ನಂದಿಗ್ರಾಮದಲ್ಲಿ ಶಿವೋತ್ಸವ: ದಿ. ಶಂಕರ್ ನಾಗ್ ಕನಸು ಶೀಘ್ರ ನನಸು; ಸಿಎಂ ಬೊಮ್ಮಾಯಿ
ಚಿಕ್ಕಬಳ್ಳಾಪುರ, ಮಾರ್ಚ್ 1: ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದ ಶಿವೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಈ ಐತಿಹಾಸಿಕ ಸ್ಥಳದಲ್ಲಿ ಇಂದು ಶಿವನ ದರ್ಶನ ಮಾಡಲಾಗಿದೆ. ಇದು ಶತಮಾನಗಳ ಇತಿಹಾಸವಿರುವ ದೇವಾಲಯವಿದು. ಶಿವ ಎಂದರೆ ಸೃಷ್ಟಿ, ಲಯದಲ್ಲಿ ಸೃಷ್ಟಿಯಿದೆ. ಲಯ ಮತ್ತು ಸೃಷ್ಟಿ ಒಂದೇ ನಾಣ್ಯದ ಎರಡು ಮುಖಗಳು. ಶಿವರಾತ್ರಿ ದಿನ ಜಾಗರಣೆ ಮಾಡುವುದು, ಸುಖ- ದುಃಖವನ್ನು ಸಮನಾಗಿ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
ನಮ್ಮ ಬದುಕು ಶಿವನ ರೀತಿಯಲ್ಲಿ ಇರಬೇಕು. ಕಣ್ಣು ಮುಚ್ಚಿಕೊಂಡಿರುವ ಶಿವ ಎಲ್ಲವನ್ನು ಅರಿತುಕೊಂಡಿರುತ್ತಾನೆ. ಆತ್ಮ ಲಿಂಗದ ಸತ್ಯವನ್ನು ಅರಿತುಕೊಂಡರೆ ಶಿವ ಅಂಗೈಯಲ್ಲಿ ಕಾಣುತ್ತಾನೆ. ದೈವಕ್ಕಿಂತ ಭಕ್ತಿಯ ಶಕ್ತಿ ಹೆಚ್ಚು ಎಂದು ಹೇಳಿದರು.

ಐತಿಹಾಸ ಪ್ರಸಿದ್ಧ ಶ್ರೀಭೋಗನಂದೀಶ್ವರ ದೇವಸ್ಥಾನ ಅಭಿವೃದ್ಧಿಯಾಗಬೇಕಿದೆ. ನಂದಿ ಬೆಟ್ಟಕ್ಕೆ ಪ್ರತಿದಿನ ಸಾವಿರಾರು ಜನ ಪ್ರವಾಸಿಗರು ಬರುತ್ತಾರೆ. ನಂದಿ ಗಿರಿಧಾಮ ಸಮಗ್ರ ಅಭಿವೃದ್ಧಿಯಾಗಬೇಕು. ದಿ. ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದಾಗಲೇ ನಂದಿಬೆಟ್ಟಕ್ಕೆ ರೋಪ್ವೇ ಮಾಡಲು ಹೇಳಿದ್ದರು. ನಟ ದಿ. ಶಂಕರ್ ನಾಗ್ ನನಗೆ ಹೇಳಿ ಪ್ರಸ್ತಾವನೆ ಕೊಟ್ಟಿದ್ದರು. ನಾನು ಮುಖ್ಯಮಂತ್ರಿ ಆದ ಮೇಲೆ ಶಂಕರ್ ನಾಗ್ ಕನಸನ್ನು ನನಸು ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಎತ್ತಿನಹೊಳೆ ಯೋಜನೆ ಮಾಡಲಾಗುವುದು. ಕೋಲಾರ ಪ್ರವಾಸ ಮಾಡಿದಾಗ ಗಮನಕ್ಕೆ ಬಂತು. ಅತೀ ಹೆಚ್ಚು ಪ್ಲೋರೈಡ್ ಇರುವ ನೀರು ಕುಡಿದು ಅಂಗವಿಕರಾಗಿದ್ದು ಗಮನಕ್ಕೆ ಬಂದಿದೆ. ಎತ್ತಿನಹೊಳೆ ಯೋಜನೆಯಲ್ಲಿ ಹಲವಾರು ಮಾರ್ಪಾಡು ಮಾಡುವ ಮೂಲಕ ಯೋಜನೆಗೆ ತಡೆಯಾಯಿತು. ಈ ವರ್ಷ ಕಾಮಗಾರಿಗೆ ಚುರುಕು ನೀಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಭೋಗನಂದೀಶ್ವರ ದೇವಸ್ಥಾನದಲ್ಲಿ ಶಿವೋತ್ಸವ ಕಾರ್ಯಕ್ರಮ
ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ಭೋಗನಂದೀಶ್ವರ ದೇವಸ್ಥಾನದಲ್ಲಿ ಇಂದು ಶಿವೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆದಿದೆ. ಮಹಾಶಿವರಾತ್ರಿ ಪ್ರಯುಕ್ತ ಸ್ಥಳೀಯ ಶಾಸಕ ಹಾಗೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ನೇತೃತ್ವದಲ್ಲಿ ನಡೆಯುತ್ತಿರುವ ಶಿವೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ್ದರು.
ನಂದಿ ಗ್ರಾಮದಲ್ಲಿ ನಡೆಯುತ್ತಿರುವ ಶಿವೋತ್ಸವ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉಪಸ್ಥಿತಿ ಇದ್ದರು. ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್, ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ್, ಸಿರಿಗೇರೆ ಶ್ರೀಗಳು, ಮುದ್ದೇನಹಳ್ಳಿಯ ಮಧುಸೂದನ ನಾಯ್ಡು ಆಗಮಿಸಿದ್ದರು.
ನಂತರ ಸಚಿವ ಕೆ. ಸುಧಾಕರ್ ಮಾತನಾಡಿ, ಕಳೆದ 40 ವರ್ಷಗಳ ಹಿಂದೆಯೇ ನಂದಿ ಗಿರಿಧಾಮಕ್ಕೆ ರೋಪ್ವೇ ಮಾಡಬೇಕು ಎಂದು ಕನಸು ಕಂಡಿದ್ದೆವು. ಅದು ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನನಸಾಗಿದೆ ಎಂದರು.
1973ರವರೆಗೂ ಬೆಂಗಳೂರಿಗೆ ನೀರು ಕೊಡುತ್ತಿದ್ದ ಅರ್ಕಾವತಿ ನೀರು ನಮ್ಮ ಭಾಗದ್ದು. ಈ ಜಿಲ್ಲೆಗೆ ವಿಶೇಷ ನೀರಾವರಿ ಕೊಡುಗೆ ನೀಡಲು ಸಿಎಂ ತೀರ್ಮಾನ ಮಾಡಿದ್ದಾರೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಭಾಗಕ್ಕೆ ನೀರಾವರಿಯಲ್ಲಿ ಸಿಎಂ ಕೊಡುಗೆ ನೀಡಲಿದ್ದಾರೆ ಎಂದು ತಿಳಿಸಿದರು.
ಮೈಸೂರು ದಸರಾ, ಹಂಪಿ ಉತ್ಸವದ ರೀತಿ ಪ್ರತೀ ವರ್ಷ ನಂದಿಯಲ್ಲಿ ಶಿವೋತ್ಸವ ಆಚರಣೆ ಮಾಡೋಣ. ಆಧ್ಯಾತ್ಮಿಕ ಹಿನ್ನೆಲೆಯಿರುವ ಮಹಾನಿಯರು ಹುಟ್ಟಿದ ಜಿಲ್ಲೆಯಿದು. ಈ ಕ್ಷೇತ್ರದ ಮಹಿಮೆಯನ್ನು ಇಡೀ ರಾಜ್ಯಕ್ಕೆ ತಿಳಿಸೋಣ ಎಂದು ಸಚಿವ ಕೆ. ಸುಧಾಕರ್ ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications