ಗಂಗಮ್ಮ ದೇವಾಲಯದ ವಿಷ ಪ್ರಸಾದ ದುರಂತ: ದ್ವೇಷ, ಅನೈತಿಕ ಸಂಬಂಧವೇ ಕಾರಣ?
ಚಿಂತಾಮಣಿ, ಜನವರಿ 28: ಚಾಮರಾಜನಗರದ ಸುಳ್ವಾಡಿಯ ಕಿಚ್ಚುಗತ್ತಿ ಮಾರಮ್ಮ ದೇವಾಲಯದಲ್ಲಿ ಸಂಭವಿಸಿದ ವಿಷ ಪ್ರಸಾದ ದುರಂತದ ನಂತರ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಂಣಿಯ ಗಂಗಮ್ಮ ದೇವಿ ದೇವಾಲಯದಲ್ಲೂ ನಡೆದ ವಿಷಪ್ರಸಾದ ದುರಂತ ರಾಜ್ಯವನ್ನು ಬೆಚ್ಚಿಬೀಳಿಸಿದೆ.
'ಎಲ್ಲರಿಗೂ ಒಳಿತು ಮಾಡು ದೇವರೇ...' ಎಂದು ಬೇಡುತ್ತ, ಎರಡು ಕೈಯಲ್ಲೂ ಭಕ್ತಿಯಿಂದ ಹಿಡಿದು, ಕಣ್ಣಿಗೊತ್ತಿಕೊಂಡು ತಿನ್ನುವ ಪ್ರಸಾದವೇ ವಿಷವಾದರೆ, ಜಗತ್ತಿನಲ್ಲಿ ನಂಬಿಕೆ ಎಂಬ ಪದಕ್ಕೆ ಯಾವ ಅರ್ಥವಿರುತ್ತದೆ?
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗಜಾನನ ವೃತ್ತದ ಬಳಿ ಇರುವ ಗಂಗಮ್ಮ ದೇವಿ ದೇವಾಲಯದಲ್ಲಿ ಪ್ರಸಾದ ಸೇವಿಸಿದ ಪರಿಣಾಮ ಇಬ್ಬರು ಮಹಿಳೆಯರು ಮೃತರಾಗಿದ್ದರು. ಹನ್ನೊಂದಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಅಷ್ಟಕ್ಕೂ ದೇವಾಲಯ ದುರಂತಕ್ಕೆ ಕಾರಣವೇನು ಎಂದು ಕಾರಣದ ಜಾಡುಹಿಡಿದು ಹೊರಟಾಗ ಪೊಲೀಸರು, 'ದ್ವೇಷ ಮತ್ತು ಅನೈತಿಕ ಸಂಬಂಧವೇ' ಈ ದುರಂತಕ್ಕೆ ಕಾರಣ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಅನೈತಿಕ ಸಂಬಂಧ
ಮೂಲಗಳ ಪ್ರಕಾರ, ಪ್ರಸಾದ ಸೇವಿಸಿ ಮೃತರಾದ ಸರಸ್ವತಮ್ಮ(56) ಅವರ ಅಳಿಯ ಪರಸ್ತ್ರೀಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರು. ಈ ವಿಷಯ ಸರಸ್ವತಮ್ಮ ಅವರಿಗೆ ತಿಳಿದಿದ್ದರಿಂದ ಈ ಪ್ರಸಾದಕ್ಕೆ ವಿಷ ಬೆರೆಸುವ ಪ್ರಹಸನ ನಡೆದಿರಬಹುದು ಎಂದು ಅಂದಾಜಿಸಲಾಗಿದೆ.

ಪ್ರಸಾದದಲ್ಲಿದ್ದ ಯಮರಾಯ!
ಶನಿವಾರ ಗಂಗಮ್ಮ ದೇವಿ ದೇವಾಲಯದಲ್ಲಿ ಪೂಜೆಯ ನಂತರ ಪ್ರಸಾದ ಸೇವಿಸಿದ್ದ ಇಬ್ಬರು ಮೃತರಾಗಿದ್ದರು. ತಮ್ಮ ಮಗಳ ಮನೆಗೆಂದು ಬಂದಿದ್ದ ಸರಸ್ವತಮ್ಮ ದೇವಾಲಯಕ್ಕೆ ಹರಕೆ ತೀರಿಸಲೆಂದು ಬಂದಿದ್ದರು. ಆದರೆ ಪೂಜೆಯ ನಂತರ ಪ್ರಸಾದ ಸೇವಿಸಿದ್ದರಿಂದ ಅವರು ಮೃತರಾದರು. ಕವಿತಾ ಎಂಬ ಇನ್ನೋರ್ವ ಯುವತಿಯೂ ಪ್ರಸಾದ ಸೇವಿಸಿದ ನಂತರ ಚಿಂತಾಜನಕ ಸ್ಥಿತಿಯಲ್ಲಿದ್ದರು. ಅವರನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರೂ ಅಸುನೀಗಿದರು. ದುರಂತದಲ್ಲಿ ಹನ್ನೊಂದಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಯೋಗಾಲಯಕ್ಕೆ ಕೇಸರಿಬಾತ್
ಅಂದು ಭಕ್ತರಿಗೆ ಹಂಚಲಾಗಿದ್ದ ಕೇಸರಿಬಾತ್ ಅನ್ನು ಈಗಾಗಲೇ ಫಾರೆನ್ಸಿಕ್ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು, ವಿಷ ಯಾವುದು ಎಂದು ಪತ್ತೆ ಹೆಚ್ಚಲಾಗುತ್ತಿದೆ. ಪ್ರಸಾದ ತಯಾರಿಸಿದ್ದ ಲಕ್ಷ್ಮಿ ಎಂಬುವವರನ್ನು ಮತ್ತು ಹಂಚಿತ ಅಮರಾವತಿ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ಘಟನೆಯಲ್ಲಿ ನಮ್ಮ ಕೈವಾಡವಿಲ್ಲ ಎಂದು ಅವರು ಹೇಳಿದ್ದು, ಸರಸ್ವತಮ್ಮ ಅವರ ಅಳಿಯನಿಗೆ ಪರಸ್ತ್ರೀಯೊಂದಿಗೆ ಅನೈತಿಕ ಸಂಬಂಧವಿದ್ದಿದ್ದೇ ಈ ದುರಂತಕ್ಕೆ ಕಾರಣ ಎಂದು ಇಬ್ಬರು ಮಹಿಳೆಯರೂ ದೂರಿದ್ದಾರೆ.

ಮಾರ್ಗಸೂಚಿಯ ಅಗತ್ಯವಿದೆ
ಪದೇ ಪದೇ ಇಂತಹ ದುರಂತಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಕುರಿತು ಸರ್ಕಾರ ಕೆಲವು ಮಾರ್ಗಸೂಚಿ ಹೊರಡಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟಿದ್ದಾರೆ.. ಈ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿಅವರು ತಿಳಿಸಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications