ನಂದಿ ಬೆಟ್ಟದ ತಪ್ಪಲಲ್ಲಿ ಓಟ, ಯೋಗ ಮತ್ತು ಸಂಗೀತಗಳ ಸಂಗಮ
ಚಿಕ್ಕಬಳ್ಳಾಪುರ, ಜೂನ್ 09: ಬೆಂಗಳೂರು ಮೂಲದ ನಮ್ಮ ನಿಮ್ಮ ಸೈಕಲ್ ಫೌಂಡೇಶನ್ ಸಮುದಾಯಗಳೊಂದಿಗೆ ಸುಸ್ಥಿರ ಬದುಕನ್ನು ಕಟ್ಟುವ ನಿಟ್ಟಿನಲ್ಲಿ ಅನೇಕ ಪ್ರಯೋಗಗಳನ್ನು ಮಾಡುತ್ತಿರುವ ಸಂಸ್ಥೆ ಇಂದು ಭಾರತೀಯ ಪುರಾತತ್ವ ಇಲಾಖೆಯ, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಮತ್ತು ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಸಂಸ್ಥೆಯ ಸಹಭಾಗಿತ್ತ್ವದಲ್ಲಿ ಯೋಗಿ ರನ್ ಯೆಂಬ ಓಟ, ಯೋಗ ಮತ್ತು ಸಂಗೀತಗಳ ಸಂಗಮದ ವಿಶೇಷ ಕಾರ್ಯಕ್ರಮವನ್ನು ಹಮ್ಮಿ ಕೊಂಡಿತ್ತು.
ಮೊದಲ ಹಂತದಲ್ಲಿ ಹಮ್ಮಿಕೊಂಡಿದ್ದ ಯೋಗಿ ರನ್ ಕಾರ್ಯಕ್ರಮದಲ್ಲಿ ಬೆಂಗಳೂರು ಸೇರಿದಂತೆ ದೇಶ ವಿದೇಶಗಳಿಂದ 700ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.
"ಯೋಗಿ ರನ್ ಒಂದು ವಿಶೇಷ ಕಾರ್ಯಕ್ರಮ, ಇಲ್ಲಿ ಯೋಗದೊಂದಿಗೆ ಕ್ರೀಡೆಯ ಸಂಯೋಗವಿದೆ. ಸಂಸ್ಕೃತಿಯೊಡನೆ ಆಧುನಿಕತೆಯ ಸಂಗಮವಿದೆ. ನಾದ ಮತ್ತು ತಾಳದೊಂದಿಗೆ ಓಟದ ಸಮ್ಮಿಲನವಿದೆ. ಪ್ರವಾಸೋದ್ಯಮದೊಂದಿಗೆ ಜವಬ್ದಾರಿಯ ಹೆಜ್ಜೆಯಿಡುವ ದೃಷ್ಠಿಯಿದೆ. ಇದು ನಮ್ಮ ನಾಡಿನ ಭವ್ಯತೆ ಮತ್ತು ದಿವ್ಯತೆಯನ್ನು ಜನರ ಹೃದಯ ತಲುಪಿಸಲು ಕೈಕೊಂಡಿರುವ ಕಾರ್ಯಕ್ರಮ. "ಎಂದು ಮುರಳಿ ಎಚ್ . ಆರ್. ನಮ್ಮ ನಿಮ್ಮ ಸೈಕಲ್ ಫೌಂಡೇಶನ್ ಮುಖ್ಯ ನಿರ್ದೇಶಕರು ತಿಳಿಸಿದರು.

ಸಂಗೀತ ಮತ್ತು ಓಟದ ಸಂಯೋಜನೆಯ ಪ್ರಯೋಗ
"ಕರ್ನಾಟಕ ಸಂಗೀತದ ವಿವಿಧ ರಾಗಗಳು ದಿನದ ವಿಶೇಷ ಸಮಯದಲ್ಲಿ ಕೇಳಿದರೆ ಆರೋಗ್ಯ ಸುಧಾರಿಸುವುದಲ್ಲದೆ ಮನಸ್ಸಿಗೆ ಹರ್ಷೋಲ್ಲಾಸ ವನ್ನು ಕೊಡುತ್ತದೆ ಎನ್ನುವುದು ಸಂಗಶೋಧನೆಯಿಂದ ಧೃಡವಾಗಿದೆ, ಈ ನಿಟ್ಟಿನಲ್ಲಿ ಸಂಗೀತ ಮತ್ತು ಕ್ರೀಡೆಯನ್ನು ಸಂಯೋಜಿಸುವ ನವೀನ ಸಂಶೋಧನೆಯನ್ನು 'ರಾಗ ಲ್ಯಾಬ್ಸ್' ಮಾಡಲಿದೆ. ಯೋಗಿ ರನ್ ಮೂಲಕ ಸಂಗೀತ ಮತ್ತು ಓಟದ ಸಂಯೋಜನೆಯ ಪ್ರಯೋಗ ಮೊದಲ ಬಾರಿಗೆ ನಡೆಸಲಾಗಿದೆ." ಎಂದು ಐಜಿಎನ್ ಸಿಎ ಎಸ್ ಆರ್ ಸಿ ಕಾರ್ಯನಿರ್ವಾಹಕ ನಿರ್ದೇಶಕಿ ಡಾ.ದೀಪ್ತಿ ನವರತ್ನ ರವರು ತಿಳಿಸಿದರು.

ನಮ್ಮ ನಿಮ್ಮ ಸೈಕಲ್ ಫೌಂಡೇಶನ್ ಜೊತೆಗೆ ಹೆಜ್ಜೆ
"ಕಲಾತ್ಮಕ, ವಾಸ್ತು ಶಿಲ್ಪ, ತಾಂತ್ರಿಕ ನೈಪುಣ್ಯತೆ, ಪುರಾತನ ನಾಗರಿಕತೆಯ ಅಂಶಗಳನ್ನು ಹೊಂದಿರುವ ಸ್ಥಳಗಳಲ್ಲಿ ಯೋಗ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಚರಿಸುವುದರಿಂದ ರಾಜ್ಯದ ಪ್ರವಾಸೋದ್ಯಮ ತಾಣಗಳ ಆರೋಗ್ಯಕರ ಬೆಳವಣಿಗೆಗೆ ಅನುವು ಮಾಡಿಕೊಡುತ್ತದೆ. ಕರ್ನಾಟಕ ಪ್ರವಾಸೋದ್ಯಮ ಇಲಾಖೆ ನಾಡಿನ ಸುಂದರ ಪರಿಸರದ ಜೊತೆಗೆ ಸಾಂಸ್ಕೃತಿಕ ಪ್ರವಾಸೋದ್ಯಮಕ್ಕೂ ಉತ್ತೇಜನ ಕೊಡುವ ನಿಟ್ಟಿನಲ್ಲಿ ನಮ್ಮ ನಿಮ್ಮ ಸೈಕಲ್ ಫೌಂಡೇಶನ್ ಜೊತೆಗೆ ಹೆಜ್ಜೆಯನ್ನು ಇಟ್ಟಿದೆ" ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಪುಷ್ಕರ್ ತಿಳಿಸಿದರು.

3 ವಿಭಾಗಗಳಲ್ಲಿ ನಡೆದ ಯೋಗಿ ರನ್ ಓಟದಲ್ಲಿ ವಿಜೇತರು
3 ವಿಭಾಗಗಳಲ್ಲಿ ನಡೆದ ಯೋಗಿ ರನ್ ಓಟದಲ್ಲಿ ವಿಜೇತವಾದವರ ವಿವರ
Men Open Category:
21K Winner - Mikiyas Yemata Lemlenu from Ethiopia - Time: 1:28:13
12K Winner - Amanuel Abdu from Ethiopia - Time: 0:58:25
5K Winner - Chandan Kumar from Bengaluru - Time: 0:22:16
Women Open Category:
21K Winner - Upashana from Bengaluru- Time: 2:34:41
12K Winner - Zinashwark Yenew from Ethiopia - Time: 1:13:46
5K Winner - Amisha from Bengaluru - Time: 0:36:21
**

ವಿಜೇತರಿಗೆ ನಗದು ಬಹುಮಾನ ಜತೆಗೆ ಪದಕ ಮತ್ತು ಪ್ರಮಾಣಪತ್ರ
ಭೋಗ ನಂದೀಶ್ವರ ದೇವಸ್ಥಾನದಲ್ಲಿ ಪ್ರಾರಂಭವಾದ ಓಟ ಅಲ್ಲಿಂದ ಸುಲ್ತಾನಪೇಟೆಯ ಮುಂಬಾಗ ಹಾದು , ಓಟಗಾರರು ಮೆಟ್ಟಿಲು ದಾರಿಯಿಂದ ನಂದಿ ಬೆಟ್ಟವನ್ನು ಹತ್ತಿ ಮತ್ತೆ ಬೆಟ್ಟವನ್ನು ಇಳಿದು ಭೋಗ ನಂದೀಶ್ವರದಲ್ಲಿ ಓಟ ಮುಗಿಸಿದರು. ವಿಜೇತರಿಗೆ ನಗದು ಬಹುಮಾನ ಜತೆಗೆ ಪದಕ ಮತ್ತು ಪ್ರಮಾಣಪತ್ರ ನೀಡಲಾಯಿತು. ಶೈಕ್ಷಣಿಕ ಸಂಸ್ಥೆಗಳು, ಕಂಪನಿಗಳ ಓಟದ ಕ್ಲಬ್, ನಗರದ ವಿವಿಧ ಓಟದ ಕ್ಲಬ್ಗಳಿಗೆ ರಿಯಾಯಿತಿಯನ್ನು ಕೊಡಲಾಗಿತ್ತು.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications