ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ: ಪ್ರತಿ ವರ್ಷ ಈ ಸೇವೆ ಒದಗಿಸಲು ನಿರ್ಧಾರ: ಸಂದೀಪ್ ಬಿ ರೆಡ್ಡಿ
2023-24 ರ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 60 ಕ್ಕಿಂತ ಹೆಚ್ಚು ಅಂಕ ಪಡೆದ ಚಿಕ್ಕಬಳ್ಳಾಪುರ ತಾಲೂಕಿನ ಪರಿಶಿಷ್ಟ ಪಂಗಡ ಮತು ಪರಿಶಿಷ್ಟ ಜಾತಿಯ ಸುಮಾರು 300 ವಿದ್ಯಾರ್ಥಿಗಳಿಗೆ ಸ್ಪಂದನ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿದ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ್, ನಿಮ್ಮ ಮಕ್ಕಳು ಉತ್ತಮ ಸಾಧನೆ ಮಾಡಿರುವುದಕ್ಕೆ ಪೋಷಕರಿಗೆ ಹೆಮ್ಮೆ ಇರಲಿ, ಜೀವನದಲ್ಲಿ ಶೈಕ್ಷಣಿಕ ಗುರಿಯೊಂದಿಗೆ ಭವಿಷ್ಯ ರೂಪಿಸಿಕೊಳ್ಳವಲ್ಲಿ ವಿದ್ಯಾರ್ಥಿಗಳು ವಿಚಲಿತರಾಗಬಾರದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಜೀವನದಲ್ಲಿ ಸಾಧನೆ ಬಹು ಮುಖ್ಯ. ಸಾಧನೆ ಮಾಡಲು ಛಲ ಇರಬೇಕು. ಇದಕ್ಕಾಗಿ ವಿದ್ಯಾರ್ಥಿ ಜೀವನದಿಂದಲೇ ಶಿಸ್ತು, ಸಂಯಮ ರೂಢಿಸಿಕೊಳ್ಳಬೇಕು. ಗುರು ಹಿರಿಯರಿಗೆ ಗೌರವಿಸಬೇಕು. ಉನ್ನತ ಶಿಕ್ಷಣದತ್ತ ಸದಾ ತಮ್ಮ ಚಿತ್ತ ಇರಬೇಕು. ಪ್ರತಿ ವಿದ್ಯಾರ್ಥಿ ಒಬೊಬ್ಬ ಭಗತ್ ಸಿಂಗ್ ಆಗಿ ಈ ಸಮಾಜ ಕಟ್ಟುವ ಕೆಲಸ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಹೇಳಿದರು.
ಮನೆಯಲ್ಲಿನ ಕಷ್ಟ ಕಾರ್ಪಣ್ಯಗಳಿಂದಾಗಿ ವಿದ್ಯಾಭ್ಯಾಸವನ್ನು ಮೊಟಕುಗೊಳಿಸುವ ಹಂತಕ್ಕೆ ತಲುಪಿದ್ದರೆ ಇದು ನಿಜಕ್ಕೂ ದುರ್ದೈವ ಅಂತಹ ವಿದ್ಯಾರ್ಥಿಗಳು ದಾನಿಗಳು ನೀಡುವ ಸವಲತ್ತನ್ನು ಬಳಸಿಕೊಂಡು ವಿದ್ಯಾರ್ಥಿ ಜೀವನವನ್ನು ಉನ್ನತ ಮಟ್ಟಕ್ಕೆ ಏರುವ ಗುರಿಯನ್ನು ಇಟ್ಟುಕೊಂಡು ಚಿಕ್ಕಬಳ್ಳಾಪುರ ಮುನ್ನಡೆಯಬೇಕು ನಗರದಲ್ಲಿ ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಟ್ರಸ್ಟ್ನ ಸಂದೀಪ್.ಬಿ.ರೆಡ್ಡಿ ನೀಡುತ್ತಿರುವ ವಿದ್ಯಾರ್ಥಿವೇತನ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ ಬಿ.ರೆಡ್ಡಿ ಮಾತನಾಡಿ ವಿದ್ಯೆ ಒಂದು ಅಧ್ಬುತವಾದ ಆಯುಧವಾಗಿದ್ದು, ವಿದ್ಯಾರ್ಥಿಗಳು ವಿದ್ಯೆಯೊಂದಿಗೆ ಜ್ಞಾನವಂತರಾಗಿ ಸಮಾಜದಲ್ಲಿ ಉನ್ನತ ಮಟ್ಟದ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಎಲ್ಲಾ ಸಮಾಜದ ದೇವರು. ಅವರು ಮಾಡಿದ ದೊಡ್ಡ ಸಾಧನೆಯಿಂದಲೇ ಇಂದು ಪ್ರತಿಯೊಬ್ಬರು ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಬೆಳೆಯಲು ಅವಕಾಶ ಸಿಕ್ಕಿದೆ. ಇದನ್ನು ಅರಿತು ವಿದ್ಯಾರ್ಥಿಗಳು ದೊಡ್ಡ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.
ಮಹಾತ್ಮ ಗಾಂಧೀಜಿ, ಭಗತ್ ಸಿಂಗ್ ಸೇರಿದಂತೆ ಹಲವು ಮಹನೀಯರು ತಮ್ಮ ಕಾಲಘಟ್ಟದಲ್ಲಿ ಅವರದೇ ಆದ ರೀತಿಯಲ್ಲಿ ಈ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ. ಅಂತವರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡು ಅವರಂತೆ ಬೆಳೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಸ್.ಎಸ್. ಎಲ್.ಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕಗಳಿಸಿದ ಎಸ್. ಸ್ಸಿ ಮತ್ತು ಎಸ್ ಟಿ ವಿದ್ಯಾರ್ಥಿಗಳಿಗೆ ತಲಾ 10 ಸಾವಿರ ರೂ. ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ತಲಾ 5 ಸಾವಿರ ರೂ. ಜತೆಗೆ ಪುಸ್ತಕ ಹಾಗೂ ಫಲಕವನ್ನು ನೀಡಿ ಗೌರವಿಸಲಾಯಿತು.

ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯರೆಡ್ಡಿ ಮಾತನಾಡಿ, ಮಕ್ಕಳ ವಿದ್ಯಾಭ್ಯಾಸಕ್ಕೆ ಪೋಷಕರು ಉತ್ತಮ ವಾತಾವರಣ ನಿರ್ಮಿಸಬೇಕು. ಮಕ್ಕಳ ಮೇಲೆ ಒತ್ತಡ ಹೇರಬಾರದು, ಓದಿನ ವಿಷಯದಲ್ಲಿ ಅವರ ಇಚ್ಛೆಯಂತೆ ಸ್ವಾತಂತ್ರ್ಯ ನೀಡಬೇಕು ಎಂದು ವಿದ್ಯಾರ್ಥಿ ಪೋಷಕರಿಗೆ ಮನವಿ ಮಾಡಿದರು.
ಸಂದೀಪ್ ಬಿ ರೆಡ್ಡಿ ಅವರು ಶಿಕ್ಷಣ ಕ್ಷೇತ್ರಕ್ಕೆ ತಮ್ಮದೇ ಆದ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ಮತ್ತಷ್ಟು ಶಕ್ತಿ ಸಿಕ್ಕಿದರೆ ಇನ್ನಷ್ಟು ಸೇವೆ ಸಲ್ಲಿಸಲು ಸಹಕಾರಿಯಾಗಲಿದೆ. ಅವರಿಗೆ ಮತ್ತಷ್ಟು ಶಕ್ತಿ ತುಂಬುವ ಕೆಲಸ ಎಲ್ಲರಿಂದ ಆಗಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಡಾ.ಎಂ. ಶಿವಾನಂದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿವಿಆರ್ ರಾಜೇಶ್, ದಸಂಸ ಮುಖಂಡರಾದ ಸುಧಾ ವೆಂಕಟೇಶ್, ಗಂಗರೇಕಾಲುವೆ ಮೂರ್ತಿ, ಗವಿರಾಯಪ್ಪ, ಹೈಕೋರ್ಟ್ ವಕೀಲ ರಾಜೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೃಷ್ಣಮುರ್ತಿ, ತಾ.ಪಂ.ಮಾಜಿ ಸದಸ್ಯ ತಿರುಮಲಪ್ಪ, ತಿಪ್ಪೇನಹಳ್ಳಿ ಗ್ರಾ.ಪಂ ಅಧ್ಯಕ್ಷ ಶ್ರೀನಿವಾಸ್, ಪೋಶೆಟ್ಟಿಹಳ್ಳಿ ಗ್ರಾ.ಪಂ. ಅಧ್ಯಕ್ಷ ಶ್ರೀನಿವಾಸ್, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ರಾಜೇಂದ್ರ ಬಾಬು, ಜಯಕುಮಾರ್ ಇದ್ದರು.
-
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications