ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ತವ್ಯ ಲೋಪ ಆರೋಪ: ಪಿಎಸ್ಐ ಸಹಿತ 8 ಪೊಲೀಸ್ ಪೇದೆಗಳು ಸಸ್ಪೆಂಡ್

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ನವೆಂಬರ್ 29: ಕರ್ತವ್ಯ ಲೋಪ ಆರೋಪದಡಿಯಲ್ಲಿ ಓರ್ವ ಪಿಎಸ್ಐ ಸೇರಿದಂತೆ 8 ಜನ ಪೇದೆಗಳನ್ನು ಅಮಾನತ್ತು ಮಾಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಚಿಕ್ಕಮಗಳೂರು ನಗರದ ಬಸವನಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಸುಖೇತ್ ಸೇರಿದಂತೆ ಪೊಲೀಸ್ ಪೇದೆಗಳಾದ ಯುವರಾಜ್, ಲಕ್ಷ್ಮಣ್, ಪ್ರದೀಪ್ ಎಂಬುವರನ್ನು ಕರ್ತವ್ಯ ಲೋಪ ಆರೋಪದಡಿಯಲ್ಲಿ ಅಮಾನತ್ತು ಮಾಡಲಾಗಿದೆ.

 Chikkamagaluru: 8 Police Constables Suspended Including PSI

ಸಿಎಂ ಯಡಿಯೂರಪ್ಪಗೆ ದತ್ತಾತ್ರೇಯನ ಶಾಪ: ಗಂಗಾಧರ್ ಕುಲಕರ್ಣಿಸಿಎಂ ಯಡಿಯೂರಪ್ಪಗೆ ದತ್ತಾತ್ರೇಯನ ಶಾಪ: ಗಂಗಾಧರ್ ಕುಲಕರ್ಣಿ

ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋದಡಿಯಲ್ಲಿಯೇ ಆಲ್ದೂರು ಪೊಲೀಸ್ ಪೇದೆಗಳಾದ ಶಶಿಧರ್, ಸ್ವಾಮಿ, ಅರುಣ್ ಕುಮಾರ್, ನವೀನ್ ಎಂಬುವರನ್ನು ಅಮಾನತ್ತು ಮಾಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

 Chikkamagaluru: 8 Police Constables Suspended Including PSI

ಅಮಾನತ್ತುಗೊಂಡ ಚಿಕ್ಕಮಗಳೂರು ನಗರದ ಬಸವನಹಳ್ಳಿ ಪೊಲೀಸರು, ಗಾಂಜಾ ಕೇಸ್ ಫಿಕ್ಸ್ ಮಾಡುವುದಾಗಿ ಬೆದರಿಸಿ ಸ್ಥಳೀಯ ಇಬ್ಬರಿಂದ 3 ಲಕ್ಷದ 40 ಸಾವಿರ ರುಪಾಯಿ ಹಣ ಪಡೆದಿದ್ದರು ಎನ್ನಲಾಗಿದೆ. ಮತ್ತೊಂದು ಕಡೆ ಆಲ್ದೂರು ಪೊಲೀಸರು ಸಹ ಹೋಂ ಸ್ಟೇ ಮಾಲೀಕನಿಗರಿಸಿ ಬೆದರಿಸಿ ಲಂಚ ಪಡೆದಿದ್ದರು ಎಂದು ತಿಳಿದುಬಂದಿದೆ.

English summary
Chikkamagaluru district senior police officer said 8 Police Constables, including a PSI, have been suspended on charges of breach of duty.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X