Cycling from Chikkaballapur to Ayodhya: 29 ದಿನಗಳ ಬಳಿಕ ಅಯೋಧ್ಯೆಗೆ ತಲುಪಿದ ಯುವ ರಾಮಭಕ್ತ
ಚಿಕ್ಕಬಳ್ಳಾಪುರ ಜೂನ್ 14: ಅಯೋಧ್ಯೆಯ ಶ್ರೀರಾಮನ ದರ್ಶನ ಪಡೆಯಲು ಚಿಕ್ಕಬಳ್ಳಾಪುರದ 22 ವರ್ಷದ ಯುವ ರಾಮಭಕ್ತನೊಬ್ಬ ಬರೋಬ್ಬರಿ 29 ದಿನಗಳ ಬಳಿಕ ಅಯೋಧ್ಯೆಗೆ ತಲುಪಿದ್ದಾನೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ರಾಯನಕಲ್ಲು ಗ್ರಾಮದ ನರಸಿಂಹರೆಡ್ಡಿ, ಜಯಲಕ್ಷ್ಮಮ್ಮ ಪುತ್ರ ಬಾನುಪ್ರಸಾದ್ರೆಡ್ಡಿ (22) ಎಂಬ ಯುವಕ ಮೇ 16 ರಂದು ಚಿಕ್ಕಬಳ್ಳಾಪುರದಿಂದ ಅಯೋಧ್ಯೆಗೆ ಸೈಕಲ್ ಮೂಲಕ ಪ್ರಯಾಣ ಬೆಳೆಸಿದ್ದನು.

ಅಯೋಧ್ಯೆಗೆ ತೆರಳುವ ಮುನ್ನ ಬಾನುಪ್ರಸಾದ್ ಮಂಚೇನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸ್ನೇಹಿತರು, ಬಂಧುಗಳು ಶುಭ ಹಾರೈಕೆಯೊಂದಿಗೆ ಅಯೋಧ್ಯೆಗೆ ತಮ್ಮ ಸೈಕಲ್ ಯಾತ್ರೆ ಕೈಗೊಂಡಿದ್ದನು. ಜೂನ್ 13 (ಗುರುವಾರ) ಬಾನುಪ್ರಸಾದ್ ಅಯೋಧ್ಯೆಗೆ ತಲುಪಿದ್ದಾನೆ.
ಎಲ್ಲರೂ ಜೈ ಶ್ರೀರಾಮ್ ಅನ್ನಿ. ನಾನು 29 ದಿನಗಳ ಬಳಿಕ ಅಯೋಧ್ಯೆಗೆ ತಲುಪಿದ್ದೇನೆ. ಇಲ್ಲಿಗೆ ಸುಮಾರು 2000 ಸಾವಿರ ಕಿ.ಮೀ ಆಗಿದೆ. ನನ್ನ ಸೈಕಲ್ ಜರ್ನಿ ಕಂಪ್ಲಿಟ್ ಆಗಿದೆ. ನಾನು ಇಟ್ಟ ಗುರಿಯನ್ನು ಸಾಧಿಸಿದ್ದೇನೆ. ಇದಕ್ಕೆ ತುಂಬಾ ಖುಷಿಯಾಗುತ್ತಿದೆ' ಎಂದು ಗುರುವಾರ ಅಯೋಧ್ಯೆಗೆ ತಲುಪಿರುವ ಖುಷಿಯಲ್ಲಿ ಬಾನುಪ್ರಸಾದ್ ತಮ್ಮ ಚಿಕ್ಕಬಳ್ಳಾಪುರ-ಅಯೋಧ್ಯೆ ಸೈಕಲ್ ಪ್ರಯಾಣದ ಅನುಭವದ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಈತನ ಸಾಧನೆಗೆ ಚಿಕ್ಕಬಳ್ಳಾಪುರದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸೈಕಲ್ ಸವಾರಿಗೂ ಮುನ್ನ ಪೂಜೆ
ಅಯೋಧ್ಯೆಗೆ ತೆರಳುವ ಮುನ್ನ ಮಂಚೇನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಾನುಪ್ರಸಾದ್, ಈ ಸಂದರ್ಭದಲ್ಲಿ ನೆರೆದಿದ್ದ ಹಿತೈಷಿಗಳು, ಸ್ನೇಹಿತರು, ಬಂಧುಗಳು ಶುಭ ಹಾರೈಕೆಗಳೊಂದಿಗೆ ಅಯೋಧ್ಯೆಗೆ ತಮ್ಮ ಸೈಕಲ್ ಯಾತ್ರೆಯನ್ನು ಆರಂಭಿಸಿದರು.
ಈ ವೇಳೆ ಮಾತನಾಡಿದ್ದ ಬಾನುಪ್ರಸಾದ್ರೆಡ್ಡಿ, ಅಯೋಧ್ಯೆಗೆ ಬೈಕ್, ರೈಲು ಸೇರಿದಂತೆ ಬೇರೆಬೇರೆ ರೀತಿಯಲ್ಲಿ ಸಾಕಷ್ಟು ಭಕ್ತರು ಪ್ರಯಾಣಿಸುತ್ತಾರೆ. ಆದರೆ ನನಗೆ ಸೈಕಲ್ ಮೂಲಕವೇ ಅಯೋಧ್ಯೆಗೆ ಹೋಗಲು ಇಷ್ಟ. ಇದನ್ನು ನಿರ್ಧರಿಸಿ ಇಂದು ಮಂಚೇನಹಳ್ಳಿಯ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸೈಕಲ್ ಮೂಲಕ ಅಯೋಧ್ಯೆಗೆ ಪ್ರಯಾಣ ಆರಂಭಿಸಿದ್ದೇನೆ ಎಂದು ತಿಳಿಸಿದರು.
ಪೊಲೀಸ್ ಆಗುವ ಇಚ್ಚೆ ಹೊಂದಿದ ರಾಮ ಭಕ್ತ
ನಾನು ಪೊಲೀಸ್ ಉದ್ಯೋಗ ಪಡೆಯಲು ಓದುತ್ತಿರುವೆ. ಉದ್ಯೋಗ ಸಿಗುವ ಮುನ್ನವೇ ಅಯೋಧ್ಯೆ ಸೇರಿದಂತೆ ದೇಶದ ವಿವಿಧೆಡೆ ಇರುವ ಪ್ರಸಿದ್ಧ ತಾಣಗಳನ್ನು ವೀಕ್ಷಿಸಬೇಕೆಂಬುದು ನನ್ನ ಬಯಕೆ. ಇದಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಲ್ಲಿ ಪ್ರಸಿದ್ಧ ತಾಣಗಳಿವೆ, ದೇವಾಲಯಗಳು ಇವೆ ಎಂಬುದನ್ನು ಈಗಾಗಲೇ ತಿಳಿದುಕೊಂಡಿರುವೆ ಎಂದು ಹೇಳಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications