ಚಿಕ್ಕಮಗಳೂರು: ಹರಿಹರಪುರ ಮಠದಲ್ಲಿ 27 ಅಡಿ ಎತ್ತರದ ಆಂಜನೇಯ ಮೂರ್ತಿ ಅನಾವರಣ
ಚಿಕ್ಕಮಗಳೂರು, ಮೇ 2: ಕಾಫಿನಾಡಿನಲ್ಲಿ ನೆಲೆ ನಿಂತಿರುವ 27 ಅಡಿ ಎತ್ತರಕ್ಕೆ ಕೈಮುಗಿದು, ಮಂಡಿಯೂರಿ ಕುಳಿತಿರುವ ಆಂಜನೇಯನ ನೋಡುವುದುಕ್ಕೆ ಎರಡು ಕಣ್ಣು ಸಾಲದು. ಈ ಆಂಜನೇಯ ನಿಂತಿರುವುದು ಐದು ಲಕ್ಷ ಪುಸ್ತಕಗಳ ಮೇಲೆ ಅನ್ನೋದು ಇನ್ನೂ ಗಮನಾರ್ಹವಾಗಿದೆ.
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರ ಮಠದ ಆವರಣದಲ್ಲಿ ವಿರಾಜಮಾನವಾಗಿ ನಿಂತಿದ್ದಾನೆ. ಎದ್ದು ಬರುವುದಕ್ಕೆ ಸಿದ್ಧನಾದಂತೆ ನಿಂತಿರುವ 27 ಅಡಿಯ ವಾಯುಪುತ್ರನನ್ನು ನೋಡುವುದೇ ಆನಂದ. ಈ ಆಂಜನೇಯ ಪಾದದಡಿ ಜೈ.. ಜೈ.. ಲಕ್ಷ್ಮಿನರಸಿಂಹ, ವಜ್ರ ನರಸಿಂಹ ಎಂದು ಬರೆದಿರುವ ನರಸಿಂಹನ ಮಂತ್ರದ ಐದು ಲಕ್ಷದ ಪುಸ್ತಕಗಳಿವೆ.

ದಕ್ಞಯಜ್ಞ ನಡೆಸಿ ಇಲ್ಲಿ ಲಕ್ಷ್ಮಿ ನರಸಿಂಹರ ದರ್ಶನ
ಅಗಸ್ತ್ಯ ಮಹರ್ಷಿಗಳು ದಕ್ಞಯಜ್ಞ ನಡೆಸಿ ಇಲ್ಲಿ ಲಕ್ಷ್ಮಿ ನರಸಿಂಹರ ದರ್ಶನ ಪಡೆದಿದ್ದರು. ಲಕ್ಷ್ಮಿ ನರಸಿಂಹ ಸಾಲಿಗ್ರಾಮ ಇಂದಿಗೂ ಅದೇ ಪರಂಪರೆಯಲ್ಲಿ ಪೂಜೆ ಆಗುತ್ತಿದೆ. ಶಂಕರ ಭಗವತ್ಪಾದರು ಇಲ್ಲಿ ಶ್ರೀಚಕ್ರ ಯಂತ್ರೋದ್ಧಾರ ಮಾಡಿ ಶಾರದಾ ಪರಮೇಶ್ವರಿಯನ್ನು ಪ್ರತಿಷ್ಠಾಪನೆ ಮಾಡುತ್ತಾರೆ. ಈ ಸ್ಥಳ ಐತಿಹಾಸಿಕ ಹಿನ್ನೆಲೆ ಒಳಗೊಂಡಿದೆ. ಇಂತಹ ಇತಿಹಾಸ ಪ್ರಸಿದ್ಧ ಸ್ಥಳದಲ್ಲಿ 27 ಅಡಿಯ ವಾಯುಪುತ್ರ ಐದು ಲಕ್ಷ ಪುಸ್ತಕಗಳ ಮೇಲೆ ನೆಲೆ ನಿಂತಿದ್ದಾನೆ.
ಮಠದಲ್ಲಿ ನಡೆದ ಕುಂಭಾಭಿಷೇಕ ನಿಮಿತ್ತ ಭಕ್ತರು ಬರೆದ ಕಳುಹಿಸಿದ ಐದು ಲಕ್ಷ ಪುಸ್ತಗಳನ್ನು ಈ ಮೂರ್ತಿಯ ಅಡಿ ಪ್ರತಿಷ್ಠಾಪಿಸಲಾಗಿದೆ. ಪಂಚದರ್ಬೆಗಳ ಮೇಲೆ ಅರಿಶಿನ, ಕುಂಕುಮ, ಗಂಧ, ವಿಭೂತಿ, ಬಿಲ್ವಪತ್ರೆ ಹಾಗೂ ತುಳಸಿ ಹಾಕಿ ಲೇಯರ್ ಮಾಡಿ ಐದು ಲಕ್ಷ ಪುಸ್ತಕಗಳನ್ನು ಜೋಡಿಸಲಾಗಿದೆ.

ಇಂಗ್ಲೀಷ್ ಬಿಟ್ಟು ಎಲ್ಲಾ ಭಾಷೆಯ ಪುಸ್ತಕ
ಹರಿಹರಪುಠ ಮಠದ ಸಚ್ಚಿದಾನಂದ ಶ್ರೀಗಳೇ ಐದು ಲಕ್ಷ ಪುಸ್ತಕಗಳನ್ನು ಜೋಡಿಸಿ ಇಟ್ಟಿದ್ದಾರೆ. ಕುಂಭಾಭಿಷೇಕದ ನಿಮಿತ್ತ ಮಠದಿಂದಲೇ ಇಂಗ್ಲೀಷ್ ಬಿಟ್ಟು ಎಲ್ಲಾ ಭಾಷೆಯಲ್ಲೂ ಪುಸ್ತಕಗಳನ್ನು ನೀಡಲಾಗಿತ್ತು. ಕನ್ನಡ, ಸಂಸ್ಕೃತ, ಹಿಂದಿ, ತಮಿಳು, ತೆಲುಗು, ಮರಾಠಿ, ಬೆಂಗಾಳಿ ಸೇರಿದಂತೆ ಎಲ್ಲಾ ಭಾಷೆಯಲ್ಲೂ ಪುಸ್ತಕಗಳನ್ನು ನೀಡಲಾಗಿತ್ತು.
ದೇಶದ ಎಲ್ಲಾ ರಾಜ್ಯದ ಭಕ್ತರು ಜೈ.. ಜೈ.. ಲಕ್ಷ್ಮಿ ನರಸಿಂಹ, ವಜ್ರ ನರಸಿಂಹ ಎಂದು ಬರೆದು ಕಳುಹಿಸಿದ್ದರು. ದೇಶವಷ್ಟೇ ಅಲ್ಲದೆ ಅಮೆರಿಕ, ರಷ್ಯಾ, ಇಂಗ್ಲೆಂಡ್, ಮಲೇಷ್ಯಾ, ದುಬೈ ಹಾಗೂ ಸೌದಿ ಅರೇಬಿಯಾದಿಂದಲೂ ಭಕ್ತರು ಪುಸ್ತಕವನ್ನು ಬರೆದು ಕಳುಹಿಸಿದ್ದಾರೆ.

ಒಂದೊಂದು ದೇವಾಲಯಗಳದ್ದು ಒಂದೊಂದು ಇತಿಹಾಸ
ಒಟ್ಟಾರೆ, ಈ ಮಣ್ಣಿನಲ್ಲಿ ಅಸಂಖ್ಯಾತ ದೇವಾಲಯಗಳಿವೆ. ಒಂದೊಂದು ದೇವಾಲಯಗಳದ್ದು ಒಂದೊಂದು ಇತಿಹಾಸ. ಒಂದೊಂದು ದೇವರದ್ದು ಒಂದೊಂದು ರೋಚಕತೆ. ಅಂತಹ ವಿಭಿನ್ನ ಕಥೆಗೆ ಈ ಆಂಜನೇಯನೂ ಸೇರಿಕೊಳ್ಳುತ್ತಾನೆ. ಹರಿಹರಪುರ ಮಠ ದೇವಸ್ಥಾನವಾದರೂ ಈ ದೇವಾಲಯದ ಆವರಣದಲ್ಲಿರುವ ಆಂಜನೇಯ ಪ್ರವಾಸಿ ಮೂರ್ತಿಯಾಗಿದ್ದಾನೆ. ಇಲ್ಲಿಗೆ ಬಂದ ಭಕ್ತರು ದೇವರ ಆಶೀರ್ವಾದ ಪಡೆದು ಈ ಪ್ರವಾಸಿ ಆಕರ್ಷಕ ಮೂರ್ತಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.

ಪ್ರವಾಸಿ ತಾಣವಾದ ಹರಿಹರಪುರ ಮಠ
ಕುಂಬಾಭೀಷೇಕ ನಡೆದ ನಂತರ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹರಿಹರಪುರ ಮಠ ಪ್ರವಾಸಿ ತಾಣ ಮಾರ್ಪಟ್ಟಿದೆ. 120 ಕೋಟಿ ರೂ. ವೆಚ್ಚ ಜೀರ್ಣೋದ್ಧಾರ ಮಾಡಲಾಗಿದೆ. ಲಕ್ಷ್ಮಿ ನರಸಿಂಹ, ಶಾರದೆ, ಶಂಕರಚಾರ್ಯರು ಒಂದೇ ದೇವಾಯಲದಲ್ಲಿ ನೆಲೆ ನಿಂತಿದ್ದಾರೆ. ಕಲ್ಲಿನಿಂದ ಕೆತ್ತಿರುವ ದೇವಾಲಯ ನೋಡಲು ಆಕರ್ಷಣೆಯಾಗಿದೆ. ಹೀಗಾಗಿ ಪ್ರವಾಸಿರಗರನ್ನು ಹರಿಹರಪುರ ಮಠ ತನ್ನತ್ತ ಸೆಳೆಯುತ್ತಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications