ಶಿಡ್ಲಘಟ್ಟ ತಾಲೂಕಿನಾದ್ಯಂತ ಏಕಬಳಕೆಯ ಪ್ಲಾಸ್ಟಿಕ್ಗಳನ್ನು ನಿಷೇಧಿಸಲು ಪ್ಲಾನ್
ಚಿಕ್ಕಬಳ್ಳಾಪುರ, ಆಗಸ್ಟ್, 31: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಾದ್ಯಂತ ಏಕಬಳಕೆಯ ಪ್ಲಾಸ್ಟಿಕ್ಗಳನ್ನು ನಿಷೇಧಿಸಲು ಮುಂದಾಗಿದ್ದೇವೆ. ಇದರೊಂದಿಗೆ ಸಮರ್ಪಕ ರೀತಿಯಲ್ಲಿ ತ್ಯಾಜ್ಯ ನಿರ್ವಹಣೆ ಮಾಡುವುದು ಬಹಳ ಮುಖ್ಯ. ಹಸಿ ತ್ಯಾಜ್ಯದೊಂದಿಗೆ ಒಣ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯವನ್ನು ಎಸೆಯದೇ ಸಮರ್ಪಕವಾಗಿ ವಿಂಗಡಿಸುವುದು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜ ಸಾರ್ವಜನಿಕರಿಗೆ ಮನವರಿಕೆ ಮಾಡಿದರು.
ಶಿಡ್ಲಘಟ್ಟ ತಾಲ್ಲೂಕಿನ ತಲಕಾಯಲಬೆಟ್ಟ, ಹೊಸಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಂಗಡಿಗಳ ಮಾಲೀಕರಿಗೆ ಹಾಗೂ ಮಾರುಕಟ್ಟೆಗಳಲ್ಲಿ ಪ್ಲಾಸ್ಟಿಕ್ ನಿರ್ಮೂಲನೆ ಬಗ್ಗೆ ಅರಿವು ಮಾಡಿಸಿ ಪ್ಲಾಸ್ಟಿಕ್ ಬಳಕೆ ಮಾಡದಂತೆ ಮನವರಿಕೆಯನ್ನು ಕಾರ್ಯನಿರ್ವಾಹಕ ಅಧಿಕಾರಿಯವರಾದ ಮುನಿರಾಜ ಅವರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿಯವರು ಗ್ರಾಮಸ್ಥರಿಗೆ ಅರಿವು ಮೂಡಿಸಿದರು.

ಅದೇ ರೀತಿಯಾಗಿ ಬಹಳಷ್ಟು ಪ್ಲಾಸ್ಟಿಕ್ ತ್ಯಾಜ್ಯವು ಕೊಳೆಯುವುದಿಲ್ಲ. ಬದಲಾಗಿ ಅವು ಮೈಕ್ರೋಪ್ಲಾಸ್ಟಿಕ್ ಎಂದು ಕರೆಯಲ್ಪಡುವ ಅತಿ ಸಣ್ಣ ಚೂರುಗಳಾಗಿ ಉಳಿಯುತ್ತವೆ. ನಾವು ದಿನನಿತ್ಯ ಬಳಸುವ ಪ್ಲಾಸ್ಟಿಕ್ ಚೀಲಗಳು, ವಸ್ತುಗಳು ಸಾವಿರಾರು ವರ್ಷಗಳಾದರೂ ಭೂಮಿಯಲ್ಲಿ ಕೊಳೆಯದೇ ಉಳಿದುಬಿಡುತ್ತವೆ. ಈ ಪ್ಲಾಸ್ಟಿಕ್ ತ್ಯಾಜ್ಯದಲ್ಲಿ ಹೆಚ್ಚಿನವೆಂದರೆ ನಾವು ದಿನನಿತ್ಯ ಬಳಸುವ ಪ್ಲಾಸ್ಟಿಕ್ ಬಾಟಲಿಗಳು, ಪ್ಲಾಸ್ಟಿಕ್ ಚೀಲಗಳು, ಆಹಾರದ ಪ್ಯಾಕೇಜುಗಳು, ಸ್ಟ್ರಾಗಳು, ಮುಂತಾದ ವಸ್ತುಗಳು.
ಇಂತಹ ಪ್ಲಾಸ್ಟಿಕ್ ತ್ಯಾಜ್ಯ ಹಲವಾರು ರೀತಿಯ ಸಮಸ್ಯೆಗಳನ್ನು ತಂದೊಡ್ಡುತ್ತವೆ. ನೀರು ಹರಿಯುವ ದಾರಿಯನ್ನು ಮುಚ್ಚಿ ಅದರಿಂದ ನೈಸರ್ಗಿಕ ವಿಕೋಪಗಳಿಗೆ ಕಾರಣವಾಗಬಹುದು. ನೀರಿನಲ್ಲಿ ಸೇರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಜಲಚರಗಳು ಆಹಾರವೆಂದು ಸೇವಿಸಿ ಪ್ರಾಣ ಹಾನಿಗೊಳಗಾಗುವ ಸಾಧ್ಯತೆಯಿರುತ್ತದೆ. ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸುಡುವುದರಿಂದ ವಿಷಕಾರಿ ಅನಿಲಗಳು ಉತ್ಪತ್ತಿಯಾಗಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ ಎಂದರು.
ಪ್ಲಾಸ್ಟಿಕ್ನ ಮರುಬಳಕೆ ಹೇಗೆ ಮುಖ್ಯವೋ, ಪ್ಲಾಸ್ಟಿಕ್ ಬಳಕೆ ನಿಲ್ಲಿಸುವುದು ಅದಕ್ಕಿಂದ ಮುಖ್ಯ. ನಾಗರಿಕರಾಗಿ ನಾವು ಈ ನಿಟ್ಟಿನಲ್ಲಿ ಎಚ್ಚೆತ್ತುಕೊಳ್ಳಬೇಕು. ಏಕಬಳಕೆ ಪ್ಲಾಸ್ಟಿಕ್ ಬಳಸುವುದನ್ನು ನಿಲ್ಲಿಸುವುದು ನಮ್ಮ ಜವಾಬ್ದಾರಿ. ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು ಕೊಳ್ಳುವುದರ ಬದಲು ಬಾಟಲಿಯಲ್ಲಿ ನೀರನ್ನು ತೆಗೆದುಕೊಂಡು ಹೋಗುವುದು, ಸ್ಟ್ರಾ ಬಳಸದಿರುವುದು, ದಿನಸಿ, ತರಕಾರಿಗಳನ್ನು ಕೊಳ್ಳುವಾಗ ಅಂಗಡಿಯವರ ಬಳಿ ಪ್ಲಾಸ್ಟಿಕ್ ಕವರ್ ಅನ್ನು ಕೇಳದಿರುವುದು. ಬಟ್ಟೆಯ ಚೀಲಗಳನ್ನು ಬಳಸಬೇಕು ಎಂದರು.
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜ, ತಲಕಾಯಲಬೆಟ್ಟ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ, ಹೊಸಪೇಟೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಯಮುನಾ ರಾಣಿ, ತಲಕಾಯಲಬೆಟ್ಟ, ಹೊಸಪೇಟೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ಸೇರಿದಂತೆ ಮತ್ತಿತರರು ಹಾಜರಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications