Chikkaballapur to Ayodhya by cycle: ಸೈಕಲ್ ಸವಾರಿ ಮೂಲಕ ಅಯೋಧ್ಯೆಗೆ ಹೊರಟ ರಾಮನ ಭಕ್ತ
ಚಿಕ್ಕಬಳ್ಳಾಪುರ ಮೇ 16: ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಲು ಕರ್ನಾಟಕದಿಂದ ಹಲವಾರು ಭಕ್ತರು ತೆರಳುತ್ತಿದ್ದಾರೆ. ಬಸ್, ರೈಲು ಹಾಗೂ ವಿಮಾನಗಳ ಮೂಲಕ ಅಯೋಧ್ಯೆ ತಲುಪಿ ಶ್ರೀರಾಮನ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಆದರೆ ಚಿಕ್ಕಬಳ್ಳಾಪುರದ ಯುವಕನೊಬ್ಬ ಸೈಕಲ್ ಸವಾರಿ ಮೂಲಕ ರಾಮನನ್ನು ಕಾಣಲು ನಿರ್ಧರಿಸಿದ್ದಾನೆ.
ಹೌದು.. ಅಯೋದ್ಯೆಯ ಶ್ರೀ ಬಾಲ ರಾಮನ ದರ್ಶನಕ್ಕಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ರಾಯನಕಲ್ಲು ಗ್ರಾಮದ ಯುವಕ 22 ವರ್ಷದ ಯುವಕ ಬಾನುಪ್ರಸಾದ್ರೆಡ್ಡಿ ಸೈಕಲ್ ಏರಿ ಅಯೊಧ್ಯೆ ಕಡೆಗೆ ಪ್ರಯಾಣ ಬೆಳಸಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ರಾಯನಕಲ್ಲು ಗ್ರಾಮದ ನಿವಾಸಿಯಾದ ನರಸಿಂಹರೆಡ್ಡಿ, ಜಯಲಕ್ಷ್ಮಮ್ಮ ಪುತ್ರ ಬಾನುಪ್ರಸಾದ್ರೆಡ್ಡಿ (22) ಎಂಬ ಯುವಕ ಸೈಕಲ್ ಮೂಲಕ ಅಯೋಧ್ಯೆಯ ರಾಮನ ದರ್ಶನದ ಸಾಹಸಕ್ಕೆ ಕೈ ಹಾಕಿದ್ದಾನೆ.

ಸೈಕಲ್ ಸವಾರಿಗೂ ಮುನ್ನ ಪೂಜೆ
ಅಯೋಧ್ಯೆಗೆ ತೆರಳುವ ಮುನ್ನ ಇಂದು ಬೆಳಿಗ್ಗೆ ಮಂಚೇನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಾನುಪ್ರಸಾದ್, ಈ ಸಂದರ್ಭದಲ್ಲಿ ನೆರೆದಿದ್ದ ಹಿತೈಷಿಗಳು, ಸ್ನೇಹಿತರು, ಬಂಧುಗಳು ಶುಭ ಹಾರೈಕೆಗಳೊಂದಿಗೆ ಅಯೋಧ್ಯೆಗೆ ತಮ್ಮ ಸೈಕಲ್ ಯಾತ್ರೆಯನ್ನು ಆರಂಭಿಸಿದರು.
ಈ ವೇಳೆ ಮಾತನಾಡಿದ ಬಾನುಪ್ರಸಾದ್ರೆಡ್ಡಿ, ಅಯೋಧ್ಯೆಗೆ ಬೈಕ್, ರೈಲು ಸೇರಿದಂತೆ ಬೇರೆಬೇರೆ ರೀತಿಯಲ್ಲಿ ಸಾಕಷ್ಟು ಭಕ್ತರು ಪ್ರಯಾಣಿಸುತ್ತಾರೆ. ಆದರೆ ನನಗೆ ಸೈಕಲ್ ಮೂಲಕವೇ ಅಯೋಧ್ಯೆಗೆ ಹೋಗಲು ಇಷ್ಟ. ಇದನ್ನು ನಿರ್ಧರಿಸಿ ಇಂದು ಮಂಚೇನಹಳ್ಳಿಯ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸೈಕಲ್ ಮೂಲಕ ಅಯೋಧ್ಯೆಗೆ ಪ್ರಯಾಣ ಆರಂಭಿಸಿದ್ದೇನೆ ಎಂದು ತಿಳಿಸಿದರು.
ಪೊಲೀಸ್ ಆಗುವ ಇಚ್ಚೆ ಹೊಂದಿದ ರಾಮ ಭಕ್ತ
ನಾನು ಪೊಲೀಸ್ ಉದ್ಯೋಗ ಪಡೆಯಲು ಓದುತ್ತಿರುವೆ. ಉದ್ಯೋಗ ಸಿಗುವ ಮುನ್ನವೇ ಅಯೋಧ್ಯೆ ಸೇರಿದಂತೆ ದೇಶದ ವಿವಿಧೆಡೆ ಇರುವ ಪ್ರಸಿದ್ಧ ತಾಣಗಳನ್ನು ವೀಕ್ಷಿಸಬೇಕೆಂಬುದು ನನ್ನ ಬಯಕೆ. ಇದಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಲ್ಲಿ ಪ್ರಸಿದ್ಧ ತಾಣಗಳಿವೆ, ದೇವಾಲಯಗಳು ಇವೆ ಎಂಬುದನ್ನು ಈಗಾಗಲೇ ತಿಳಿದುಕೊಂಡಿರುವೆ ಎಂದು ಹೇಳಿದರು.
ಇನ್ನು ಚಿಕ್ಕಬಳ್ಳಾಪುರದಿಂದ ಅಯೋಧ್ಯೆಗೆ ಸುಮಾರು 1800 ಕಿ.ಮೀಗೂ ಅಧಿಕ ದೂರವಿದ್ದು, ಒಂದು ತಿಂಗಳೊಳಗೆ ಅಯೋಧ್ಯೆಗೆ ತೆರಳಬೇಕೆಂದು ಪಣ ತೊಟ್ಟಿರುವೆ. ಮಂಚೇನಹಳ್ಳಿ ಮೂಲಕ ಡಿ.ಪಾಳ್ಯ, ಲೇಪಾಕ್ಷಿ ಮಾರ್ಗವಾಗಿ ತೆರಳುವುದಾಗಿ ಅಯೋಧ್ಯೆಗೆ ಪ್ರಯಾಣ ಬೆಳೆಸುವೆ ಎಂದು ಈ ವೇಳೆ ಅವರು ನುಡಿದರು.

ಯುವಕರಿಗೆ ಪ್ರೇರಣೆ ಬಾನುಪ್ರಸಾದ್
ಇದೇ ವೇಳೆ ಶಿಕ್ಷಕ ಸುರೇಶ್ ಮಾತನಾಡಿ, 22 ರ ವರ್ಷದ ಯುವಕ ಎಲ್ಲರ ಯುವಕರಿಗೆ ಪ್ರೇರಣೆಯಾಗಿದ್ದಾನೆ. ನಮ್ಮ ದೇಶದ ಸಂಸ್ಕøತಿ ಎತ್ತಿ ಹಿಡಿಯಲು, ಯುವಶಕ್ತಿಯಲ್ಲಿ ರಾಮ ಭಕ್ತಿ ವೃದ್ಧಿಯಾಗಬೇಕೆಂಬ ಕಾರಣಕ್ಕೆ ಬಾನುಪ್ರಸಾದರೆಡ್ಡಿ ಎಂಬ ಯುವಕ ಅಯೋಧ್ಯೆಗೆ ಸೈಕಲ್ ಯಾತ್ರೆ ಸಂಕಲ್ಪ ತೊಟ್ಟಿರುವುದು ಹೆಮ್ಮೆಯ ವಿಚಾರವಾಗಿದೆ.
ಈ ಯಾತ್ರೆ ಯಶಸ್ವಿಯಾಗಲಿ ಎಂದು ಶ್ರೀರಾಮ, ಹನುಮನಲ್ಲಿ ಎಲ್ಲರ ಪರವಾಗಿ ಪ್ರಾರ್ಥಿಸುವೆ ಎಂದು ಶುಭ ಹಾರೈಸಿದರು. ಪೂಜೆ ಸಂದರ್ಭದಲ್ಲಿ ಮುಖಂಡರಾದ ಸುದರ್ಶನರೆಡ್ಡಿ, ಭರತ್ ರೆಡ್ಡಿ, ನರಸಿಂಹರೆಡ್ಡಿ, ರಮೇಶ್, ಮುನಿರಾಜು ಸೇರಿದಂತೆ ಹಲವರು ಯುವಕ ಬಾನುಪ್ರಸಾದರೆಡ್ಡಿ ಅವರಿಗೆ ಶುಭ ಹಾರೈಸಿದರು.
ಹಾವೇರಿಯಿಂದ ಕನ್ಯಾಕುಮಾರಿಗೆ ಹೊರಟ ಮತ್ತೊಬ್ಬ ಯುವಕ:
ಜಿಲ್ಲೆಯ ಸರ್ವ ಅಭಿವೃದ್ಧಿಯ ಸಂಕಲ್ಪ ತೊಟ್ಟು ಹಾವೇರಿ ಜಿಲ್ಲೆಯ ವಿವೇಕಾನಂದ ಅವರು, ಹಾವೇರಿಯಿಂದ ತಮಿಳುನಾಡಿನ ಕನ್ಯಾಕುಮಾರಿಗೆ ಸೈಕಲ್ ಮೂಲಕ ಪ್ರಯಾಣ ಬೆಳೆಸಿದ್ದಾನೆ. ವಿವೇಕಾನಂದ ಅವರು ಇಂದು (ಗುರುವಾರ) ಮಂಚೇನಹಳ್ಳಿಗೆ ಆಗಮಿಸಿದ ವೇಳೆ ಸೈಕಲ್ನಲ್ಲಿ ಅಯೋಧ್ಯೆಗೆ ಹೊರಟಿರುವ ಯುವಕ ಬಾನುಪ್ರಸಾದ್ರೆಡ್ಡಿ ಅವರ ವಿಷಯ ತಿಳಿದು ಭೇಟಿಯಾಗಿದ್ದಾನೆ. ಇದೇ ವೇಳೆ ವೇಳೆ ಇಬ್ಬರು ಜೊತೆಗೂಡಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಯುವಕನಿಗೆ ಶುಭಾಶಯ ಕೋರಿದ್ದಾನೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications