ಚಿಕ್ಕಮಗಳೂರು: ಒಂದೇ ವರ್ಷದಲ್ಲಿ 21 ಕನ್ನಡ ಶಾಲೆಗಳು ಬಂದ್, ಕಾರಣ ಏನು ಗೊತ್ತಾ?, ಇಲ್ಲಿದೆ ವಿವರ
ಚಿಕ್ಕಮಗಳೂರು, ಅಕ್ಟೋಬರ್, 31:2023ರ ಜನವರಿಯಿಂದ ಇಲ್ಲಿವರೆಗೂ ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ 21 ಕನ್ನಡ ಶಾಲೆಗಳು ಬಂದ್ ಆಗಿವೆ. ಸರ್ಕಾರ ಮಧ್ಯಾಹ್ನ ಬಿಸಿಯೂಟ, ಮೊಟ್ಟೆ-ಹಾಲು, ಶೂ-ಸಾಕ್ಸ್ ಅಂತೆಲ್ಲಾ ಹತ್ತಾರು ಯೋಜನೆಗಳನ್ನು ಜಾರಿಗೆ ತಂದರೂ ಹೆತ್ತವರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವುದಕ್ಕೆ ಮೂಗು ಮುರಿಯುತ್ತಿದ್ದಾರೆ. ಇದರಿಂದ ಕಾಫಿನಾಡಲ್ಲಿ ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳಿಗೆ ಬೀಗ ಬೀಳುತ್ತಿರುವ ಪ್ರಮಾಣ ಕೂಡ ಹೆಚ್ಚಿದೆ.
ಸರ್ಕಾರ ಖಾಸಗಿ ಶಾಲೆಗಳಿಗೆ ಬೇಕಾಬಿಟ್ಟಿ ಅನುಮತಿ ನೀಡುತ್ತಿರುವುದರಿಂದಲೇ ಸರ್ಕಾರಿ ಶಾಲೆಗಳಿಗೆ ಈ ಸ್ಥಿತಿ ಬಂದಿದೆ ಅಂತಾ ಸ್ಥಳಿಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜನರಿಗೆ ಸರ್ಕಾರದ ಎಲ್ಲಾ ಸೌಲಭ್ಯ ಬೇಕು. ಅಕ್ಕಿ, ಬಸ್ಸು, ಕರೆಂಟ್, ದುಡ್ಡು ಎಲ್ಲಾ ಬೇಕು. ಆದರೆ, ಸರ್ಕಾರಿ ಶಾಲೆ ಮಾತ್ರ ಬೇಡ. ಖಾಸಗಿ ಹಾಗೂ ಇಂಗ್ಲೀಷ್ ಮೀಡಿಯಂನಲ್ಲಿ ಮಕ್ಕಳು ಓದುತ್ತಿದ್ದಾರೆ ಅಂದ್ರೆ ಹೆತ್ತವರಿಗೆ ಡಿಗ್ನಿಟಿ. ಪೋಷಕರು ತಮ್ಮ ಡಿಗ್ನಿಟಿಗಾಗಿ ಸರ್ಕಾರಿ ಶಾಲೆಗಳಿಗೆ ಬೀಗ ಹಾಕಿಸ್ತಿದ್ದಾರೆ ಎಂದು ಸ್ಥಳೀಯರು ಪೋಷಕರು ವಿರುದ್ಧ ಆಕ್ರೋಶ ಹೊರಹಾಕ್ತಿದ್ದಾರೆ.

ಸರ್ಕಾರ ಸರ್ಕಾರಿ ಶಾಲೆಗಳನ್ನು ಉಳಿಸುವುದಕ್ಕೆ ನಾನಾ ಯೋಜನೆಗಳನ್ನು ಜಾರಿಗೆ ತಂದು ಪ್ರಯತ್ನಪಟ್ಟರೂ ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುತ್ತಿಲ್ಲ. ಜೊತೆಗೆ ಸರ್ಕಾರ ಖಾಸಗಿ ಶಾಲೆಗಳಿಗೆ ಬೇಕಾಬಿಟ್ಟಿ ಅನುಮತಿ ನೀಡುತ್ತಿರುವುದರಿಂದ ಸರ್ಕಾರಿ ಶಾಲೆಗಳು ಅವನತಿಯ ಅಂಚಿನಲ್ಲಿವೆ. ಕಳೆದ ಐದಾರು ವರ್ಷದಲ್ಲಿ 50ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಶಾಶ್ವತ ಬೀಗ ಬಿದ್ದಿದೆ.
ನೂರಾರು ಮಕ್ಕಳಿಗೆ ವಿದ್ಯಾದಾನ ಮಾಡಿದ ಸರ್ಕಾರಿ ಶಾಲೆಗಳಿಂದು ಲೂಟಿಯೊಡೆದ ಕೋಟೆಯಂತಾಗಿದೆ. ಸರ್ಕಾರ ಕನ್ನಡ ಶಾಲೆಗಳಿಗೆ ನಾನಾ ಸೌಲಭ್ಯ ನೀಡುತ್ತಿದೆ. ಆದರೆ ಅದರ ಬೆನ್ನಲ್ಲೇ ಖಾಸಗಿ ಶಾಲೆಗಳಿಗೆ ಎಗ್ಗಿಲ್ಲದೆ ಅನುಮತಿ ನೀಡುತ್ತಿರುವುದರಿಂದ ಪೋಷಕರಿಗೆ ಇಂಗ್ಲಿಷ್ ಮೇಲಿರುವ ವ್ಯಾಮೋಹದಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸ್ತಿದ್ದಾರೆ. ಈ ಮಧ್ಯೆ ವಸತಿ ಶಾಲೆಗಳ ಆರಂಭ ಕೂಡ ಸರ್ಕಾರಿ ಶಾಲೆಗೆ ಮರಣಶಾಸನ ಬರೆದಿದೆ ಎಂದು ಡಿಡಿಪಿಐ ರಂಗನಾಥ ಸ್ವಾಮಿ ಹೇಳಿದರು.
ಚಿಕ್ಕಮಗಳೂರು ಜಿಲ್ಲೆ 21 ಸರ್ಕಾರಿ ಶಾಲೆ ಬಂದ್
ಚಿಕ್ಕಮಗಳೂರು ತಾಲೂಕು- 5
ಕಡೂರು - 4
ತರೀಕೆರೆ - 2
ಮೂಡಿಗೆರೆ - 2
ಎನ್.ಆರ್.ಪುರ - 2
ಕೊಪ್ಪ - 2
ಶೃಂಗೇರಿ - 4
ಒಟ್ಟಾರೆ, ಒಂದೆಡೆ ಸರ್ಕಾರಿ ಶಾಲೆಗೆ ವಿವಿಧ ಯೋಜನೆಗಳನ್ನು ಜಾರಿಗೆ ತರುವುದು, ಮತ್ತೊಂದೆಡೆ ಖಾಸಗಿ ಶಾಲೆಗಳಿಗೆ ಅನುಮತಿ ನೀಡೋದು. ಸರ್ಕಾರಿ ಶಾಲೆ ಹಾಗೂ ಖಾಸಗಿ ಶಾಲೆಗಳ ನಡುವೆ ಕಣ್ಣಾಮುಚ್ಚಾಲೆ ಆಟವಾಡ್ತಿರೋ ಸರ್ಕಾರಗಳ ನಡೆಯಿಂದಲೇ ಸರ್ಕಾರಿ ಶಾಲೆಗಳು ಬೀಗ ಕಾಣುತ್ತಿವೆಯೋ ಎಂದು ಸಾರ್ವಜನಿಕರಿಗೆ ಸರ್ಕಾರದ ಮೇಲೆ ಅನುಮಾನ ಮೂಡುತ್ತಿದೆ. ಇನ್ನಾದರೂ ಸರ್ಕಾರ, ಸರ್ಕಾರಿ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಪ್ರಮಾಣಿಕ ಪ್ರಯತ್ನ ಮಾಡುತ್ತಾ ಕಾದುನೋಡಬೇಕಿದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications