ಶನಿವಾರವೇ ಮಲೆನಾಡಲ್ಲಿ ಮಂಗಗಳ ಮಾರಣ ಹೋಮ: ಅಸಲಿಗೆ ಆಗಿದ್ದೇನು..?
ಚಿಕ್ಕಮಗಳೂರು, ಜೂನ್ 08: ಬಾಳೆ ಹಣ್ಣಿಗೆ ಜ್ಞಾನ ತಪ್ಪುವ ಔಷಧ ಹಾಕಿ ಮಂಗಗಳನ್ನು ದಾರುಣವಾಗಿ ಸಾಯಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ಆರ್ ಪುರ ತಾಲೂಕಿನ ದ್ಯಾವಣ ಗ್ರಾಮದಲ್ಲಿ ನಡೆದಿದೆ.
ದ್ಯಾವಣ ಗ್ರಾಮದಲ್ಲಿ ಸುಮಾರು 30 ಮಂಗಗಳನ್ನು ಸಾಯಿಸಿ ಎಸೆಯಲಾಗಿದೆ. ಮೂವತ್ತು ಮಂಗಗಳ ತಲೆಯಲ್ಲೂ ಒಂದೇ ರೀತಿ ಗಾಯ, ರಕ್ತ ಸುರಿದು ಮೃತಪಟ್ಟಿವೆ. ಮೂವತ್ತು ಮಂಗಗಳಿಗೆ ತಲೆಗೆ ಒಡೆಯಲಾಗಿದೆ. ಹತ್ಯೆಯಾದ ಮಂಗಗಳ ಪೈಕಿ 16 ಗಂಡು, 14 ಹೆಣ್ಣು, 4 ಮರಿ ಮಂಗಗಳು ಸೇರಿವೆ. ಮೊದಲಿಗೆ ತೋಟದ ಬಾಳೆಹಣ್ಣಿಗೆ ಪ್ರಜ್ಞೆ ತಪ್ಪುವ ಔಷಧ ಬೆರೆಸಿರುವ ಪಾಪಿಗಳು, ಬಾಳೆಹಣ್ಣು ತಿಂದ ಬಳಿಕ ಪ್ರಜ್ಞೆ ತಪ್ಪಿ ಬಿದ್ದ ಮಂಗಗಳ ತಲೆಗೆ ಬಲವಾಗಿ ಹೊಡೆದು ಕೊಂದು ರಸ್ತೆಗೆ ಎಸೆದು ಹೋಗಿದ್ದಾರೆ.

ತೋಟದ ಬೆಳೆ ನಾಶ ಮಾಡುತ್ತವೆ ಎಂದು ಹೀಗೆ ಕೊಂದಿರಬಹುದು ಎಂದು ಶಂಕಿಸಲಾಗಿದ್ದು, ಮನುಷ್ಯತ್ವ ಇಲ್ಲದೇ ಮಂಗಗಳ ಮಾರಣಹೋಮ ನಡೆಸಿದವರ ವಿರುದ್ಧ ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎನ್ಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆ ಬಳಿಕ ಸ್ಥಳಕ್ಕೆ ಡಿಎಫ್ಓ, ಆರ್ಎಫ್ಓ, ಪಿಎಸ್ಐ, ಪಶುಸಂಗೋಪನೆ, ಪಶುವೈದ್ಯರು, ಪಂಚಾಯತ್ನ, ಆಶಾ ಕಾರ್ಯಕರ್ತೆಯರು ಸೇರಿ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಮೂವರಿಗೆ ಗಂಭೀರ ಗಾಯ
ಚಿಕ್ಕಮಗಳೂರ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹ್ಯಾಂಡ್ ಪೋಸ್ಟ್ ನಲ್ಲಿ ನಡೆದಿದೆ. ಕೊಟ್ಟಿಗೆ ಹಾರದಿಂದ ಬರುತ್ತಿದ್ದ ಕಾರು ಹಾಗೂ ಮೂಡಿಗೆರೆ ಕಡೆಯಿಂದ ಬಂದ ಬೈಕ್ ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿದೆ. ಇನ್ನು ಗಾಯಾಳುಗಳನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications