ನಂದಿ ಬೆಟ್ಟದಲ್ಲಿ ಇನ್ನು ಸೂರ್ಯೋದಯ ನೋಡುವ ಭಾಗ್ಯವಿಲ್ಲ!
ಚಿಕ್ಕಬಳ್ಳಾಪುರ, ಜೂನ್ 05 : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ನಂದಿ ಬೆಟ್ಟ ಪ್ರವಾಸಿಗರ ನೆಚ್ಚಿನ ತಾಣ. ಅದರಲ್ಲಿಯೂ ಬೆಂಗಳೂರು ನಗರದಿಂದ ಸಾವಿರಾರು ಜನರು ಸೂರ್ಯೋದಯ ನೋಡಲು ಮುಂಜಾನೆಯೇ ನಂದಿ ಬೆಟ್ಟಕ್ಕೆ ಹೋಗುತ್ತಿದ್ದರು.
Recommended Video
ಲಾಕ್ ಡೌನ್ ಪರಿಣಾಮ ನಂದಿ ಬೆಟ್ಟಕ್ಕೆ ಜನರ ಭೇಟಿಯನ್ನು ನಿಷೇಧಿಸಲಾಗಿದೆ. ಜೂನ್ 30ರ ತನಕ ಈ ಆದೇಶ ಜಾರಿಯಲ್ಲಿರುತ್ತದೆ. ಸರ್ಕಾರ ನೀಡುವ ಮುಂದಿನ ಸೂಚನೆ ನೋಡಿಕೊಂಡು ತೋಟಗಾರಿಕಾ ಇಲಾಖೆ ಪ್ರವಾಸಿಗರ ಭೇಟಿ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ.
ಲಾಕ್ ಡೌನ್ ಅವಧಿ ಮುಗಿದ ಬಳಿಕವೂ ನಂದಿ ಬೆಟ್ಟದಲ್ಲಿ ಸೂರ್ಯೋದಯ ನೋಡುವ ಭಾಗ್ಯ ಜನರಿಗೆ ಸಿಗುವುದಿಲ್ಲ. ನಂದಿ ಬೆಟ್ಟಕ್ಕೆ ಬೆಳಗ್ಗೆ 8 ಗಂಟೆಯ ಬಳಿಕ ಮಾತ್ರ ಪ್ರವೇಶ ನೀಡಲು ತೋಟಗಾರಿಕಾ ಇಲಾಖೆ ಚಿಂತನೆ ನಡೆಸಿದೆ.

ವಾರಾಂತ್ಯದ ದಿನಗಳಲ್ಲಿ 8 ರಿಂದ 10 ಸಾವಿರ ಜನರು ಮುಂಜಾನೆ ಸೂರ್ಯೋದಯ ನೋಡಲು ನಂದಿ ಬೆಟ್ಟಕ್ಕೆ ಆಗಮಿಸುತ್ತಾರೆ. ಇಷ್ಟು ಜನರು ಬರುವುದರಿಂದ ಸಾಮಾಜಿಕ ಅಂತರ ಕಾಪಾಡುವುದು ಸಾಧ್ಯವಿಲ್ಲದ ಮಾತು. ಆದ್ದರಿಂದ, ಸೂರ್ಯೋದಯ ನೋಡುವುದಕ್ಕೆ ನಿರ್ಬಂಧ ಹಾಕುವ ಚಿಂತನೆ ಇದೆ.
ಶನಿವಾರ ಮತ್ತು ಭಾನುವಾರ ನಂದಿ ಬೆಟ್ಟದ ಬುಡದಲ್ಲಿ ಆಗುತ್ತಿದ್ದ ಸಂಚಾರ ದಟ್ಟಣೆ ತಪ್ಪಿಸಲು ತೋಟಗಾರಿಕಾ ಇಲಾಖೆ ವಾಹನ ಇರುವಲ್ಲಿಗೆ ಹೋಗಿ ಸಿಬ್ಬಂದಿ ಟಿಕೆಟ್ ಕೊಡುವ ವ್ಯವಸ್ಥೆ ಮಾಡಿತ್ತು. ಆದರೆ, ಈಗ ಕೊರೊನಾ ವೈರಸ್ ಸೋಂಕಿನ ಮಾರ್ಗಸೂಚಿ ಅನ್ವಯ ಇದು ಸಾಧ್ಯವಿಲ್ಲ.
ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ಜೊತೆ ನಂದಿ ಬೆಟ್ಟಕ್ಕೆ ಬರುವ ಪ್ರವಾಸಿಗೆ ಸುರಕ್ಷತೆ ಬಗ್ಗೆ ತೋಟಗಾರಿಕಾ ಇಲಾಖೆ ಚರ್ಚೆ ನಡೆಸಲಿದೆ. ಬಳಿಕ ಪ್ರವಾಸಿಗರ ಭೇಟಿ ಬಗ್ಗೆ ಅಂತಿಮ ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications