ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರು: ಮೂರು ದಿನಗಳಿಂದ ಕಾಫಿ ತೋಟದಲ್ಲಿ ಬೀಡುಬಿಟ್ಟ ಕಾಡಾನೆ ಹಿಂಡು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಅಕ್ಟೋಬರ್ 17: ಕಳೆದ ಮೂರು ದಿನಗಳಿಂದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಳೆಮೂಡಿಗೆರೆಯ ಕಾಫಿ ತೋಟವೊಂದರಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು ಕಾಫಿ ತೋಟವನ್ನು ಸಂಪೂರ್ಣ ನಾಶ ಮಾಡಿವೆ. ಒಂದಲ್ಲಾ, ಎರಡಲ್ಲ, ಬರೋಬ್ಬರಿ 23 ಕಾಡಾನೆಗಳು ತೋಟಕ್ಕೆ ನುಗ್ಗಿ ದಾಂಧಲೆಯನ್ನೇ ಸೃಷ್ಟಿಸಿವೆ.

ಹಳಸೆ ಕೃಷ್ಣೇಗೌಡ ಎಂಬುವರ ಕಾಫಿತೋಟದಲ್ಲಿ ಕಾಡಾನೆಗಳು ಮೊಕ್ಕಾಂ ಹೂಡಿವೆ. ಹಿಂಡು ಹಿಂಡಾಗಿ ಬಂದಿರುವ ಕಾಡಾನೆಗಳನ್ನು ಮರಳಿ ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಎಸಿಎಫ್, ಆರ್ಎಫ್ಒ ಸೇರಿದಂತೆ 30ಕ್ಕೂ ಹೆಚ್ಚು ಅರಣ್ಯ ಇಲಾಖೆಯ ಸಿಬ್ಬಂದಿ ಕಾಡಾನೆಗಳ ಚಲನವಲನ ಗಮನಿಸಿ, ಅವುಗಳನ್ನು ಮರಳಿ ಕಾಡಿಗಟ್ಟಲು ಪ್ರಯತ್ನಿಸುತ್ತಿದ್ದಾರೆ.

ಮತ್ತಿಗೋಡು ಆನೆ ಶಿಬಿರ: ಕಾಡಾನೆ ದಾಳಿಯಿಂದ ಸಾಕಾನೆ ಮೃತಮತ್ತಿಗೋಡು ಆನೆ ಶಿಬಿರ: ಕಾಡಾನೆ ದಾಳಿಯಿಂದ ಸಾಕಾನೆ ಮೃತ

ಕಾಡಾನೆಗಳ ಆರ್ಭಟಕ್ಕೆ ಕಾಫಿ, ಮೆಣಸು, ಅಡಿಕೆ, ಬಾಳೆ ಸೇರಿದಂತೆ ಇತರೆ ಬೆಳೆಗಳು ನಾಶವಾಗಿವೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯೆಸಲೂರು ಭಾಗದಿಂದ ಈ ಹಿಂಡು ಹಿಂಡು ಕಾಡಾನೆಗಳು ಮೂಡಿಗೆರೆ ಕಡೆ ಮುಖ ಮಾಡಿವೆ. ಹೀಗೆ ಬರುವ ಮಾರ್ಗ ಮಧ್ಯೆ ಮೂಡಿಗೆರೆ ತಾಲೂಕಿನ ಕೆಲ್ಲೂರು, ದುಂಡುಗ, ಹಳಸೆ, ಕುನ್ನಹಳ್ಳಿ, ಕೃಷ್ಣಾಪುರ ಸೇರಿದಂತೆ ಹತ್ತಾರು ಗ್ರಾಮಗಳ ಕಾಫಿತೋಟಗಳಲ್ಲಿ ಬೆಳೆ ನಾಶಗೊಳಿಸಿವೆ.

Chikkamagaluru: 23 Wild Elephants Destroyed Coffee Plants At Hale Mudigere

Recommended Video

Chris Morris ಇಂದು ತೆಗೆದಿದ್ದು 4 ದೊಡ್ಡ ವಿಕೆಟ್‌ಗಳನ್ನು | Oneindia Kannada

ಕಾಡಾನೆಗಳಿಂದ ಬೆಳೆಗಳು ನಾಶವಾಗಿರುವ ಚಿಂತೆ ಒಂದೆಡೆಯಾದರೆ, ಮತ್ತೊಂದೆಡೆ ಈ ಕಾಡಾನೆ ಹಿಂಡು ಏನು ಅನಾಹುತ ಮಾಡುತ್ತದೋ ಎಂಬ ಭೀತಿಯೂ ಮನೆ ಮಾಡಿದೆ.

English summary
More than 20 wild elephants destroyed coffee plantation at hale mudigere in chikkamagaluru district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X