ಉಪ ಚುನಾವಣೆ ಬಳಿಕ ರಮೇಶಕುಮಾರ್ ಸತ್ಯ ಹೊರಹಾಕುತ್ತೇನೆ: ಸುಧಾಕರ್
ಚಿಕ್ಕಬಳ್ಳಾಪುರ, ಡಿಸೆಂಬರ್ 03: ಉಪ ಚುನಾವಣೆ ಮುಗಿದ ಬಳಿಕ ಸಿದ್ದರಾಮಯ್ಯ ಮತ್ತು ರಮೇಶ್ ಕುಮಾರ್ ಕುರಿತ ಸತ್ಯಗಳನ್ನು ಹೊರಹಾಕುತ್ತೇನೆಂದು ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಉಪ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಸುಧಾಕರ್, ಈ ಇಬ್ಬರ ಕುರಿತು ಕೆಲ ಸತ್ಯಗಳನ್ನು ಹೇಳಬೇಕಿದೆ, ಉಪ ಚುನಾವಣೆ ಇರುವುದರಿಂದ ಸಾಧ್ಯವಾಗುತ್ತಿಲ್ಲ, ಮುಂದೆ ಎಲ್ಲವನ್ನು ಜನರ ಎದುರು ಬಿಚ್ಚಿಡುತ್ತೇನೆಂದು ಎಂದು ಹೇಳಿದರು.
ಚಿಕ್ಕಬಳ್ಳಾಪುರ: ಸುಧಾಕರ್ ಪರ ಖ್ಯಾತ ಹಾಸ್ಯನಟ ಬ್ರಹ್ಮಾನಂದಂ ಪ್ರಚಾರ
ನಾಯಕರಾದವರು ಅವರ ಹಿರಿತನ, ಅನುಭವಕ್ಕೆ ತಕ್ಕಂತೆ ಮಾತನಾಡಬೇಕು, ಆಧಾರ ರಹಿತವಾಗಿ ನಿಂದನೆ ಮಾಡಬಾರದು, ತಮ್ಮ ಬಗ್ಗೆ ಅಪಪ್ರಚಾರ ಮಾಡುವುದರಿಂದ ಅವರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ ಎಂದು ತಿರುಗೇಟು ನೀಡಿದರು.
ನನ್ನ ರಾಜಕೀಯ ಗುರು ಎಸ್.ಎಂ.ಕೃಷ್ಣ ಅವರು, ಕಾಂಗ್ರೆಸ್ ನಿಂದ ನನಗೆ ಟಿಕೆಟ್ ಕೊಡಿಸಿದ್ದು ಅವರು ಎಂದರು. ಅದರಲ್ಲಿ ಡಾ. ಜಿ.ಪರಮೇಶ್ವರ್ ಕೂಡಾ ಒಬ್ಬರೆಂದರು.
ಕಾಂಗ್ರೆಸ್ ಭದ್ರಕೋಟೆಯಲ್ಲಿ ಕಮಲ ಅರಳಿಸಲು ಸುಧಾಕರ್ ಸರ್ಕಸ್!
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಧಾರಾವಾಹಿಗಳಲ್ಲಿ ನಟಿಸುತ್ತಿದ್ದರು, ಅವರು ನಟನೆಯನ್ನೇ ಮುಂದುವರೆಸಿಕೊಂಡು ಹೋಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.