ಕಾಂಗ್ರೆಸ್ಗೆ ಮತ ಹಾಕಿದರೆ ಡಬಲ್ ಕಷ್ಟ, ಉತ್ತಮ ಜೀವನಕ್ಕಾಗಿ ಪ್ರಧಾನಿ ಮೋದಿಗೆ ಮತ ನೀಡಿ: ಕೆ.ಸುಧಾಕರ್ ಮನವಿ
ಚಿಕ್ಕಬಳ್ಳಾಪುರ ಏಪ್ರಿಲ್ 12: ಲೋಕಸಭಾ ಚುನಾವಣೆಗೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಎಲ್ಲೆಡೆ ಪ್ರಚಾರದ ಬಿರುಗಾಳಿ ಬೀಸಿದೆ. ಈ ನಡುವೆ ಆರೋಪ ಪ್ರತ್ಯಾರೋಪಗಳು ಕೇಳಿ ಬಂದಿವೆ. ಚಿಕ್ಕಬಳ್ಳಾಪುರದಲ್ಲಿ ಪ್ರಚಾರ ಆರಂಭಿಸಿದ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದರು.
ಕಾಂಗ್ರೆಸ್ಗೆ ಮತ ನೀಡಿದ್ದಕ್ಕೆ ಕಳೆದ 10 ತಿಂಗಳಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲೂ ಜನರು ಕಾಂಗ್ರೆಸ್ಗೆ ಮತ ಹಾಕಿದರೆ ಡಬಲ್ ಕಷ್ಟ ಅನುಭವಿಸಬೇಕಾಗುತ್ತದೆ. ಉತ್ತಮ ಜೀವನಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮತ ನೀಡಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಅಭ್ಯರ್ಥಿ ಡಾ.ಕೆ.ಸುಧಾಕರ್ ಮನವಿ ಮಾಡಿದರು.

ಇಂದು ಚಿಕ್ಕಬಳ್ಳಾಪುರದ ಹಳೇಹಳ್ಳಿ, ಶ್ಯಾಂಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಚುನಾವಣಾ ಪ್ರಚಾರದ ವೇಳೆ ಕೆ.ಸುಧಾಕರ್ ಅವರು ಮಾತನಾಡಿದರು. ದೇಶ ರಕ್ಷಣೆಯನ್ನು ಮಾಡಲು ನರೇಂದ್ರ ಮೋದಿಯವರಿಗೆ ಮಾತ್ರ ಸಾಧ್ಯ. ಕಾಶ್ಮೀರದಲ್ಲಿ ಮೊದಲು ಕಲ್ಲು ಬಿಸಾಡುವಂತೆ ಬಾಂಬ್ ಬಿಸಾಡುತ್ತಿದ್ದರು. ಆದರೆ ಕಳೆದ ಹತ್ತು ವರ್ಷಗಳಲ್ಲಿ ಬಾಂಬ್ನ ಶಬ್ದ ಕೂಡ ಕೇಳಿಲ್ಲ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಬೆಂಗಳೂರಿನಲ್ಲಿ ಬಾಂಬ್ ಸಿಡಿದಿದೆ. ಕಾಂಗ್ರೆಸ್ನ ರಾಜ್ಯಸಭಾ ಸದಸ್ಯರು ಆಯ್ಕೆಯಾದಾಗ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗಿದ್ದಾರೆ. ಹೀಗಾದರೆ ಮುಂದೆ ಏನಾಗುತ್ತದೆ ಎಂದು ಜನರು ಚಿಂತಿಸಬೇಕು ಎಂದರು.
ಪ್ರಧಾನಿ ನರೇಂದ್ರ ಮೋದಿ ಬಡವರ ಪರವಾಗಿ ಚಿಂತಿಸುತ್ತಾರೆ. ಮಹಿಳೆಯರ ಆರೋಗ್ಯ ಹಾಳಾಗುವುದನ್ನು ನೋಡಿ 10 ಕೋಟಿ ಅಡುಗೆ ಅನಿಲ ಸಂಪರ್ಕ ನೀಡಿದ್ದಾರೆ. ಮಹಿಳೆಯರು ದೂರದ ಕೆರೆ, ಬಾವಿಯಿಂದ ನೀರು ತರಬಾರದೆಂದು ಜಲಜೀವನ್ ಮಿಷನ್ನಡಿ ಕೊಳಾಯಿ ನೀರು ನೀಡಿದ್ದಾರೆ.

ಕಿಸಾನ್ ಸಮ್ಮಾನ್ನಡಿ ರೈತರಿಗೆ ಹಣ ನೀಡಿದ್ದಾರೆ. ಆದರೆ ಅದನ್ನು ರಾಜ್ಯ ಸರ್ಕಾರ ಕಿತ್ತುಕೊಂಡಿದೆ. ಒಂದು ಕಡೆ ತಗೊಂಡು ಮತ್ತೊಂದು ಕಡೆ ಮರಳಿ ಪಡೆಯುವುದೇ ಕಾಂಗ್ರೆಸ್ನ ಗ್ಯಾರಂಟಿ ಎನಿಸಿಕೊಂಡಿದೆ ಎಂದು ದೂರಿದರು.
ಕಾಂಗ್ರೆಸ್ ನಾಯಕರು ವಿದ್ಯುತ್ ಉಚಿತವೆಂದು ಹೇಳಿ ಈಗ ದರ ಹೆಚ್ಚಳ ಮಾಡಿದ್ದಾರೆ. ಇದರಿಂದಾಗಿ ಪ್ರತಿ ಕುಟುಂಬಗಳ ಖರ್ಚು ಅಧಿಕವಾಗಿದೆ. 10 ಕೆಜಿ ಅಕ್ಕಿ ಕೊಡುತ್ತೇವೆಂದು ಹೇಳಿ ಏನೂ ಕೊಟ್ಟಿಲ್ಲ. ಈಗಲೂ 5 ಕೆಜಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ.
ಪ್ರಧಾನಿ ಮೋದಿ ಅಕ್ಕಿ ಕೊಡುವ ಬಗ್ಗೆ ಹೇಳಿಕೊಳ್ಳದಿದ್ದರೂ, ಕಾಂಗ್ರೆಸ್ ನಾಯಕರು ಮಾತ್ರ ಅನ್ನಭಾಗ್ಯವನ್ನು ತಾವೇ ಕೊಟ್ಟಿದ್ದು ಎಂದು ಎಲ್ಲ ಕಡೆ ಹೇಳುತ್ತಿದ್ದಾರೆ. ಬಿಜೆಪಿ ಎಂದಿಗೂ ಸುಳ್ಳು ಗ್ಯಾರಂಟಿ ನೀಡುವುದಿಲ್ಲ. ಅದರ ಬದಲು ಬದುಕು ಕಟ್ಟಿಕೊಡುವ ಯೋಜನೆಗಳನ್ನು ನೀಡುತ್ತದೆ ಎಂದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications