Chikkamagaluru: ಚಿಕ್ಕಮಗಳೂರು ಚೆಕ್ಪೋಸ್ಟ್ನಲ್ಲಿ ಬರೋಬ್ಬರಿ 23 ಕೋಟಿ ರೂ ಮೌಲ್ಯದ ಚಿನ್ನಾಭರಣ ವಶ
ಚಿಕ್ಕಮಗಳೂರು, ಏಪ್ರಿಲ್ 20: ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವಾರು ಕಡೆಗಳಲ್ಲಿ ಚೆಕ್ಪೋಸ್ಟ್ ತೆರೆಯಲಾಗಿದ್ದು, ಪ್ರತಿಯೊಂದು ವಾಹನವನ್ನು ಕೂಡ ತಪಾಸಣೆ ನಡೆಸಲಾಗುತ್ತಿದೆ. ಈಗಾಗಲೇ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿ ಚೆಕ್ಪೋಸ್ಟ್ನಲ್ಲಿ ನಡೆದ ತಪಾಸಣೆ ವೇಳೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 47 ಕೆ.ಜಿ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಬುಧವಾರ ವರದಿಯಾಗಿದೆ.

ವಶಪಡಿಸಿಕೊಂಡಿರುವ ಚಿನ್ನಾಭರಣಗಳ ಮೌಲ್ಯದ 23 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದ್ದು, ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಈ ಚಿನ್ನಾಭರಣಗಳನ್ನು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದ್ದು, ಘಟನೆ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇದೇ ಚೆಕ್ಪೋಸ್ಟ್ನಲ್ಲಿ ಇತ್ತೀಚೆಗೆ ಸೂಕ್ತ ದಾಖಲೆ ಇಲ್ಲದ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಗಡಿ ಭಾಗದಲ್ಲಿ ಚೆಕ್ಪೋಸ್ಟ್ಗಳನ್ನು ತೆರೆದಿರುವ ಪೊಲೀಸರು ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ.

ಬರೋಬ್ಬರಿ 5 ಕೋಟಿ ಮೌಲ್ಯದ ದಾಖಲೆ ಇಲ್ಲದ ಚಿನ್ನಾಭರಣ ವಶಕ್ಕೆ
ಧಾರವಾಡ: ಸೂಕ್ತ ದಾಖಲೆಗಳಿಲ್ಲದೇ ಸಾಗಿಸಲಾಗುತ್ತಿದ್ದ ಬರೊಬ್ಬರಿ 5 ಕೋಟಿ ರೂಪಾಯಿ ಮೌಲ್ಯದ 7 ಕೆಜಿ 700 ಗ್ರಾಂ ತೂಕದ ಚಿನ್ನಾಭರಣಗಳನ್ನು ತೇಗೂರು ಚೆಕ್ಪೋಸ್ಟ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಹಣ ವರ್ಗಾವಣೆ ಸೇರಿದಂತೆ ಇತ್ಯಾದಿ ಚಟುವಟಿಕೆಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿರಿಸಿ ಚೆಕ್ ಪೋಸ್ಟ್ ತೆರೆದಿದ್ದಾರೆ. ಧಾರವಾಡ-ಬೆಳಗಾವಿ ರಸ್ತೆಯ ತೇಗೂರು ಚೆಕ್ ಪೋಸ್ಟ್ನಲ್ಲಿ ಇದೀಗ ದಾಖಲೆ ಇಲ್ಲದೇ ಸಾಗಿಸಲಾಗುತ್ತಿದ್ದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ ಕಡೆಯಿಂದ ಬೆಂಗಳೂರಿನ ಕಡೆಗೆ ಬಿವಿಸಿ ಎಂಬ ಲಾಜೆಸ್ಟಿಕ್ ವಾಹನದಲ್ಲಿ ಈ ಚಿನ್ನಾಭಾರಣ ಸಾಗಿಸಲಾಗುತ್ತಿತ್ತು. ಮಲಬಾರ್, ಜೋಯಾಲುಕಾಸ್, ಕಲ್ಯಾಣ ಜ್ಯುವೆಲರ್ಸ್ ಸೇರಿದಂತೆ ಇತರ ಚಿನ್ನಾಭರಣಗಳನ್ನು ಗರಗ ಠಾಣೆ ಪೊಲೀಸರು ವಶಪಡಿಸಿಕೊಂಡು ಆದಾಯ ಮತ್ತು ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications