ಕೊರೊನಾ ವೈರಸ್ ಮಧ್ಯೆ ಮುಳ್ಳಯ್ಯನಗಿರಿಗೆ ಹರಿದು ಬಂದ ಪ್ರವಾಸಿಗರು
ಚಿಕ್ಕಮಗಳೂರು, ಜೂನ್ 28: ಕೊರೊನಾ ವೈರಸ್ ಸೋಂಕು ಹರಡುವಿಕೆಯ ಈ ಸಂದರ್ಭದಲ್ಲಿ ಶನಿವಾರ ಹಾಗೂ ಭಾನುವಾರ ಸೇರಿದಂತೆ ಪ್ರತಿದಿನವೂ ಚಿಕ್ಕಮಗಳೂರು ಜಿಲ್ಲೆಗೆ ಸಾವಿರಾರು ಪ್ರವಾಸಿಗರು ರಾಜ್ಯ, ಹೊರರಾಜ್ಯಗಳಿಂದ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಭಜರಂಗದಳ, ಶ್ರೀರಾಮ ಸೇನೆ, ವಂದೇ ಮಾತರಂ ಸಂಘಟನೆಯ ವತಿಯಿಂದ ಶುಕ್ರವಾರ ಟೂರಿಸ್ಟ್ ಗೋ ಬ್ಯಾಕ್ ಅಭಿಯಾನ ನಡೆಸಲಾಯಿತು.
ಪ್ರಸಿದ್ಧ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಪೀಠ, ಹೊನ್ನಮ್ಮನಹಳ್ಳ, ದೇವಿರಮ್ಮನ ದೇವಸ್ಥಾನಕ್ಕೆ ಸಾಗುವ ರಸ್ತೆಯಲ್ಲಿ ನಿಂತು ಪ್ರವಾಸಿಗರೇ, ಸ್ವರ್ಗದಂತಹ ಚಿಕ್ಕಮಗಳೂರನ್ನು ನರಕ ಮಾಡಬೇಡಿ, ನಮ್ಮ ಊರಿಗೆ ಬರಬೇಡಿ, ಸೇವ್ ಚಿಕ್ಕಮಗಳೂರು ಸೇರಿದಂತೆ ವಿವಿಧ ಸ್ಲೋಗನ್ ಗಳನ್ನು ಒಳಗೊಂಡ ಪ್ಲೇ ಕಾರ್ಡ್ ಗಳನ್ನು ಪ್ರದರ್ಶನ ಮಾಡುವ ಮೂಲಕ ಪ್ರವಾಸಿಗರೇ ಕೆಲದಿನಗಳ ಕಾಲ ಚಿಕ್ಕಮಗಳೂರು ಕಡೆಗೆ ಬರಬೇಡಿ ಎಂದು ಪ್ರತಿಭಟನೆ ಮಾಡಿದರು.

ಈ ವೇಳೆ ರಾಷ್ಟ್ರೀಯ ಭಜರಂಗದ ರಾಜ್ಯ ಪ್ರಮುಖ ತುಡುಕೂರು ಮಂಜು ಮಾತನಾಡಿ, ಲಾಕ್ ಡೌನ್ ಸಡಿಲಿಕೆಯ ನಂತರ ಜಿಲ್ಲೆಗೆ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಪ್ರವಾಸಿಗರು ಎಲ್ಲೆಂದರಲ್ಲಿ ಊಟ, ತಿಂಡಿ ಮಾಡಿ ಪ್ಲಾಸ್ಟಿಕ್ ಹಾಕುತ್ತಿದ್ದಾರೆ ಎಂದರು.

ಜೊತೆಗೆ ಹೋಟೆಲ್ ಗಳಿಗೆ ಹೋಗುತ್ತಿದ್ದು, ಕೊರೊನಾ ವೈರಸ್ ನಿಯಮವನ್ನು ಪಾಲಿಸುತ್ತಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಪ್ರವಾಸಿಗರು ಇದನ್ನು ಅರಿತು ಪ್ರವಾಸ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications