Cycling from Chikkaballapur to Ayodhya: 29 ದಿನಗಳ ಬಳಿಕ ಅಯೋಧ್ಯೆಗೆ ತಲುಪಿದ ಯುವ ರಾಮಭಕ್ತ
ಚಿಕ್ಕಬಳ್ಳಾಪುರ ಜೂನ್ 14: ಅಯೋಧ್ಯೆಯ ಶ್ರೀರಾಮನ ದರ್ಶನ ಪಡೆಯಲು ಚಿಕ್ಕಬಳ್ಳಾಪುರದ 22 ವರ್ಷದ ಯುವ ರಾಮಭಕ್ತನೊಬ್ಬ ಬರೋಬ್ಬರಿ 29 ದಿನಗಳ ಬಳಿಕ ಅಯೋಧ್ಯೆಗೆ ತಲುಪಿದ್ದಾನೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ರಾಯನಕಲ್ಲು ಗ್ರಾಮದ ನರಸಿಂಹರೆಡ್ಡಿ, ಜಯಲಕ್ಷ್ಮಮ್ಮ ಪುತ್ರ ಬಾನುಪ್ರಸಾದ್ರೆಡ್ಡಿ (22) ಎಂಬ ಯುವಕ ಮೇ 16 ರಂದು ಚಿಕ್ಕಬಳ್ಳಾಪುರದಿಂದ ಅಯೋಧ್ಯೆಗೆ ಸೈಕಲ್ ಮೂಲಕ ಪ್ರಯಾಣ ಬೆಳೆಸಿದ್ದನು.

ಅಯೋಧ್ಯೆಗೆ ತೆರಳುವ ಮುನ್ನ ಬಾನುಪ್ರಸಾದ್ ಮಂಚೇನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸ್ನೇಹಿತರು, ಬಂಧುಗಳು ಶುಭ ಹಾರೈಕೆಯೊಂದಿಗೆ ಅಯೋಧ್ಯೆಗೆ ತಮ್ಮ ಸೈಕಲ್ ಯಾತ್ರೆ ಕೈಗೊಂಡಿದ್ದನು. ಜೂನ್ 13 (ಗುರುವಾರ) ಬಾನುಪ್ರಸಾದ್ ಅಯೋಧ್ಯೆಗೆ ತಲುಪಿದ್ದಾನೆ.
ಎಲ್ಲರೂ ಜೈ ಶ್ರೀರಾಮ್ ಅನ್ನಿ. ನಾನು 29 ದಿನಗಳ ಬಳಿಕ ಅಯೋಧ್ಯೆಗೆ ತಲುಪಿದ್ದೇನೆ. ಇಲ್ಲಿಗೆ ಸುಮಾರು 2000 ಸಾವಿರ ಕಿ.ಮೀ ಆಗಿದೆ. ನನ್ನ ಸೈಕಲ್ ಜರ್ನಿ ಕಂಪ್ಲಿಟ್ ಆಗಿದೆ. ನಾನು ಇಟ್ಟ ಗುರಿಯನ್ನು ಸಾಧಿಸಿದ್ದೇನೆ. ಇದಕ್ಕೆ ತುಂಬಾ ಖುಷಿಯಾಗುತ್ತಿದೆ' ಎಂದು ಗುರುವಾರ ಅಯೋಧ್ಯೆಗೆ ತಲುಪಿರುವ ಖುಷಿಯಲ್ಲಿ ಬಾನುಪ್ರಸಾದ್ ತಮ್ಮ ಚಿಕ್ಕಬಳ್ಳಾಪುರ-ಅಯೋಧ್ಯೆ ಸೈಕಲ್ ಪ್ರಯಾಣದ ಅನುಭವದ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಈತನ ಸಾಧನೆಗೆ ಚಿಕ್ಕಬಳ್ಳಾಪುರದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸೈಕಲ್ ಸವಾರಿಗೂ ಮುನ್ನ ಪೂಜೆ
ಅಯೋಧ್ಯೆಗೆ ತೆರಳುವ ಮುನ್ನ ಮಂಚೇನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಾನುಪ್ರಸಾದ್, ಈ ಸಂದರ್ಭದಲ್ಲಿ ನೆರೆದಿದ್ದ ಹಿತೈಷಿಗಳು, ಸ್ನೇಹಿತರು, ಬಂಧುಗಳು ಶುಭ ಹಾರೈಕೆಗಳೊಂದಿಗೆ ಅಯೋಧ್ಯೆಗೆ ತಮ್ಮ ಸೈಕಲ್ ಯಾತ್ರೆಯನ್ನು ಆರಂಭಿಸಿದರು.
ಈ ವೇಳೆ ಮಾತನಾಡಿದ್ದ ಬಾನುಪ್ರಸಾದ್ರೆಡ್ಡಿ, ಅಯೋಧ್ಯೆಗೆ ಬೈಕ್, ರೈಲು ಸೇರಿದಂತೆ ಬೇರೆಬೇರೆ ರೀತಿಯಲ್ಲಿ ಸಾಕಷ್ಟು ಭಕ್ತರು ಪ್ರಯಾಣಿಸುತ್ತಾರೆ. ಆದರೆ ನನಗೆ ಸೈಕಲ್ ಮೂಲಕವೇ ಅಯೋಧ್ಯೆಗೆ ಹೋಗಲು ಇಷ್ಟ. ಇದನ್ನು ನಿರ್ಧರಿಸಿ ಇಂದು ಮಂಚೇನಹಳ್ಳಿಯ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸೈಕಲ್ ಮೂಲಕ ಅಯೋಧ್ಯೆಗೆ ಪ್ರಯಾಣ ಆರಂಭಿಸಿದ್ದೇನೆ ಎಂದು ತಿಳಿಸಿದರು.
ಪೊಲೀಸ್ ಆಗುವ ಇಚ್ಚೆ ಹೊಂದಿದ ರಾಮ ಭಕ್ತ
ನಾನು ಪೊಲೀಸ್ ಉದ್ಯೋಗ ಪಡೆಯಲು ಓದುತ್ತಿರುವೆ. ಉದ್ಯೋಗ ಸಿಗುವ ಮುನ್ನವೇ ಅಯೋಧ್ಯೆ ಸೇರಿದಂತೆ ದೇಶದ ವಿವಿಧೆಡೆ ಇರುವ ಪ್ರಸಿದ್ಧ ತಾಣಗಳನ್ನು ವೀಕ್ಷಿಸಬೇಕೆಂಬುದು ನನ್ನ ಬಯಕೆ. ಇದಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಲ್ಲಿ ಪ್ರಸಿದ್ಧ ತಾಣಗಳಿವೆ, ದೇವಾಲಯಗಳು ಇವೆ ಎಂಬುದನ್ನು ಈಗಾಗಲೇ ತಿಳಿದುಕೊಂಡಿರುವೆ ಎಂದು ಹೇಳಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications