ಚಿಕ್ಕಬಳ್ಳಾಪುರ: ಆದಿಯೋಗಿ ಸನ್ನಿಧಿಯಲ್ಲಿ ನಾಗರಾಧನೆಯ ಮಹತ್ವದ ಬಗ್ಗೆ ಸದ್ಗುರು ಹೇಳಿದ್ದಿಷ್ಟು
ಚಿಕ್ಕಬಳ್ಳಾಪುರ, ಆಗಸ್ಟ್, 22: ಚಿಕ್ಕಬಳ್ಳಾಪುರ ಜಿಲ್ಲೆಯ ಆದಿಯೋಗಿ ಧಾನ್ಯ ಕೇಂದ್ರದಲ್ಲಿ ಸೋಮವಾರ ನಾಗರಾಧನೆ ಮಾಡಲಾಗಿದ್ದು, ಈ ವೇಳೆ ವಿಶೇಷ ಪೂಜೆಯಲ್ಲಿ ಭಕ್ತಸಾಗರವೇ ನೆರೆದಿತ್ತು. ಹಾಗೆಯೇ ದೈವಿಕ ನಾಗನನ್ನು ಆರಾಧಿಸುವ ನಾಗರ ಪಂಚಮಿಯ ಹಿನ್ನೆಲೆಯಲ್ಲಿ ಸದ್ಗುರು ನೇತೃತ್ವದಲ್ಲಿ ಅದ್ಧೂರಿಯಾಗಿ ಕೈಗೊಂಡ ಬೃಹತ್ ಕಾರ್ಯಕ್ರಮದಲ್ಲಿ ಪೂಜಾ ಚಟುವಟಿಕೆಯು ಸಂಪ್ರದಾಯಬದ್ಧವಾಗಿ ನೆರವೇರಿತು.
ಇಲ್ಲಿನ ಸನ್ನಿಧಿಯಲ್ಲಿರುವ ನಾಗಮಂಟಪವನ್ನು ವಿಶೇಷವಾಗಿ ಅಲಂಕರಿಸಿದ್ದು, ನಾಗನಿಗೆ ವಿಶೇಷ ಆರತಿ ಅರ್ಪಿಸಲಾಯಿತು. ಯೋಗೇಶ್ವರಲಿಂಗಕ್ಕೆ ಹಾಲಿನ ಅಭಿಷೇಕ ನೆರವೇರಿಸಲಾಯಿತು. ಇದೇ ಮೊದಲ ಬಾರಿಗೆ ಈ ಭಾಗದ ಜನ ಸಾಂಪ್ರದಾಯಿಕ ನಾಗಮಂಡಲ ನೃತ್ಯವನ್ನು ಕಣ್ತುಂಬಿಕೊಂಡರು.

ಈ ವೇಳೆ ನಟಿಯರಾದ ತಮ್ಮನ್ನಾ, ಶ್ರೀನಿಧಿ ಶೆಟ್ಟಿ, ಸಂಸದರಾದ ಉಮೇಶ್ ಜಾದವ್, ಎನ್.ಮುನಿಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಸಚಿವ ಕೆ.ಎಚ್.ಮುನಿಯಪ್ಪ, ಶಾಸಕರಾದ ಪ್ರದೀಪ್ ಈಶ್ವರ್, ಟಿ.ಬಿ.ಜಯಚಂದ್ರ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪತ್ನಿ ಪ್ರೇಮಾ ಕೃಷ್ಣ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಹೆಗಡೆ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ನಮ್ಮ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕಿ ದಿವ್ಯ ಹೊಸೂರು, ಬಿಬಿಎಂಪಿ ವಿಶೇಷ ಆಯುಕ್ತ ಕೆ.ವಿ.ತಿಲೋಕಚಂದ್ರ ಡಿಜಿಪಿ ರವೀಂದ್ರನಾಥ್, ಎಡಿಜಿ ಸೀಮಂತಕುಮಾರ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.
ನಾಗಮಂಡಲವು ನಾಗನ ಅನುಗ್ರಹ ಪಡೆಯುವ ಸಾಂಪ್ರದಾಯಿಕ ಆಚರಣೆ, ಇದು ಆಧ್ಯಾತ್ಮಿಕ, ಸಾಂಸ್ಕೃತಿಕ ಬೆಳವಣಿಗೆಯ ಅನುಕೂಲಗಳನ್ನು ಹೊಂದಿದೆ ಎಂಬ ನಂಬಿಕೆಯಿದೆ. ಜ್ಯಾಮಿತೀಯ ವಿನ್ಯಾಸದ ಮಂಡಲದ ರೇಖಾ ಚಿತ್ರ ಬಿಡಿಸುವಿಕೆಯು, ಸ್ತೋತ್ರ ಮತ್ತು ಮಂತ್ರಗಳ ಪಠಣ ಹಾಗೂ ಅರ್ಪಣೆಯು ನಾಗಾರಾಧನೆಯಲ್ಲಿದೆ. ಇದರಿಂದ ಜೀವನದಲ್ಲಿರುವ ಅಡೆತಡೆಗಳು ನಿವಾರಣೆಗೊಂಡು ಸಾಮರಸ್ಯ, ಶಾಂತಿ, ಸಮೃದ್ಧಿ ಉಂಟಾಗುತ್ತದೆ. ಪ್ರಾಮಾಣಿಕ ಪ್ರಯತ್ನದಲ್ಲಿ ಯಶಸ್ಸು ಮೂಡಿ ಆಧ್ಯಾತ್ಮಿಕ ಪ್ರಗತಿ ಕಂಡುಬರುತ್ತದೆ ಎಂದು ಸದ್ಗುರು ತಿಳಿಸಿದರು.
ಅಲ್ಲದೆ ಮಾನವ ಹೃದಯದಲ್ಲಿ ಎಲ್ಲ ಮಿತಿಗಳನ್ನು ಮೀರಿ ಹೋಗಬೇಕೆಂಬ ಒಂದು ಅಂತರ್ಗತ ಹಾತೊರೆತವಿದೆ. ನಾಗವು ಜೀವನದ ವಿದ್ಯಮಾನವನ್ನು ಅಗಾಧ ಪರಿಮಾಣದಲ್ಲಿ ಗ್ರಹಿಸಲು ಒಂದು ದ್ವಾರವಾಗಿ ನಿರ್ಮಿಸಲಾದ ಒಂದು ಜೀವಂತ ದೈವ. ಭೌತಿಕತೆ, ಇಂದ್ರಿಯಗಳನ್ನು ಮೀರಿ ಜೀವನವನ್ನು ಆಳವಾಗಿ ತಿಳಿದುಕೊಳ್ಳಲು ಬಯಸುವವರಿಗೆ ನಾಗರ ಪಂಚಮಿಯು ಮಹತ್ವ ಪೂರ್ಣವಾದ ದಿನವಾಗಿದೆ ಎಂದು ಹೇಳಿದರು.
ಇದರ ವಿಷಯಗಳನ್ನು ಗ್ರಹಿಸುವಲ್ಲಿ ನಾಗನ ಉಪಸ್ಥಿತಿ ಇರುತ್ತದೆ. ಹಾಗೆಯೇ ಆತನ ಮಹಿಮೆಯು ಕಾಣಿಸುತ್ತದೆ. ಜೀವನವು ಎಷ್ಟು ಉತ್ಸಾಹಭರಿತವಾಗಿದೆ, ಎಷ್ಟು ಸಂತೋಷದಾಯಕವಾಗಿದೆ, ಎಷ್ಟು ಅದ್ಭುತವಾಗಿದೆ? ಎನ್ನುವುದು ಮುಖ್ಯ. ಇದಕ್ಕೆ ಪೂರಕವಾಗಿ ನಾಗನ ಅನ್ವೇಷಣೆಯಲ್ಲಿ ನಿಶ್ಚಲತೆ, ಲವಲವಿಕೆ ಮತ್ತು ಉನ್ಮತ್ತತೆ ಕಾಣಬಹುದಾಗಿದ್ದು, ಈ ಎಲ್ಲ ಗುಣವನ್ನು ನಾವೆಲ್ಲರೂ ಬೆಳೆಸಿಕೊಳ್ಳಬೇಕು ಎಂದರು.
ಈ ಪೂಜೆಯ ಮಹತ್ವ ತಿಳಿಯಿರಿ
ವಿಶೇಷ ದಿನದ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ 11ರಿಂದ ಮಧ್ಯಾಹ್ನ 12ರವರೆಗೆ ಸರ್ಪದೋಷ ನಿವಾರಣೆಗಾಗಿ ಸಾಂಪ್ರದಾಯಿಕವಾದ ಆಶ್ಲೇಷ ಬಲಿ ಪೂಜಾ ಕಾರ್ಯಕ್ರಮ ನಡೆಯಿತು. ದೇಶ-ವಿದೇಶಗಳಿಂದ ಆಗಮಿಸಿದ್ದ ಭಕ್ತಾದಿಗಳು ಆಗಮಿಕ ಪಂಡಿತರ ಮಾರ್ಗದರ್ಶನದಲ್ಲಿ ಪೂಜೆ ಸಲ್ಲಿಸಿ, ದೋಷಗಳ ಪರಿಹಾರಕ್ಕೆ ಪ್ರಾರ್ಥಿಸಿದರು.
ಕಾರ್ಯಕ್ರಮದಲ್ಲಿ ದೊಡ್ಡ ಜನಸಂದಣಿಯೇ ನೆರೆದಿತ್ತು. ಬೆಳಗ್ಗೆಯಿಂದಲೇ ಜನರು ಜಮಾವಣೆಗೊಂಡರು. ಈ ವೇಳೆ 112 ಆಡಿ ಎತ್ತರದ ಆದಿಯೋಗಿ ಶಿವನ ಮೂರ್ತಿಯನ್ನು ವೀಕ್ಷಿಸಿದರು. ನಾಗಪಂಚಮಿಯನ್ನು ದೊಡ್ಡ ಜಾತ್ರೆ ಮಾದರಿಯಲ್ಲಿ ಆಚರಿಸುತ್ತಿದ್ದು, ಮೂರು ದಿನಗಳ ಅವಧಿಗೆ ವಿಶೇಷ ಆಹಾರ, ಆಟಿಕೆ ಮತ್ತು ಕರಕುಶಲ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು. ಹಲವರು ವಿವಿಧ ಭಾಗಗಳಲ್ಲಿ ಹೆಸರುವಾಸಿಯಾಗಿರುವ ಸಿಹಿ ತಿನಿಸು ಸವಿದರು. ಅಲ್ಲದೆ ಬ್ಯಾಂಡ್, ಪೋಟೋ ಸೇರಿದಂತೆ ದೇವರ ಪೂಜಾ ಸಾಮಗ್ರಿಗಳನ್ನು ಖರೀದಿಸಿದರು.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications