ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಪ್ರತ್ಯೇಕ ವೆಬ್ ಸೈಟ್ ಲಾಂಚ್ ಮಾಡಿದ ಶಾಸಕ ಪ್ರದೀಪ್ ಈಶ್ವರ್
ಚಿಕ್ಕಬಳ್ಳಾಪುರ, ಜುಲೈ 08: ಚಿಕ್ಕಬಳ್ಳಾಪುರದಾದ್ಯಂತ ಮನೆ ಮಾತಗಿರುವ ಶಾಸಕ ಪ್ರದೀಪ್ ಈಶ್ವರ್ ಅವರ ವಿನೂತನ ಕಾರ್ಯಕ್ರಮ 'ನಮಸ್ತೆ ಚಿಕ್ಕಬಳ್ಳಾಪುರʼ ಎಂಬ ಕಾರ್ಯಕ್ರಮದ ಮೂಲಕ ಕ್ಷೇತ್ರದ ಜನರ ಮನೆ ಬಾಗಿಲಿಗೆ ತೆರಳಿ ಸಮಸ್ಯೆಗಳಿಗೆ ಸ್ಪಂದಿಸುವ ವಿನೂತನ ಕಾರ್ಯಕ್ರಮ ಮಾಡಿ ಮಾದರಿಯಾಗಿದ್ದ ಶಾಸಕ ಪ್ರದೀಪ್ ಈಶ್ವರ್ ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದು ನಾಡಿನ ಜನತೆ ಕುಳಿತಲ್ಲೆ ತಮ್ಮ ಕಷ್ಟಗಳನ್ನು ತಮ್ಮ ಶಾಸಕರೊಂದಿಗೆ ಹಂಚಿಕೊಳ್ಳುವ ಅವಕಾಶ ಕಲ್ಪಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾಗಿ ಗುರುತಿಸಿಕೊಂಡು ರಾಜ್ಯದ ಮತದಾರರ ಚಿತ್ತ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಫಲಿತಾಂಶದ ಕಡೆ ನೆಟ್ಟುವಂತೆ ಮಾಡಿದ್ದ ಪ್ರದೀಪ್ ಈಶ್ವರ್ ಇಂದು ಹೊಸ ಹಾದಿಯಲ್ಲಿ ಮುನ್ನಡೆದಿದ್ದು ಚಿಕ್ಕಬಳ್ಳಾಪುರ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ʻwww.pradeepeshwarmla.comʼ ಎಂಬ ಹೊಸ ವೆಬ್ಸೈಟ್ ಆರಂಭಿಸಿದ್ದಾರೆ.

ಕ್ಷೇತ್ರದ ಜನ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ದೂರು ನೀಡಲು ನೇರವಾಗಿ ಶಾಸಕರ ಬಳಿ ತೆರಳಲು ಕೆಲವರಿಗೆ ಸಾಧ್ಯವಾಗುವುದಿಲ್ಲ, ಜೊತೆಗೆ ಸಮಯ ಮತ್ತು ಹಣ ವ್ಯಯ ಮಾಡಿಕೊಂಡು ಶಾಸಕರ ಮನೆಯ ಬಳಿ ಬರುವುದು ಬೇಡ, ಜನರು ತಮ್ಮ ಸಮಸ್ಯೆ ತಿಳಿಸಲಿಕ್ಕೂ ಸಹ ಹಣ ಖರ್ಚು ಮಾಡೋದು ಬೇಡ ಎಂಬ ಸದುದ್ದೇಶದಿಂದ ಈ ವೆಬ್ ಸೈಟ್ ಆರಂಭಿಸಿಲಾಗಿದೆ ಎಂದು ಪ್ರದೀಪ್ ಈಶ್ವರ್ ತಿಳಿಸಿದರು.
ಸಾರ್ವಜನಿಕರು ಅದರಲ್ಲೂ ಕ್ಷೇತ್ರದ ಸುಮಾರು 2 ಲಕ್ಷಕ್ಕೂ ಅಧಿಕ ಜನರನ್ನು ನೇರವಾಗಿ ಭೇಟಿ ಮಾಡಲೂ ಸಾಧ್ಯವಾಗುವುದಿಲ್ಲ. ಈ ದೃಷ್ಟಿಯಿಂದ ತಮ್ಮ ಮೊಬೈಲ್ ಮೂಲಕವೇ ತಮ್ಮ ಸಮಸ್ಯೆಗಳಿಗೆ ದೂರು ಹೇಳಿಕೊಳ್ಳಲು ವೆಬ್ಸೈಟ್ನಲ್ಲಿ ಬಲಗಡೆ ದೂರು/ಸಲಹೆಗಳು ಎಂಬ ವಿಭಾಗಗಳಿದ್ದು, ಅದರ ಮೇಲೆ ಕ್ಲಿಕ್ ಮಾಡಿದರೆ, ಕಂಪ್ಲೇಟ್ ಬಾಕ್ಸ್ ತೆರೆಯುತ್ತದೆ. ಜನ ಅಲ್ಲಿ ತಮ್ಮ ಅಭಿಪ್ರಾಯ/ದೂರು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ದೂರು ನೀಡುವ ಜನರ ಮೊಬೈಲ್ ನಂಬರ್ಗೆ ಕರೆ ಮಾಡಿ ಸ್ಪಂದಿಸಲು ಸಿಬ್ಬಂದಿಯನ್ನ ನೇಮಕ ಮಾಡಿ ಕಚೇರಿ ಸಹ ತೆರೆಯಲಾಗಿದೆ. ದಿನದ 24 ಗಂಟೆಗಳ ಕಾಲ ಸಿಬ್ಬಂದಿ ಜನರಿಗೆ ಸ್ಪಂದಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ನನ್ನ ಕ್ಷೇತ್ರದ ಜನ ಇಂದಿನಿಂದ ತಮ್ಮ ಸಮಯ ವ್ಯರ್ಥ ಮಾಡದೇ ಮೊಬೈಲ್ ಮೂಲಕವೇ ತಮ್ಮ ಮನೆಯಲ್ಲಿರುವ ಮಗ-ಮಗಳು ಯಾರಿಂದಾದರೂ ವೆಬ್ಸೈಟ್ನಲ್ಲಿ ಸಮಸ್ಯೆ ಹೇಳಿಕೊಳ್ಳಬಹುದು ಎಂದು ಮನವಿ ಮಾಡಿದ್ದಾರೆ. ತಾವು ಸಮಸ್ಯೆಯನ್ನು ತಮ್ಮ ಗಮನಕ್ಕೆ ತಂದನಂತರವೂ ಸಹ ಬಗೆಹರಿಯಲಾಗದ ಸಮಸ್ಯೆ ಆಗಿದ್ದಲ್ಲಿ, ಅದಕ್ಕೂ ಸಹ ಕಾರಣ ತಿಳಿಸಿ 24 ಗಂಟೆಯೊಳಗೆ ನಿಮ್ಮ ಜೊತೆ ಪ್ರತಿಕ್ರಿಯಿಸುವುದಾಗಿ ಶಾಸಕರು ತಿಳಿಸಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications