ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ತಲಾ 6 ವೆಂಟಿಲೇಟರ್ ಅಳವಡಿಕೆ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು/ಚಿಕ್ಕಬಳ್ಳಾಪುರ, ಮೇ 12: ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಅಳವಡಿಕೆ ಹಾಗೂ ಅರವಳಿಕೆ ತಜ್ಞರ ನೇಮಕಕ್ಕೆ ಸೂಚಿಸಲಾಗಿದೆ. ಒಟ್ಟು 2,480 ವೈದ್ಯರ ನೇಮಕವೂ ಶೀಘ್ರ ಆಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಬೆಂಗಳೂರಿನ ಕೆ.ಆರ್.ಪುರ, ಹೊಸಕೋಟೆ, ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ, ಮೂಲಸೌಕರ್ಯವನ್ನು ಸಚಿವರು ಪರಿಶೀಲಿಸಿದರು.

ಕಳೆದ ಆರೇಳು ತಿಂಗಳಲ್ಲಿ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ 50 ಆಕ್ಸಿಜನ್ ಹಾಸಿಗೆ, ಆರು ವೆಂಟಿಲೇಟರ್ ಅಳವಡಿಸಲಾಗಿದೆ. ಕೆಲವೆಡೆ ಪೂರ್ಣ ಪ್ರಮಾಣದಲ್ಲಿ ಆಗಿಲ್ಲ. ಅದಕ್ಕಾಗಿ ಸೂಚನೆ ನೀಡಲಾಗಿದೆ. ಅರವಳಿಕೆ ತಜ್ಞರು, ಫಿಸಿಶಿಯನ್ ಇಲ್ಲದ ಕಡೆ ತಾತ್ಕಾಲಿಕ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. 720 ತಜ್ಞರನ್ನು ನೇರ ನೇಮಕ ಸೇರಿ ಒಟ್ಟು 2,480 ವೈದ್ಯರನ್ನು ನೇರ ನೇಮಕ ಮಾಡುವ ಪ್ರಕ್ರಿಯೆ ನಡೆದಿದೆ ಎಂದರು.

ಬೆಂಗಳೂರು ನಗರದಲ್ಲಿ ಕೋವಿಡ್ ಹತೋಟಿಗೆ ಬರಲಿದೆ. ಗ್ರಾಮೀಣ ಪ್ರದೇಶಗಳಲ್ಲಿ ಏರಿಕೆ ಹಾಗೂ ನಿಯಂತ್ರಣ ಕುರಿತು ಚರ್ಚಿಸಲಾಗಿದೆ. ಬೇರೆ ಜಿಲ್ಲೆಗಳಲ್ಲಿ ಲಭ್ಯವಿರುವ ಮೂಲಸೌಕರ್ಯ ಬಳಸಿಕೊಂಡು ಸೇವೆ ನೀಡಬೇಕಿದ್ದು, ಈಗಿನಿಂದಲೇ ಸಿದ್ಧತೆಗೆ ಸೂಚಿಸಲಾಗಿದೆ ಎಂದರು.

ಎಂವಿಜೆ ಆಸ್ಪತ್ರೆಗೆ 10 ವೆಂಟಿಲೇಟರ್

ಎಂವಿಜೆ ಆಸ್ಪತ್ರೆಗೆ 10 ವೆಂಟಿಲೇಟರ್

ಹೊಸಕೋಟೆಯ ಎಂವಿಜೆ ಆಸ್ಪತ್ರೆಗೆ 10 ವೆಂಟಿಲೇಟರ್ ನೀಡಲಾಗಿದೆ. ಇನ್ನೂ 10 ವೆಂಟಿಲೇಟರ್ ಕೇಳಿದ್ದು, ಅದನ್ನೂ ಕಳುಹಿಸಿಕೊಡಲಾಗುವುದು. ಹೊಸದಾಗಿ 115 ಹಾಸಿಗೆಯ ಸ್ಟೆಪ್ ಡೌನ್ ಆಸ್ಪತ್ರೆ ನಿರ್ಮಿಸಿ ಕೋವಿಡ್ ರೋಗಿಗಳಿಗೆ ಆರೈಕೆ ನೀಡಲು ನಿರ್ಧರಿಸಲಾಗಿದೆ. ರೋಗಿಗಳು ತಡವಾಗಿ ಆಸ್ಪತ್ರೆಗೆ ಬರುವುದರಿಂದ ಸಾವಿನ ಪ್ರಮಾಣ ಹೆಚ್ಚಾಗಿದೆ. ವರದಿ ಬಂದ ಕೂಡಲೇ ತಕ್ಷಣ ಚಿಕಿತ್ಸೆ ನೀಡಬೇಕು. ಟಾಸ್ಕ್ ಫೋರ್ಸ್ ಪ್ರತಿ ದಿನ ಮನೆಗೆ ಭೇಟಿ ನೀಡಿ ರೋಗಿಗಳ ಪರಿಸ್ಥಿತಿ ಪರೀಕ್ಷಿಸಬೇಕು ಎಂದು ಸೂಚಿಸಲಾಗಿದೆ ಎಂದರು.

ಹೊಸಕೋಟೆಯ ತಾಲೂಕು ಆಸ್ಪತ್ರೆಯಲ್ಲಿ 60 ಹಾಸಿಗೆ ಇದ್ದು, 40 ಅನ್ನು ಆಕ್ಸಿಜನ್ ಹಾಸಿಗೆ ಮಾಡಲಾಗಿದೆ. ಔಷಧಿ ಕೊರತೆ ಕಂಡುಬಂದರೆ, ಸ್ಥಳೀಯವಾಗಿಯೇ ಖರೀದಿಸಿ ತಕ್ಷಣ ಪೂರೈಸಲಾಗುತ್ತದೆ ಎಂದರು.

ಚಿಕ್ಕಬಳ್ಳಾಪುರದಲ್ಲಿ 16 ಆಂಬ್ಯುಲೆನ್ಸ್

ಚಿಕ್ಕಬಳ್ಳಾಪುರದಲ್ಲಿ 16 ಆಂಬ್ಯುಲೆನ್ಸ್

ಚಿಕ್ಕಬಳ್ಳಾಪುರದಲ್ಲಿ 16 ಆಂಬ್ಯುಲೆನ್ಸ್ ಇದ್ದು, ಇನ್ನೂ 15 ಪಡೆಯಲು ಸೂಚಿಸಲಾಗಿದೆ. ಪ್ರತಿ ತಾಲೂಕಿನಲ್ಲಿ 5-6 ಆಂಬ್ಯುಲೆನ್ಸ್ ಇರಬೇಕು. ಖಾಸಗಿ ಆಸ್ಪತ್ರೆಯ 112 ಆಕ್ಸಿಜನ್ ಹಾಸಿಗೆಗಳನ್ನು ಜಿಲ್ಲೆಯ ಜನರಿಗೆ ಮೀಸಲಿಡಲಾಗುತ್ತಿದೆ. ಚಿಂತಾಮಣಿಯಲ್ಲಿ 25% ಪಾಸಿಟಿವಿಟಿ ದರ ಇದೆ. ಇಲ್ಲಿ ಸಾವಿನ ಪ್ರಮಾಣ ಇಳಿಸುವುದು ಮುಖ್ಯ. ಬೂತ್ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಮನೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ಸ್ಥಿತಿ ಪರೀಕ್ಷಿಸುತ್ತಿದ್ದಾರೆ ಎಂದರು.

ಚಿಂತಾಮಣಿಗೆ ಒಂದು ಆಕ್ಸಿಜನ್ ಘಟಕ ಮಂಜೂರಾಗಿದೆ

ಚಿಂತಾಮಣಿಗೆ ಒಂದು ಆಕ್ಸಿಜನ್ ಘಟಕ ಮಂಜೂರಾಗಿದೆ

ಚಿಕ್ಕಬಳ್ಳಾಪುರದಲ್ಲಿ 10 ಸಾವಿರ ಜನರಿಗೆ ಆಗುವಷ್ಟು ಕೋವಿಡ್ ಕೇರ್ ಸೆಂಟರ್ ಗುರುತಿಸಿದ್ದರೂ ರೋಗಿಗಳು ಹೆಚ್ಚು ಬರುತ್ತಿಲ್ಲ. ಮನೆಯಲ್ಲೇ ಆರೈಕೆ ಮಾಡಿಕೊಳ್ಳುತ್ತಿದ್ದಾರೆ. ಚಿಂತಾಮಣಿಗೆ ಒಂದು ಆಕ್ಸಿಜನ್ ಘಟಕ ಮಂಜೂರಾಗಿದೆ. ಸಿಎಸ್ ಆರ್ ಅನುದಾನದಡಿ, ಜಿಲ್ಲಾ ಕೇಂದ್ರಕ್ಕೆ ಒಂದು ಆಕ್ಸಿಜನ್ ಜನರೇಟರ್ ಬರಲಿದೆ. ಗೌರಿಬಿದನೂರಿನಲ್ಲಿ ಒಂದು ಘಟಕ, ಬಾಗೇಪಲ್ಲಿಯಲ್ಲಿ ಒಂದು ಘಟಕ ಬರಲಿದೆ ಎಂದರು.

Recommended Video

    ಎರಡನೇ ಡೋಸ್‌ ಲಸಿಕೆ ಕೂಡ ಸಿಗದೇ ಪರದಾಡ್ತಿದ್ದಾರೆ ಜನ, ಲಸಿಕೆ ಕೇಂದ್ರಗಳ ಮುಂದೆ ಬೆಳ್ಳಂಬೆಳಿಗ್ಗೆ ಕ್ಯೂ | Oneindia Kannada
    ದಾದಿಯರಿಗೂ ರಿಸ್ಕ್ ಭತ್ಯೆ ನೀಡಲಾಗುವುದು

    ದಾದಿಯರಿಗೂ ರಿಸ್ಕ್ ಭತ್ಯೆ ನೀಡಲಾಗುವುದು

    ಕೆ.ಆರ್.ಪುರ ಆಸ್ಪತ್ರೆಯಲ್ಲಿ 10 ವೆಂಟಿಲೇಟರ್‌ಗೆ ಬೇಡಿಕೆ ಇಟ್ಟಿದ್ದು, ಅದಕ್ಕೆ ವ್ಯವಸ್ಥೆ ಮಾಡಲಾಗುವುದು. ಕೆಲ ತಾಂತ್ರಿಕ ಸಮಸ್ಯೆ ಸರಿಪಡಿಸಲು ಸೂಚಿಸಲಾಗಿದೆ.

    ಕೋವಿಡ್ ಲಸಿಕೆಯ ಕೊರತೆ ಇಲ್ಲ. ಲಸಿಕೆ ಪೂರೈಕೆಯಾದ ಕೂಡಲೇ ಎಲ್ಲರಿಗೂ ಲಸಿಕೆ ನೀಡಲಾಗುವುದು. ಎಲ್ಲರೂ ಆನ್ ಲೈನ್ ನಲ್ಲಿ ನೋಂದಣಿ ಮಾಡುವಾಗ ತಮ್ಮ ಜಿಲ್ಲೆಯಲ್ಲೇ ನಿಗದಿ ಮಾಡಿ ಅಲ್ಲೇ ಲಸಿಕೆ ಪಡೆಯಬೇಕೆಂದು ಕೋರುತ್ತೇನೆ.

    ವೈದ್ಯರಂತೆ ದಾದಿಯರು ಕೂಡ ಮುಖ್ಯ. ಕೋವಿಡ್ ವಿರುದ್ಧ ಹೋರಾಡುತ್ತಿರುವ ಅವರಿಗೆ ರಿಸ್ಕ್ ಭತ್ಯೆ ನೀಡಲಾಗುವುದು.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+