ತ್ಯಾಜ್ಯ ಹಲವಾರು ರೀತಿಯ ಸಮಸ್ಯೆಗಳನ್ನು ತಂದೊಡ್ಡುತ್ತವೆ. ನೀರು ಹರಿಯುವ ದಾರಿಯನ್ನು ಮುಚ್ಚಿ ಅದರಿಂದ ನೈಸರ್ಗಿಕ ವಿಕೋಪಗಳಿಗೆ ಕಾರಣವಾಗಬಹುದು. ನೀರಿನಲ್ಲಿ ಸೇರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಜಲಚರಗಳು ಆಹಾರವೆಂದು ಸೇವಿಸಿ ಪ್ರಾಣ ಹಾನಿಗೊಳಗಾಗುವ ಸಾಧ್ಯತೆಯಿರುತ್ತದೆ. ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸುಡುವುದರಿಂದ ವಿಷಕಾರಿ ಅನಿಲಗಳು ಉತ್ಪತ್ತಿಯಾಗಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ ಎಂದರು.
ಪ್ಲಾಸ್ಟಿಕ್ನ ಮರುಬಳಕೆ ಹೇಗೆ ಮುಖ್ಯವೋ, ಪ್ಲಾಸ್ಟಿಕ್ ಬಳಕೆ ನಿಲ್ಲಿಸುವುದು ಅದಕ್ಕಿಂದ ಮುಖ್ಯ. ನಾಗರಿಕರಾಗಿ ನಾವು ಈ ನಿಟ್ಟಿನಲ್ಲಿ ಎಚ್ಚೆತ್ತುಕೊಳ್ಳಬೇಕು. ಏಕಬಳಕೆ ಪ್ಲಾಸ್ಟಿಕ್ ಬಳಸುವುದನ್ನು ನಿಲ್ಲಿಸುವುದು ನಮ್ಮ ಜವಾಬ್ದಾರಿ. ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು ಕೊಳ್ಳುವುದರ ಬದಲು ಬಾಟಲಿಯಲ್ಲಿ ನೀರನ್ನು ತೆಗೆದುಕೊಂಡು ಹೋಗುವುದು, ಸ್ಟ್ರಾ ಬಳಸದಿರುವುದು, ದಿನಸಿ, ತರಕಾರಿಗಳನ್ನು ಕೊಳ್ಳುವಾಗ ಅಂಗಡಿಯವರ ಬಳಿ ಪ್ಲಾಸ್ಟಿಕ್ ಕವರ್ ಅನ್ನು ಕೇಳದಿರುವುದು. ಬಟ್ಟೆಯ ಚೀಲಗಳನ್ನು ಬಳಸಬೇಕು ಎಂದರು.
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜ, ತಲಕಾಯಲಬೆಟ್ಟ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ, ಹೊಸಪೇಟೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಯಮುನಾ ರಾಣಿ, ತಲಕಾಯಲಬೆಟ್ಟ, ಹೊಸಪೇಟೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ಸೇರಿದಂತೆ ಮತ್ತಿತರರು ಹಾಜರಿದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications