ನೂರರ ಗಡಿ ದಾಟಿದ ಬೀನ್ಸ್, ಮೆಣಸಿನಕಾಯಿ ದರ: ಯಾವ ತರಕಾರಿಗೆ ಎಷ್ಟು ಬೆಲೆ?
ಚಿಕ್ಕಬಳ್ಳಾಪುರ, ಜೂನ್ 26: ಪ್ರಸ್ತುತ ಮಳೆ ಕೈ ಕೊಟ್ಟಿರುವ ಪರಿಣಾಮ ತರಕಾರಿ ಬೆಳೆಗಳ ಇಳುವರಿ ಕಡಿಮೆಯಾಗಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ತರಕಾರಿ ಬೆಲೆ ಏರಿಕೆಯಾಗ ತೊಡಗಿದ್ದು, ಇದು ಗ್ರಾಹಕರ ಜೇಬಿಗೆ ಕತ್ತರಿ ಬೀಳುತ್ತಿದೆ.
ಜಿಲ್ಲೆಯ ರೈತರು ಹೂ, ಹಣ್ಣು ಬೆಳೆಯುವುದರ ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ತರಕಾರಿ ಬೆಳೆದು ಆದಾಯ ಗಳಿಸುತ್ತಾರೆ. ಸದ್ಯ ಈ ಬಾರಿ ಮಳೆ ಕೈ ಕೊಟ್ಟಿರುವ ಪರಿಣಾಮ ನಿರೀಕ್ಷಿತ ಪ್ರಮಾಣದಲ್ಲಿ ರೈತರು ತರಕಾರಿ ಬೆಳೆಯಲು ಸಾಧ್ಯವಾಗುತ್ತಿಲ್ಲ. ಮಳೆ ಕೊರತೆಯಿಂದಾಗಿ ಮುಂಗಾರು ಕೃಷಿ ಚಟುವಟಿಕೆಗಳು ಸಹ ಹಿನ್ನೆಡೆಯಾಗಿದೆ.

ಕಳೆದ ಎರಡು ವರ್ಷದಿಂದ ಮುಂಗಾರು, ಹಿಂಗಾರು ಮಳೆಗಳು ಉತ್ತಮವಾಗಿ ಸುರಿದಿದೆ. ಆದರೆ, ಪ್ರಸಕ್ತ ಮುಂಗಾರು ಪೂರ್ವದಲ್ಲಿಯೇ ಮಳೆ ಕೈ ಕೊಟ್ಟಿದೆ. ಹೀಗಾಗಿ ಮಳೆಯಾಶ್ರಿತ ಬೆಳೆಗಳ ಬಿತ್ತನೆಗೆ ಪೆಟ್ಟು ಬಿದ್ದಿದೆ. ಅಲ್ಲದೇ ನೀರಾವರಿ ಹೊಂದಿರುವರು ನಿರೀಕ್ಷಿತ ಪ್ರಮಾಣದಲ್ಲಿ ತೋಟಗಾರಿಕಾ ಬೆಳೆಗಳನ್ನು ಬೆಳೆಯಲು ಆಗುತ್ತಿಲ್ಲ. ಹೀಗಾಗಿ ಮಳೆ ಧರೆಗೆ ಬೀಳದೇ ಅನ್ನದಾತರು ಕಂಗಾಲಾಗಿದ್ದಾರೆ.
ಅಲ್ಲದೇ ಬಿಸಿಲಿನ ತಾಪಮಾನ ಏರಿಕೆಯಿಂದ ತರಕಾರಿ ಬೆಳೆಗಳ ಇಳುವರಿಯೂ ಕುಂಠಿತಗೊಂಡಿದ್ದು, ಮಾರುಕಟ್ಟೆಯಲ್ಲಿ ಈಗ ತರಕಾರಿ ಬೆಲೆ ಹೆಚ್ಚಳ ಸದ್ದು ಮಾಡುತ್ತಿದೆ. ಸ್ಥಳೀಯ ಮಾರುಕಟ್ಟೆಗಳಿಗೆ ನಾನಾ ಹಳ್ಳಿಗಳಿಂದ ತರಕಾರಿ ಮಾರಾಟಕ್ಕೆ ಬರುತ್ತಿದ್ದ ರೈತರ ಸಂಖ್ಯೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದ್ದು, ಇದು ಪರೋಕ್ಷವಾಗಿ ಬೆಲೆ ಏರಿಕೆಗೆ ಕಾರಣವಾಗಿದೆ.
ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ತರಕಾರಿ ದರ ಹೇಗಿದೆ?
ಸದ್ಯ ಮಾರುಕಟ್ಟೆಯಲ್ಲಿ ವಿವಿಧ ತರಕಾರಿ ಬೆಲೆ ಗಗನಕ್ಕೇರಿದೆ. ಬೀನ್ಸ್ ಕೆ.ಜಿಗೆ 150 ರೂ, ಉಳಿದಂತೆ ಹಸಿ ಮೆಣಸಿನಕಾಯಿ ಕೆ.ಜಿಗೆ 100 ರೂ, ಬಟಾಣಿ 180 ರೂ, ಕ್ಯಾರೆಟ್ 80 ರೂ, ಟೊಮೆಟೊ 90 ರೂ, ಬೆಂಡೆಕಾಯಿ 50 ರೂ, ಮೂಲಂಗಿ 50 ರೂ, ಹೀರೇಕಾಯಿ 60 ರೂ, ನೌಕೋಲ್ 40 ರೂ, ಚಿಕ್ಕಡಿಕಾಯಿ 80ರೂ ವರೆಗೆ ಪ್ರತಿ ಕೆ.ಜಿ ಮಾರಾಟವಾಗುತ್ತಿದೆ.

ಆಲೂಗಡ್ಡೆ ಮತ್ತು ಈರುಳ್ಳಿ ಕೆಜಿ 20 ರೂ. ಸಾಮಾನ್ಯ ದರವಿದ್ದು, ಬದನೆಕಾಯಿ 60 ರೂ, ನೌಕೋಲ್ 40 ರೂ, ಹೂ ಕೋಸು 40, ಕ್ಯಾಪ್ಸಿಕಂ 60 ರೂ, ಸೋರೆಕಾಯಿ 30 ರೂ, ಸೌತೆ 10 ರೂ, ಬೂದಕುಂಬಳ 30 ರೂ.ಗೆ, ಒಂದು ಕೆ.ಜಿ ಕೊತ್ತಂಬರಿ ಸೊಪ್ಪು 200 ರೂ.ಗೆ ಮಾರಾಟವಾದರೆ, 50 ರಿಂದ 70 ರೂವರೆಗೆ ದರವನ್ನೇ ಕಾಯ್ದುಕೊಂಡಿದ್ದ ಶುಂಠಿಯ ದರ 300 ರೂವರೆಗೆ ಪ್ರತಿ ಕೆ.ಜಿ ಮಾರಾಟವಾಗುತ್ತಿದೆ.
ಸದ್ಯ ನಿರೀಕ್ಷೆಗೆ ತಕ್ಕಂತೆ ಸ್ಥಳೀಯ ಮಾರುಕಟ್ಟೆಗೆ ತರಕಾರಿ ಆವಕ ಪ್ರಮಾಣ ಕಡಿಮೆಯಾಗಿರುವುದರಿಂದ ಒಂದು ತಿಂಗಳ ಹಿಂದೆ ಇದ್ದ ತರಕಾರಿ ಬೆಲೆಗಳು ಈಗ ದುಪ್ಪಟ್ಟಾಗಿವೆ. ದಿನದಿಂದ ದಿನಕ್ಕೆ ತರಕಾರಿ ಬೆಲೆಗಳು ಏರುತ್ತಿದ್ದು, ಇದರಿಂದ ಗ್ರಾಹಕರ ಜೇಬು ಭಾರವಾಗುತ್ತಿದೆ.
ದಿನ ನಿತ್ಯ ರುಚಿಕರ ಊಟ ತಿಂಡಿಗಳ ಮೂಲಕ ಗಮನ ಸೆಳೆಯುತ್ತಿದ್ದ ಹೊಟೇಲ್ ಮಾಲೀಕರು ಇದೀಗ ಮಾರುಕಟ್ಟೆಗೆ ಬಂದು ಕಡಿಮೆ ಬೆಲೆಗೆ ಸಿಗುವ ತರಕಾರಿ ಖರೀದಿಸಿ ಅಡುಗೆಗೆ ಬಳಸುತ್ತಿದ್ದಾರೆ. ಇನ್ನು ಜನಸಾಮಾನ್ಯರು ಕಡಿಮೆ ಬೆಲೆಯಲ್ಲಿ ಸಿಗುವ ತರಕಾರಿ ಖರೀದಿಸಲು ಮಾರುಕಟ್ಟೆಯಲ್ಲಿ ಚೌಕಾಸಿ ವ್ಯಾಪಾರಕ್ಕೆ ಇಳಿದಿದ್ದಾರೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications