ನಂದಿ ಗಿರಿಧಾಮಕ್ಕೆ ಹೋಗುವ ಪ್ರವಾಸಿಗರ ಗಮನಕ್ಕೆ
ಚಿಕ್ಕಬಳ್ಳಾಪುರ, ಜುಲೈ 14; ಬೆಂಗಳೂರು ನಗರಕ್ಕೆ ಹತ್ತಿರದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮ. ಅನ್ಲಾಕ್ ಘೋಷಣೆಯಾದ ಬಳಿಕ ಸಾವಿರಾರು ಪ್ರವಾಸಿಗರು ಪ್ರಕೃತಿ ಸೌಂದರ್ಯ ಸವಿಯಲು ನಂದಿ ಗಿರಿಧಾಮಕ್ಕೆ ಭೇಟಿ ನೀಡುತ್ತಿದ್ದಾರೆ. ನೂರಾರು ಜನರು ಸೇರಿರುವಾಗ ಕೋವಿಡ್ ನಿಯಮಗಳ ಪಾಲನೆ ಹೇಗೆ?.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ನಂದಿ ಗಿರಿಧಾಮಕ್ಕೆ ಪ್ರವಾಸಿಗರನ್ನು ನಿರ್ಬಂಧಿಸುವ ಕುರಿತು ತೀರ್ಮಾನ ಕೈಗೊಂಡಿದೆ. ಕೋವಿಡ್ ಹರಡುವಿಕೆಯನ್ನು ತಡೆಯಲು ಪೊಲೀಸ್ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ನಂದಿ ಗಿರಿಧಾಮಕ್ಕೆ ಬೇರೆ-ಬೇರೆ ಜಿಲ್ಲೆಗಳ ಪ್ರವಾಸಿಗರು ಅದರಲ್ಲೂ ಬೆಂಗಳೂರು ನಗರದಿಂದ ನೂರಾರು ಜನರು ಆಗಮಿಸುತ್ತಾರೆ. ಸರ್ಕಾರಿ ರಜೆ ದಿನಗಳು ಮತ್ತು ವಾರಾಂತ್ಯದಲ್ಲಿ ಸಾವಿರಾರು ಜನರು ಬರುತ್ತಾರೆ.

ಕೋವಿಡ್ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿದರೂ ನಂದಿಬೆಟ್ಟದಲ್ಲಿ ಜನರು, ಸಂಚಾರ ದಟ್ಟಣೆಯನ್ನು ಹತೋಟಿಗೆ ತರಲು ಸಾಧ್ಯವಾಗುತ್ತಿಲ್ಲ. ಪ್ರವಾಸಿಗರ ಭೇಟಿಗೆ ನಿರ್ಬಂಧ ವಿಧಿಸುವುದು ಉತ್ತಮ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಮನವಿ ಮಾಡಿರುತ್ತಾರೆ.
ಆರೋಗ್ಯ, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ, ಸಚಿವರು ನೀಡಿರುವ ನಿರ್ದೇಶನದ ಅನ್ವಯ ಕೋವಿಡ್ ಸೋಂಕು ನಿಯಂತ್ರಿಸಲು ನಂದಿಬೆಟ್ಟದಲ್ಲಿ ಜನಸಂದಣಿ ತಡೆಯಲು ಕ್ರಮ ಕೈಗೊಳ್ಳಾಗಿದೆ.
ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಜನಪ್ರಿಯ ಪ್ರವಾಸಿ ತಾಣವಾದ ನಂದಿಗಿರಿಧಾಮಕ್ಕೆ ವಾರಾಂತ್ಯದಲ್ಲಿ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.@CMofKarnataka pic.twitter.com/1wbMRQ7ZHL
— DIPR Karnataka (@KarnatakaVarthe) July 14, 2021
ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿ ಅಮರೇಶ್ ಹೆಚ್. ನಂದಿಬೆಟ್ಟಕ್ಕೆ ಪ್ರವಾಸಿಗರ ಭೇಟಿ ನಿಷೇಧಿಸಿದ್ದಾರೆ. 12/72021ರಿಂದ ಮುಂದಿನ ಆದೇಶದ ತನಕ ಇದು ಜಾರಿಯಲ್ಲಿರುತ್ತದೆ. ವಾರಾಂತ್ಯ ಅಂದರೆ ಶುಕ್ರವಾರ ಸಂಜೆ 6 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯ ತನಕ ನಂದಿಬೆಟ್ಟಕ್ಕೆ ಪ್ರವಾಸಿಗರು ಭೇಟಿ ನೀಡುವಂತಿಲ್ಲ.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆದೇಶದ ಅನ್ವಯ ಈ ಶುಕ್ರವಾರದಿಂದಲೇ ನಂದಿಬೆಟ್ಟಕ್ಕೆ ವಾರಾಂತ್ಯದಲ್ಲಿ ಜನರು ಭೇಟಿ ನೀಡುವಂತಿಲ್ಲ. ಆದ್ದರಿಂದ ಬೆಂಗಳೂರು ಸೇರಿದಂತೆ ಬೇರೆ ಜಿಲ್ಲೆಯ ಪ್ರವಾಸಿಗರು ಬಂದರೆ ವಾಪಸ್ ಹೋಗಬೇಕಾಗುತ್ತದೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications