ಚಿಕ್ಕಬಳ್ಳಾಪುರದಲ್ಲಿ ಜಲಾಶಯಕ್ಕೆ ಹಾರಿ ಶಿಕ್ಷಕ ಆತ್ಮಹತ್ಯೆ

ಚಿಕ್ಕಬಳ್ಳಾಪುರ, ಆಗಸ್ಟ್ 19: ಶಿಕ್ಷಕರೊಬ್ಬರು ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜಿಲ್ಲೆಯ ಗೌರಿಬಿದನೂರು ತಾಲೂಕಿನ ಜಿ.ಬೊಮ್ಮಸಂದ್ರದ ನಿವಾಸಿ, ಶಿಕ್ಷಕ ಶ್ರೀನಾಥ ರೆಡ್ಡಿ (34) ಅವರು ಜಕ್ಕಳಮಡಗು ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Recommended Video

      ISIS ಉಗ್ರರಿಗೆ ಸಹಾಯ ಮಾಡುತ್ತಿದ್ದ ಬೆಂಗಳೂರು ಮೂಲದ Abdur Rahman ಭಂದನ | Oneindia Kannada

      ಇಂದು ಬೆಳಿಗ್ಗೆ ಜಲಾಶಯದಲ್ಲಿ ಮೃತದೇಹ ಪತ್ತೆಯಾಗಿದೆ. ಬಾದಿಮರಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದ ಶ್ರೀನಾಥ ರೆಡ್ಡಿ ಅವರು ಸೋಮವಾರ ಶಾಲೆಗೆ ಹಾಜರಾಗಿರಲಿಲ್ಲ. ಆದಿನ ಸಂಜೆ ಮನೆಗೂ ಬಂದಿರಲಿಲ್ಲ. ಹೀಗಾಗಿ ಕುಟುಂಬದವರು ಅವರ ಹುಡುಕಾಟ ನಡೆಸಿದ್ದರು.

      ಆಗ ಶ್ರೀನಾಥ ರೆಡ್ಡಿ ಅವರ ಬೈಕ್ ಹಾಗೂ ಮೊಬೈಲ್ ಜಕ್ಕಲಮಡಗು ಜಲಾಶಯದ ದಂಡೆ ಮೇಲೆ ಪತ್ತೆಯಾಗಿದ್ದವು. ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಸಹಾಯದಿಂದ ಮಂಗಳವಾರ ಕೆರೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದರು.

      Chikkaballapur: Teacher committs Suicide By Jumping Into Reservoir

      ಶ್ರೀನಾಥ ರೆಡ್ಡಿ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ. ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+