ಚಿಕ್ಕಬಳ್ಳಾಪುರ; ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿಕೊಂಡಿದ್ದ ಕಾನ್ ಸ್ಟೆಬಲ್ ಬಂಧನ
ಚಿಕ್ಕಬಳ್ಳಾಪುರ, ಅಕ್ಟೋಬರ್ 30: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿಕೊಂಡಿದ್ದ ಪೊಲೀಸ್ ಕಾನ್ಸ್ಟೆಬಲ್ ಒಬ್ಬರನ್ನು ಬಂಧಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಾನ್ ಸ್ಟೆಬಲ್ ನನ್ನು ಸದ್ಯಕ್ಕೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಚಿಂತಾಮಣಿ ನಗರ ಠಾಣೆ ಪೊಲೀಸ್ ಕಾನ್ಸ್ಟೆಬಲ್ ಎಂ.ಕೆ ಮಂಜುನಾಥ್ ಬಂಧಿತ ಎಂದು ತಿಳಿದು ಬಂದಿದೆ.
ಅಕ್ಟೋಬರ್ 1ರಂದು ನಗರದ ಗಜಾನಾನ ಸರ್ಕಲ್ ಸಮೀಪ ಐದು ಜನರ ಗುಂಪೊಂದು ಪಂಜಾಬ್ ಹಾಗೂ ಮುಂಬೈ ತಂಡಗಳ ನಡುವೆ ಬೆಟ್ಟಿಂಗ್ ನಡೆಸುತ್ತಿತ್ತು. ಈ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿದ್ದು, ಇನ್ಸ್ಪೆಕ್ಟರ್ ಆನಂದ್ ಕುಮಾರ್ ದಾಳಿ ನಡೆಸಿದ್ದರು. ಈ ಸಂದರ್ಭ ನವೀನ್, ಸುಲೈಮಾನ್, ಶ್ರೀನಿವಾಸ್, ಮಾರುತಿ, ಮನೋಹರ್ ಎಂಬುವವರನ್ನು ಬಂಧಿಸಲಾಗಿತ್ತು. ಆರೋಪಿಗಳಿಂದ ಐದು ಮೊಬೈಲ್ ಗಳು ಹಾಗೂ 6,970 ರೂ. ನಗದನ್ನು ವಶಪಡಿಸಿಕೊಳ್ಳಲಾಗಿತ್ತು.

Recommended Video
ನಂತರ, ಈ ಬೆಟ್ಟಿಂಗ್ ನಲ್ಲಿ ಪೊಲೀಸ್ ಹೆಡ್ ಕಾನ್ ಸ್ಟೆಬಲ್ ಮಂಜುನಾಥ್ ಕೂಡ ತೊಡಗಿಕೊಂಡಿದ್ದು ತಿಳಿದುಬಂದಿದೆ. ಎಸ್ಪಿ ಮಿಥುನ್ ಕುಮಾರ್ಗೆ ಅವರಿಗೆ ಈ ವಿಷಯ ತಿಳಿದುಬಂದಿದ್ದು, 10 ದಿನಗಳ ಹಿಂದೆ ಮಂಜುನಾಥ್ ನನ್ನು ಅಮಾನತು ಮಾಡಲಾಗಿತ್ತು. ಆರೋಪಿ ಮಂಜುನಾಥ್ನನ್ನು ಇದೀಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.












Click it and Unblock the Notifications